ಮೊದಲ ಬಾರಿಗೆ ಶಾಸಕಿಯಾಗಿ ದೆಹಲಿ ಮುಖ್ಯಮಂತ್ರಿ ಹುದ್ದೆಗೇರಿದ ರೇಖಾ ಗುಪ್ತಾ; ಯಾರಿವರು?

Date:

ಬಿಜೆಪಿಯಿಂದ ಮೂರು ಬಾರಿ ಮುನ್ಸಿಪಲ್ ಕೌನ್ಸಿಲರ್ ಆಗಿದ್ದ ರೇಖಾ, ಶಾಲಿಮಾರ್ ಬಾಗ್‌ನ ಚೊಚ್ಚಲ ಶಾಸಕಿಯಾಗಿ ಗೆದ್ದು, ಈಗ ದೆಹಲಿಯ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ...

ದೆಹಲಿಯ ಶಾಲಿಮಾರ್ ಬಾಗ್‌ನ ಚೊಚ್ಚಲ ಶಾಸಕಿ ರೇಖಾ ಗುಪ್ತಾ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ರೇಖಾ ಗುಪ್ತಾ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ, ಕೇಂದ್ರಾಡಳಿತ ಪ್ರದೇಶವನ್ನು ಮುನ್ನಡೆಸಲಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದು, ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ. ಬುಧವಾರ ಸಭೆ ಬಿಜೆಪಿಯು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಮುಖ್ಯಮಂತ್ರಿಯಾಗಿ ಐವತ್ತರ ಹರೆಯದ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಿದೆ. ವಿದ್ಯಾರ್ಥಿಯಾಗಿದ್ದ ದಿನಗಳಿಂದಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದ, ಬಿಜೆಪಿಯಿಂದ ಮೂರು ಬಾರಿ ಮುನ್ಸಿಪಲ್ ಕೌನ್ಸಿಲರ್ ಆಗಿದ್ದ ರೇಖಾ ಅವರದು ಅಚ್ಚರಿಯ ಆಯ್ಕೆ ಎಂದು ಭಾವಿಸಲಾಗಿದ್ದರೂ, ಅವರೇ ಸಿಎಂ ಎಂಬ ಬಗ್ಗೆ ಕಳೆದ ಎರಡು ವಾರಗಳಿಂದ ಭಾರೀ ಚರ್ಚೆ ನಡೆಯುತ್ತಿತ್ತು. ಇದೀಗ, ಅವರು ರಾಮ್‌ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬುಧವಾರ ರಾತ್ರಿ ತಮ್ಮ ಆಯ್ಕೆಯ ಬಗ್ಗೆ ಮಾತನಾಡಿದ ರೇಖಾ, ತಮಗೆ ಉನ್ನತ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಪಕ್ಷದ ಉನ್ನತ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ದೆಹಲಿಯ ಪ್ರತಿಯೊಬ್ಬ ನಾಗರಿಕರ ಕಲ್ಯಾಣ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತೇನೆ. ದೆಹಲಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಕೆಲಸ ಮಾಡಲು ಸಂಪೂರ್ಣವಾಗಿ ಬದ್ಧಳಾಗಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಹಾಗೆ, ರೇಖಾ ಗುಪ್ತಾ ಮೂಲತಃ ದೆಹಲಿಯವರಲ್ಲ. ಅವರು ದೆಹಲಿ ಪಕ್ಕದ ಹರಿಯಾಣ ರಾಜ್ಯದವರು. ಅವರು ಹುಟ್ಟಿದ್ದು ಹರಿಯಾಣದ ಜಿಂದ್‌ ಜಿಲ್ಲೆಯ ಜುಲಾನಾ ಪಟ್ಟಣದಲ್ಲಿ. ಅವರ ತಂದೆ ಜೈ ಭಗವಾನ್ ಅವರು ಬ್ಯಾಂಕ್‌ ಆಫ್‌ ಇಂಡಿಯಾದ ವ್ಯವಸ್ಥಾಪಕರಾಗಿದ್ದರು. ಅವರು 1972-73ರಲ್ಲಿ ಕರ್ತವ್ಯದ ಮೇಲೆ ದೆಹಲಿಗೆ ಬಂದು ನೆಲೆಸಿದರು. ಅಂದಿನಿಂದ, ರೇಖಾ ಅವರಿಗೆ ದೆಹಲಿಯೇ ತವರೂರು ಆಯಿತು.

ದೆಹಲಿಯ ತ್ರಿನಗರದಲ್ಲಿ ಶಾಲಾ ಶಿಕ್ಷಣ ಪಡೆದ ರೇಖಾ ಗುಪ್ತಾ, ದೌಲತ್ರಾಮ್ ಕಾಲೇಜಿನಲ್ಲಿ ಬಿ.ಕಾಮ್‌ ಪದವಿ ಪಡೆದರು. ಎಲ್‌ಎಲ್‌ಬಿ ಪದವಿಯನ್ನೂ ಮುಗಿಸಿದರು. 1998ರಲ್ಲಿ ಉದ್ಯಮಿ ಮನೀಶ್‌ ಅವರನ್ನು ವಿವಾಹವಾದರು. ಮನೀಶ್‌ ಅವರೂ ಕೂಡ ಹರಿಯಾಣದ ಭಿವಾನಿ ಜಿಲ್ಲೆಯ ಬೋಂಡ್‌ ಪಟ್ಟಣದವರು. ಈ ದಂಪತಿಗಳು ಹಲವು ವರ್ಷಗಳಿಂದ ದೆಹಲಿಯ ಶಾಲಿಮಾರ್ ಬಾಗ್‌ನ ಎಪಿ ಬ್ಲಾಕ್‌ನಲ್ಲಿ ವಾಸಿಸುತ್ತಿದ್ದಾರೆ.

