ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅನ್ನು ಹೊಗಳಿ ‘ಜೈ ಶ್ರೀರಾಮ್’ ಎಂದ ಕುಮಾರಸ್ವಾಮಿ!

Date:

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಡೆಸುತ್ತಿರುವ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಲ್ಲಡ್ಕ ಪ್ರಭಾಕರ್ ಭಟ್ ಅನ್ನು ಹೊಗಳಿದ್ದಲ್ಲದೇ ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಮಾತು ಮುಗಿಸಿದ ಪ್ರಸಂಗ ನಡೆದಿದೆ.

“ಹಿಂದೆ ಟೀಕೆ ಮಾಡಿದ್ದೆ, ಈಗ ಮನಸ್ಸು ಪರಿವರ್ತನೆ ಮಾಡಿದ್ದೇನೆ. ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹೇಗೆ ಎಂದು ಕೆಲವರು ಯೋಚಿಸಬಹುದು. ಅಂದು ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ನಾನು ತಪ್ಪು ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.

“ಈ ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣ. ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಉತ್ತಮ ಶಿಸ್ತಿನ ಬದುಕನ್ನು ಇಲ್ಲಿ ಕಲಿಸಿ ಕೊಡಲಾಗುತ್ತದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದಲ್ಲಿ ದೊಡ್ಡ ನಷ್ಟ ಉಂಟಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ” ಎಂದರು.

“ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದ್ದಾಗ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತೀದ್ದೀರಿ” ಎಂದು ಹೇಳಿದರು.

ತನ್ನ ಮಾತಿನ ಕೊನೆಯಲ್ಲಿ ಕುಮಾರಸ್ವಾಮಿ ಅವರು “ಜೈ ಶ್ರೀರಾಮ್” ಎಂದು ಘೋಷಣೆ ಕೂಗುವ ಎಲ್ಲರ ಹುಬ್ಬೇರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಭಾಗವಹಿಸಿದ್ದರು.

ಕುಮಾರಸ್ವಾಮಿ ಕಾಲೆಳೆದ ನೆಟ್ಟಿಗರು
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಹೊಗಳಿ ಅಟ್ಟಕ್ಕೇರಿಸಿರುವ ಕುಮಾರಸ್ವಾಮಿ ಅವರು, ಈಗ ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲರ್‌ಗಳಿಗೆ ಆಹಾರವಾಗಿದ್ದಾರೆ.

“ಇದೆಲ್ಲವೂ ಜೆಡಿಎಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪರಿಣಾಮವಷ್ಟೇ. ಕುಮಾರಸ್ವಾಮಿ ಬಿಜೆಪಿಯಂತೆ ಹಿಂದುತ್ವದ ಜಪ ಮಾಡ್ತಿದ್ದಾರೆ. ಇವೆಲ್ಲದರ ವ್ಯಾಲಿಡಿಟಿ ಲೋಕಸಭಾ ಚುನಾವಣೆಯ ಫಲಿತಾಂಶ ಬೀಳುವವರೆಗೆ ಮಾತ್ರ. ದಯವಿಟ್ಟು ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಹೆಸರನ್ನು ಜೆಡಿಕೆ ಮಾಡಿ. ಜೆಡಿಎಸ್ ಅಂದರೆ ಜಾತ್ಯಾತೀತ ಜನತಾದಳ, ಜೆಡಿಕೆ ಅಂದರೆ ಜನತಾದಳ ಕೋಮುವಾದ. ಹಾಗಾಗಿ, ಶೀಘ್ರವೇ ಬದಲಾಯಿಸಿ” ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

surya

ಕುಮಾರಸ್ವಾಮಿ ಫೋಟೋ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ಸೂರ್ಯ ಮುಕುಂದರಾಜ್, “ಅಧಿಕೃತವಾಗಿ ಕುಮಾರಸ್ವಾಮಿ ಅವರನ್ನು ಸಂಘಿಗಳು ಮನೆ ತುಂಬಿಸಿಕೊಂಡಿದ್ದಾರೆ” ಎಂದು ಕಾಲೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...