ಆಹಾರ ಕಲಬೆರಕೆ | ಗುಜರಾತ್‌ನಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ ಶಾಸಕ

Date:

ಗುಜರಾತ್‌ನಲ್ಲಿ ವ್ಯಾಪಕವಾಗಿ ಆಹಾರ ಕಲಬೆರಕೆ ನಡೆಯುತ್ತಿದೆ. ಗುಜರಾತ್ ಆರೋಗ್ಯ ವ್ಯವಸ್ಥೆಯು ‘ತಟ್ಟೆಯಲ್ಲಿ ವಿಷ’ ಇರುವುದನ್ನು ಕಣ್ಮುಚ್ಚಿ ಕುಳಿತಿದೆ ಎಂದು ಬಿಜೆಪಿ ಶಾಸಕ ಕುಮಾರ್ ಕನಾನಿ ಆರೋಪಿಸಿದ್ದಾರೆ.

ಮಾಜಿ ಆರೋಗ್ಯ ಸಚಿವರಾಗಿರುವ ಕನಾನಿ ಅವರು ಹಾಲಿ ಆರೋಗ್ಯ ಸಚಿವ ಪ್ರಫುಲ್ ಪನ್ಸೇರಿಯಾ ಅವರಿಗೆ ಕನಾನಿ ಪತ್ರ ಬರೆದಿದ್ದಾರೆ. “ಆಹಾರ ಕಲಬೆರಕೆಯು ರಾಜ್ಯಾದ್ಯಂತ ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ. ಆದರೂ, ಗುಜರಾತ್ ಆಡಳಿತವು ‘ಮೂಕ ಪ್ರೇಕ್ಷಕ’ನಂತೆ ಕುಳಿತಿದೆ. ಆಹಾರದಲ್ಲಿ ವಿಷ ಬೆರೆಸುವವರು ಭಯೋತ್ಪಾದಕರಿಗಿಂತ ಕಡಿಮೆಯಿಲ್ಲ. ಅವರು ಪ್ರತಿದಿನ ಅಮಾಯಕರನ್ನು ಕೊಲ್ಲುತ್ತಿದ್ದಾರೆ. ಆಹಾರ ಕಲಬೆರಕೆ ಮಾಫಿಯಾಗಳ ವಿರುದ್ಧ ಕಾನೂನು ಮತ್ತು ಕಠಿಣ ಕ್ರಮ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಜನರ ಆಹಾರದಲ್ಲಿ ವಿಷ ಬೆರೆಸುವುದನ್ನು ಗಮನಿಸದೆ ವ್ಯವಸ್ಥೆಯು ಕುರುಡನಂತೆ ವರ್ತಿಸುತ್ತದೆ. ಆಹಾರ ಕಲಬೆರಕೆಯ ಮೂಲಕ ಲಕ್ಷಾಂತರ ಜನರಿಗೆ ವಿಷವಿಕ್ಕುತ್ತಿರುವ ಜನರು ಯಾವುದೇ ಪರಿಣಾಮಗಳ ಭಯವಿಲ್ಲದೆ, ಮುಕ್ತವಾಗಿ ಮಾಫಿಯಾ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಕಲಿ ತುಪ್ಪ, ನಕಲಿ ಪನೀರ್, ಕಲುಷಿತ ಮಸಾಲೆಗಳು ಹಾಗೂ ಕಲಬೆರಕೆ ಎಣ್ಣೆಗಳು ಗುಜರಾತ್‌ನ ಮಾರುಕಟ್ಟೆಗೆ ಪ್ರವಾಹದಂತೆ ಲಗ್ಗೆ ಇಡುತ್ತಿವೆ. ಸಣ್ಣ ಡೈರಿಗಳು ಮತ್ತು ದಿನಸಿ ಅಂಗಡಿಗಳ ಮೂಲಕ ದೂರದ ಹಳ್ಳಿಗಳನ್ನು ತಲುಪುತ್ತಿವೆ” ಎಂದು ಕನಾನಿ ಹೇಳಿದ್ದಾರೆ.

“ಆಹಾರವನ್ನು ಕಲಬೆರಕೆ ಮಾಡುವವರು ಅಥವಾ ನಕಲಿ ಔಷಧಿಗಳನ್ನು ತಯಾರಿಸುವವರಿಗೆ ಯಾವುದೇ ಭಯವಿಲ್ಲ. ಕಲಬೆರಕೆ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ವರದಿಗಳು ಆ ಆಹಾರಗಳು ನಕಲಿ ಎಂದು ಸಾಬೀತುಪಡಿಸುತ್ತವೆ. ಆದರೆ, ಅವರಿಗೆ ಟೋಕನ್ ರೀತಿಯಲ್ಲಿ ದಂಡ ವಿಧಿಸಲಾಗುತ್ತದೆ. ಅವರು ಕಡಿಮೆ ಮೊತ್ತದ ದಂಡ ಪಾವತಿಸಿ, ತಮ್ಮ ಕೃತ್ಯಗಳನ್ನು ಮುಂದುವರೆಸುತ್ತಿದ್ದಾರೆ” ಎಂದು ಕನಾನಿ ದೂರಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ನಿತೀಶ್ ಕುಮಾರ್ ಮತ್ತು ಬಿಜೆಪಿಯ ಸ್ವಯಂ ಸೋಲು

“ಮಾಫಿಯಾವನ್ನು ತಡೆಯಲು ಕೇವಲ ಆಡಳಿತಾತ್ಮಕ ದಂಡಗಳು ವಿಫಲವಾಗಿವೆ. ಕಠಿಣ ಶಿಕ್ಷೆಗಳು ಮತ್ತು ಕಾನೂನುಗಳನ್ನು ಜಾರಿಗೆ ತರಬೇಕು. ಆ ಮೂಲಕ, ಕಲಬೆರಕೆ ಮಾಫಿಯಾವನ್ನು ಬಗ್ಗುಬಡಿಯಬೇಕು” ಎಂದು ಒತ್ತಾಯಿಸಿದ್ದಾರೆ.

“ನಾನು ನಿಮ್ಮನ್ನು (ಪನ್ಸೇರಿಯಾ) ನಂಬುತ್ತೇನೆ. ನೀವು ಪ್ರಾಮಾಣಿಕರು, ವಿದ್ಯಾವಂತರು ಹಾಗೂ ಕೆಲಸ ಮಾಡುವ ಇಚ್ಛೆ ಹೊಂದಿರುವವರು. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ನೀವು ಕಠಿಣ ಕಾನೂನನ್ನು ತರಬಹುದು ಮತ್ತು ಅದರ ಸಂಪೂರ್ಣ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಬಹುದು ಎಂಬ ಭರವಸೆ ನನ್ನಲ್ಲಿ ಮತ್ತು ಜನರಲ್ಲಿದೆ” ಎಂದು ಹೇಳಿದ್ದಾರೆ.

ಕಲಬೆರಕೆ ಆಹಾರ ಪದಾರ್ಥಗಳು ಕ್ಯಾನ್ಸರ್, ಉಸಿರಾಟದ ಕಾಯಿಲೆ ಹಾಗೂ ದೀರ್ಘಕಾಲದ ಹೊಟ್ಟೆಯ ಕಾಯಿಲೆಗಳಿಗೆ ಕಾರಣವಾಗಬಹುದು. ಕೆಲವೊಮ್ಮೆ ಸಾವಿಗೂ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಆದರೆ, ನ್ಯಾಯಾಲಯದಲ್ಲಿ ನೇರ ಅಪರಾಧವನ್ನು ಸಾಬೀತುಪಡಿಸುವುದು ಕಷ್ಟಕರವಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...