ಹರಿಯಾಣ | ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ; ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯ ಪರಿಣಾಮ: ಮಲ್ಲಿಕಾರ್ಜುನ ಖರ್ಗೆ

Date:

ಇತ್ತೀಚೆಗೆ ಹರಿಯಾಣದಲ್ಲಿ ನಡೆದ ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯು ಆಡಳಿತಾರೂಢ ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯಡಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ.

ಆಡಳಿತದಲ್ಲಿರುವ ಜಾತಿ ತಾರತಮ್ಯ, ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಾತಿನಿಧ್ಯ, ದೌರ್ಜನ್ಯ ಮತ್ತು ನಿಂದನೆಯ ವಿರುದ್ಧವಾಗಿ ಧ್ವನಿ ಎತ್ತಿದ್ದ, ಈ ಸಂಬಂಧ ದೂರು ದಾಖಲಿಸಿದ್ದ ಹರಿಯಾಣದ ಐಪಿಸ್‌ ಅಧಿಕಾರಿ ಪೂರಣ್ ಕುಮಾರ್ ಅವರು ಇತ್ತೀಚೆಗೆ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಯು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗೆಯೇ ಡೆತ್ ನೋಟ್ ಕೂಡಾ ಬರೆದಿಟ್ಟಿದ್ದಾರೆ. ಹಿರಿಯ ಅಧಿಕಾರಿಗಳಿಂದ ಕಿರುಕುಳದ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, “ಬಿಜೆಪಿಯ ಮನುವಾದಿ ತಂತ್ರವು ದೇಶದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಹಿಂದುಳಿದ ವರ್ಗದ ಜನರಿಗೆ ಶಾಪವಾಗಿದೆ. ಹರಿಯಾಣದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಅವರ ಬಲವಂತದ ಆತ್ಮಹತ್ಯೆಯು ನಮ್ಮನ್ನು ಕೇವಲ ಸ್ತಬ್ಧರನ್ನಾಗಿಸುವ ಪ್ರಕರಣವಲ್ಲ. ಬದಲಾಗಿ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ. ಅಧಿಕಾರಿಯ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ತಿಳಿಸಿದ್ದಾರೆ.

“ಕಳೆದ 11 ವರ್ಷದ ಅವಧಿಯಲ್ಲಿ ದೇಶದಲ್ಲಿ ಬಿಜೆಪಿಯು ಮನುವಾದಿ ಮನಸ್ಥಿತಿಯನ್ನು ಜನರಲ್ಲಿ ಎಷ್ಟು ಗಾಢವಾಗಿ ಬೇರೂರುವಂತೆ ಮಾಡಿದೆ ಎಂದರೆ ಎಡಿಜಿಪಿ ರ‍್ಯಾಂಕ್‌ನ ದಲಿತ ಅಧಿಕಾರಿಗಳಿಗೂ ನ್ಯಾಯ ಸಿಗದಂತಹ ಸ್ಥಿತಿಯಿದೆ” ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದೇಶದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಮೆಲೆ ಹಲ್ಲೆ ನಡೆದಿದೆ. ಅದನ್ನು ಬಿಜೆಪಿಯು ಜಾತಿವಾದ ಮತ್ತು ಧರ್ಮದ ಆಧಾರದಲ್ಲಿ ಸರ್ಮಥಿಸಿಕೊಳ್ಳುತ್ತಿದೆ. ಹಾಗಿರುವಾಗ ಸಬ್‌ಕಾ ಸಾಥ್(ಎಲ್ಲರೊಂದಿಗೆ) ಎಂಬ ಬಿಜೆಪಿಯ ಘೋಷಣೆ ಬರೀ ಬಾಯಿ ಮಾತಿಗೆ ಸೀಮಿತ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಸಾವಿರಾರು ವರ್ಷಗಳಿಂದ ಶೋಷಣೆ ಮಾಡುವ ಅಭ್ಯಾಸ ಹೊಂದಿರುವ ಮನುವಾದಿಗಳ ಮಾನಸಿಕತೆಯನ್ನು ಅಷ್ಟು ಶೀಘ್ರದಲ್ಲಿ ಬದಲಾಯಿಸಲು ಸಾಧ್ಯವಿಲ್ಲ. ಆದ್ದರಿಂದಾಗಿ ಹರಿಓಂ ವಾಲ್ಮೀಕಿಯಂತಹ ದಲಿತ ವ್ಯಕ್ತಿಯ ಹತ್ಯೆ ಮಾಡಲಾಗುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಒಂದು ಮಾತೂ ಆಡಲ್ಲ” ಎಂದು ಖರ್ಗೆ ಟೀಕಿಸಿದ್ದಾರೆ.

“ಇದು ಬರೀ ಕೆಲವು ಜನರ ದುರಂತದ ಸ್ಥಿತಿಯಲ್ಲ. ಇದು ಬಿಜೆಪಿ ಮತ್ತು ಸಂಘಪರಿವಾರದಿಂದ ಪೋಷಿಸಲ್ಪಟ್ಟ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ದಲಿತ, ಆದಿವಾಸಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಗೌರವಕ್ಕೆ ಪದೇ ಪದೇ ಧಕ್ಕೆ ತರಲಾಗುತ್ತಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಒಡ್ಡಿರುವ ಅಪಾಯ” ಎಂದೂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...