ರೇಖಾ ಅವರು ಕಾಲೇಜು ಶಿಕ್ಷಣ ಪಡೆಯುವಾಗಲೇ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದರು. ನಂತರ, ಆರ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಂಡಿದ್ದರು. 1996ರಲ್ಲಿ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿಯೂ ಆಯ್ಕೆಯಾಗಿದ್ದರು. ರಾಜಕೀಯದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇದನ್ನು ಓದಿದ್ದೀರಾ?: ಅಮೆರಿಕದಿಂದ ಕೈಕೋಳ ತೊಟ್ಟು ಬಂದ ಭಾರತೀಯರು ಬಿಚ್ಚಿಟ್ಟ ಮೂರು ಸಂಗತಿಗಳಿವು!

ಆರ್‌ಎಸ್‌ಎಸ್‌ ಹಿನ್ನೆಲೆಯ ಕಾರಣಕ್ಕಾಗಿ ಅವರಿಗೆ ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವೂ ದೊರೆಯಿತು. ಮೂರು ಬಾರಿ ಪಾಲಿಕೆಯ ಸದಸ್ಯೆಯಾಗಿ ಬಿಜೆಪಿಯಿಂದ ಚುನಾಯಿತರಾಗಿದ್ದರು. 2022ರಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಾಗ, ರೇಖಾ ಗುಪ್ತಾ ಅವರನ್ನು ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ, ಎಎಪಿ ಬಹುಮತ ಪಡೆದು, ಆಡಳಿತ ರಚಿಸಿದ್ದರಿಂದ, ರೇಖಾ ಗುಪ್ತಾ ಅವರಿಗೆ ಮೇಯರ್ ಹುದ್ದೆ ಕೈತಪ್ಪಿತ್ತು. ಅವರು ಪಾಲಿಕೆ ಸದಸ್ಯೆಯಾಗಿದ್ದಾಗ, ಸಭೆಯೊಂದರಲ್ಲಿ ಸ್ಟೇಜ್ ಮೇಲೆ ನುಗ್ಗಿ, ವೇದಿಕೆಯ ಮೈಕ್‌-ಡಯಾಸ್‌ಗಳನ್ನು ಧ್ವಂಸಗೊಳಿಸಿ ಸುದ್ದಿಯಾಗಿದ್ದರು.

ಇತ್ತೀಚೆಗೆ ನಡೆದ 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಪಡೆದ ರೇಖಾ ಗುಪ್ತಾ ಅವರು ಶಾಲಿಮಾರ್ ಬಾಗ್‌ ಕ್ಷೇತ್ರದಲ್ಲಿ ಸ್ಪರ್ಧಿಸಿ, ತಮ್ಮ ಎದುರಾಳಿ, ಮೂರು ಬಾರಿಯ ಎಎಪಿ ಶಾಸಕಿ ಬಂದಾನ ಕುಮಾರಿ ಅವರನ್ನು 29,595 ಮತಗಳ ಅಂತರದಿಂದ ಸೋಲಿಸಿದರು. ವಿಧಾನಸಭಾ ಚುನಾವಣೆಯ ಮೊದಲ ಸ್ಪರ್ಧೆಯಲ್ಲೇ ಗೆಲುವು ಸಾಧಿಸಿದರು.

ಇದೀಗ, ಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿದ್ದಾರೆ. ದೆಹಲಿ ರಾಜಕೀಯದಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ನಂತರ ರೇಖಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ.

ಇದನ್ನು ಓದಿದ್ದೀರಾ?: ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?

ಮಾತ್ರವಲ್ಲದೆ, ಮೂಲತಃ ಹರಿಯಾಣ ರಾಜ್ಯದವರಾಗಿ, ದೆಹಲಿಯ ಮುಖ್ಯಮಂತ್ರಿ ಹುದ್ದೆ ಪಡೆದವರಲ್ಲಿ ಮೂರನೆಯವರಾಗಿದ್ದಾರೆ. ಈ ಹಿಂದೆ, ಹರಿಯಾಣದ ಅಂಬಾಲ ಜಿಲ್ಲೆಯವರಾದ ಸುಷ್ಮಾ ಸ್ವರಾಜ್, 1998ರಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದರು. ಆ ನಂತರ, ಹರಿಯಾಣದ ಭಿವಾನಿ ಜಿಲ್ಲೆಯ ಮಂಡಿ ಪಟ್ಟಣದವರಾದ ಅರವಿಂದ್‌ ಕೇಜ್ರಿವಾಲ್ 2013ರಿಂದ 2024ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದರು. ಇದೀಗ, ಹರಿಯಾಣದವರೇ ಆದ ರೇಖಾ ಅವರು ಮುಖ್ಯಮಂತ್ರಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...