ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು

Date:

ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ʼಲೋಕಸಭೆ ಎಲೆಕ್ಷನ್‌ಗೆ ಸ್ಪರ್ಧೆ ಮಾಡುವಷ್ಟು ಆರ್ಥಿಕ ಶಕ್ತಿ ಇಲ್ಲʼ ಅನ್ನೋ ಹೇಳಿಕೆಗೆ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ತಿರುಗೇಟು ನೀಡಿದ್ದಾರೆ. ‘ಚುನಾವಣೆಗೆ ಜನರ ಬೆಂಬಲ ಬೇಕು. ಹಣವಲ್ಲ’ ಎಂದು ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್‌ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿಕೆ ನೀಡಿದ ಬಳಿಕ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಪ್ರತಿಕ್ರಿಯೆ ನೀಡಿದ್ದು, “ಚುನಾವಣೆಗೆ ನಿಲ್ಲಲು ಹಣ ಮಾತ್ರ ಅಲ್ಲ. ಜನರ ಬೆಂಬಲವೂ ಬೇಕು. ನಿರ್ಮಲಾ ಸೀತಾರಾಮನ್‌ಗೆ ಜನರ ಬೆಂಬಲ ಇಲ್ಲ. ಹೀಗಾಗಿಯೇ ಸುಖಾಸುಮ್ಮನೆ ಇಲ್ಲಸಲ್ಲದ ಹೇಳಿಕೆ ಕೊಡುತ್ತಿದ್ದಾರೆ. ದೇಶದ ಅರ್ಥ ಸಚಿವೆ ಜನರ ಮನ್ನಣೆ ಗಳಿಸಿಲ್ಲ. ಹಾಗಾಗಿ, ಸಣ್ಣಪುಟ್ಟ ಕಾರಣವೊಡ್ಡಿ ಚುನಾವಣೆಗೆ ಸ್ಪರ್ಧೆ ಮಾಡದೆ ತಾವೊಬ್ಬ ಅಸಮರ್ಥ ನಾಯಕಿ ಎಂಬುದನ್ನು ಪದೇ ಪದೆ ಸಾಬೀತುಪಡಿಸುತ್ತಿದ್ದಾರೆ” ಎಂದು ಟೀಕಿಸಿದರು.

“ನಿರ್ಮಲಾ ಸೀತಾರಾಮನ್‌ ಬಹುಶಃ ಚುನಾವಣೆ ರಾಜಕೀಯದಿಂದ ಹೆದರಿ ಓಡಿಹೋಗ್ತಿದ್ದಾರೆ. ಜನರಿಂದ ಆಯ್ಕೆಯಾದ ಪ್ರತಿನಿಧಿಯೇ ನಿಜವಾದ ಪ್ರತಿನಿಧಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎನಿಸಿಕೊಳ್ಳಬೇಕಾದರೆ ಜನರಿಂದ ಆಯ್ಕೆಯಾಗಿ ಅಧಿಕಾರ ನಡೆಸಬೇಕು. ನಿರ್ಮಿಲಾ ಸೀತಾರಾಮನ್ ದೇಶದ ಅರ್ಥ ವ್ಯವಸ್ಥೆಯನ್ನೇ ತನ್ನ ತಪ್ಪು ನಿರ್ಧಾರಗಳಿಂದ ಹಾಳು ಮಾಡಿದ್ದಾರೆ” ಎಂದು ಸರವಣನ್ ಅಣ್ಣಾ ದೊರೈ ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣಕಾಸು ಸಚಿವರ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸಿರುವುದನ್ನು ಅವರು ಗ್ರಹಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಜನರ ನೀತಿಗಳು ಮತ್ತು ಸಮಸ್ಯೆಗಳನ್ನು ಪರಿಹರಿಸಿದ ರೀತಿ ಖಂಡಿತವಾಗಿಯೂ ಅಸಮಾಧಾನವನ್ನು ತಂದುಕೊಟ್ಟಿತು. ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವರ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸಿದ್ದರು. ಬಹುಶಃ ಇದನ್ನು ಗ್ರಹಿಸಿರುವ ಹಣಕಾಸು ಸಚಿವೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಭಾರಿ ಮೊತ್ತದ ಹಣವನ್ನು ಸುಲಿಗೆ ಮಾಡಿದೆ ಎಂದು ಆರೋಪಿಸಿದ ಅಣ್ಣಾದೊರೈ, “ಚುನಾವಣೆಗೆ ಖರ್ಚು ಮಾಡಲು ಅಭ್ಯರ್ಥಿಯ ಹಣ ಬಳಸಬೇಕಿಲ್ಲ. ಅದು ಪಕ್ಷದ್ದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಉಲ್ಲಂಘನೆ | ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತದೆಯೇ; ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

“ಬಿಜೆಪಿ 8,250 ಕೋಟಿ ರೂ.ಗಳನ್ನು ಸುಲಿಗೆ ಮಾಡಿದೆ. ಬಿಜೆಪಿ ಬ್ಯಾಂಕ್ ಖಾತೆಯಲ್ಲಿ 6,000 ಕೋಟಿ ರೂ. ಇದೆ. ಅಲ್ಲದೆ ನಿರ್ಮಲಾ ಸೀತಾರಾಮನ್ ಸಂಪುಟದಲ್ಲಿ ಉನ್ನತ ಸಚಿವರಾಗಿದ್ದಾರೆ. ಬಿಜೆಪಿ ಏಕೆ ಅವರಿಗೆ ಪ್ರಾಯೋಜಕತ್ವ(ಸ್ಪಾನ್ಸರ್‌) ನೀಡಬಾರದು?” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...