ಬಿಜೆಪಿ ಸರ್ಕಾರದ ಕೋವಿಡ್ ಅಕ್ರಮ ತನಿಖೆಗೆ ಎಸ್​​ಐಟಿ ರಚನೆ, ಸಚಿವ ಸಂಪುಟ ಸಭೆ ತೀರ್ಮಾನ

Date:

ಕೋವಿಡ್-19 ಅಕ್ರಮದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಆಯೋಗದ ಮಧ್ಯಂತರ ವರದಿ ಮಾಹಿತಿ ಆಧಾರವಾಗಿಸಿಕೊಂಡು ಮುಂದಿನ ತನಿಖೆ ಹಾಗೂ ಕ್ರಮ ವಹಿಸಲು ವಿಶೇಷ ತನಿಖಾ ತಂಡ (ಎಸ್​​ಐಟಿ) ರಚನೆಗೆ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಈ ಸಂಬಂಧ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ”ಮಧ್ಯಂತರ ವರದಿ ಪರಿಶೀಲಿಸಿ ರಾಜ್ಯ ಸರ್ಕಾರ ಎಸ್​​ಐಟಿ ರಚಿಸಲು ತೀರ್ಮಾನಿಸಿದೆ. ವರದಿಯಲ್ಲಿನ ಆಧಾರಗಳು, ವಿಷಯ, ಮಾಹಿತಿಯನ್ನು ಆಧಾರವಾಗಿಸಿ ಮುಂದಿನ ತನಿಖೆ ಹಾಗೂ ಕ್ರಮಕ್ಕಾಗಿ ಎಸ್​ಐಟಿ ರಚಿನೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ” ಎಂದು ತಿಳಿಸಿದರು.

ಅಗತ್ಯಬಿದ್ದರೆ ಎಫ್​ಐಆರ್ ದಾಖಲಿಸಿ ಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಮೈಕಲ್ ಡಿ.ಕುನ್ಹಾ ಆಯೋಗದ ವರದಿ ಮೇಲೆ ಕಂಡು ಬಂದ ಅಕ್ರಮಗಳ ಬಗ್ಗೆ ತನಿಖೆ ಮಾಡಲಾಗುವುದು. ಐಜಿ ನೇತೃತ್ವದಲ್ಲಿ ಎಸ್​​ಐಟಿ ರಚನೆ ಮಾಡಲಾಗುತ್ತದೆ. ಆಯೋಗದ ಮಾಹಿತಿ ಆಧಾರದಲ್ಲಿ ತನಿಖೆ ಮಾಡಲಾಗುವುದು. ಎಸ್​​ಐಟಿ ಆರ್ಥಿಕ ಅಂಶಗಳು ಸೇರಿದಂತೆ ಅಪರಾಧ ಪ್ರಕರಣಗಳನ್ನು ದಾಖಲಿಸಿ ಕ್ರಮ ತೆಗದುಕೊಳ್ಳಲಿದೆ. ಅಗತ್ಯಬಿದ್ದರೆ ವರದಿಯ ಮಾಹಿತಿ ಹೊರತಾಗಿ ಮತ್ತೆ ತನಿಖೆ ಮಾಡಿ, ಎಫ್​ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

”ಕೋವಿಡ್ ವೇಳೆ ರಾಜ್ಯದಲ್ಲಿ ಯಾರು ಅಕ್ರಮ ಮಾಡಿದ್ದಾರೆಯೋ ಅವರ ಮೇಲೆ ಎಫ್ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಸತ್ಯಾನ್ವೇಷಣೆ, ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಂದುವರೆದ ಕ್ರಮವಾಗಿ ಎಸ್ಐಟಿ ರಚನೆ ಮಾಡಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

‘ಕೋವಿಡ್ ವೇಳೆ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ, ಬೇಜವಾಬ್ದಾರಿತನ, ವಂಚನೆ ನಡೆದಿತ್ತು. ಮಾಹಿತಿಗಳನ್ನು ಅದಿಮಿಟ್ಟುಕೊಂಡು, ಕಡತ ಸಿಗದಂತೆ ಮಾಡಲಾಗಿತ್ತು. ಪಿಎಸಿ ಕೆಲಸ ಮಾಡದಂತೆ ನಿಯಂತ್ರಣ ಮಾಡಿದ್ದರು. ಎಲ್ಲಾ ವಿಧಾನಮಂಡಲ ಸಮಿತಿಗಳು ಸಭೆ ಸೇರುವುದಕ್ಕೆ ನಿರ್ಬಂಧ ಹೇರಲಾಗಿತ್ತು.‌ ಪಿಪಿಇ ಕಿಟ್ 330-440 ರೂ. ಲಭ್ಯವಿದ್ದರೆ ಅದನ್ನು ಬಿಟ್ಟು 2,017 ರೂ.ಗೆ ಲಕ್ಷಾಂತರ ಕಿಟ್ ಖರೀದಿ ಮಾಡಲಾಗಿದೆ. ದುಪ್ಪಟ್ಟು ದರದಲ್ಲಿ ಹಾಗೂ ಬ್ಲ್ಯಾಕ್ ಲಿಸ್ಟ್​​ನಲ್ಲಿರುವ ಕಂಪನಿಗಳಿಂದ ಖರೀದಿ ಔಷಧಿ ಮಾಡಲಾಗಿದೆ” ಎಂದು ಆರೋಪಿಸಿದರು.

ಬ್ರಹ್ಮಾಂಡ ಭ್ರಷ್ಟಾಚಾರ

”ಕೋವಿಡ್ 19 ಅಕ್ರಮದ ಸಂಬಂಧ ತನಿಖಾ ಆಯೋಗ ನೇಮಕ ಮಾಡಿತ್ತು. 50,000 ಕಡತವನ್ನು ಆಯೋಗ ಪರಿಶೀಲನೆ ನಡೆಸಿ, ಮಧ್ಯಂತರ ವರದಿ ನೀಡಿದೆ. ಆ ವರದಿಯನ್ನು ಅಧ್ಯಯನ ಮಾಡಲು ಸಂಪುಟ ಉಪಸಮಿತಿ ರಚಿಸಲಾಗಿತ್ತು. ಸಂಪುಟ ಉಪಸಮಿತಿ ಸಭೆಯಲ್ಲಿನ ಚರ್ಚೆಗಳನ್ನು ಸಂಪುಟ ಸಭೆಯಲ್ಲಿ ಮಂಡಿಸಲಾಯಿತು. ಕಂಡುಬಂದ ಬ್ರಹ್ಮಾಂಡ ಭ್ರಷ್ಟಾಚಾರ, ಹಲವಾರು ಅಮಾನವೀಯ ಸಂಗತಿ, ಅಧಿಕಾರಿಗಳು ರಾಜಕೀಯ ನಾಯಕರ ನಿರ್ದೇಶನದ ಮೇರೆಗೆ ತೆಗೆದುಕೊಂಡ ಕ್ರಮಗಳು ಎಂಥವರಿಗೂ ನಡುಕ ಹುಟ್ಟಿಸುವಂತಿದೆ. ಅಂದು ಸರ್ಕಾರ ನಡೆದುಕೊಂಡ ರೀತಿ, ಅಂದಿನ ಮಂತ್ರಿಗಳು, ಸಿಎಂ ತೆಗೆದುಕೊಂಡ ಕ್ರಮಗಳು ಸತ್ಯಾನ್ವೇಷಣೆಗೆ ಅಡ್ಡಿಯಾಗುವ ಕ್ರಮವಾಗಿದೆ” ಎಂದು ಹೆಚ್.ಕೆ.ಪಾಟೀಲ್​ ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...