ಬಿಎಸ್‌ವೈ ವಿರುದ್ಧ ಪೋಕ್ಸೊ | ‘ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಒಳ ಕರಕೊಂಡು ಹೋಗಿದ್ದೆ’: FIRನಲ್ಲಿ ಇರೋದೇನು?

Date:

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬಿಜೆಪಿಯ ಕಾರ್ಯಕರ್ತೆಯೂ ಆಗಿರುವ ಸಂತ್ರಸ್ತ ಬಾಲಕಿಯ ತಾಯಿ ನೀಡಿರುವ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ದಾಖಲಾದರೆ, ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ‌ ಬಂಧಿಸಬೇಕು. ನಂತರ ತನಿಖೆ‌ ನಡೆಸಬೇಕೆಂದು ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಪ್ರಕರಣದ ಎಫ್ಐಆರ್ ಲಭ್ಯವಾಗಿದ್ದು, “ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಒಳ ಕರಕೊಂಡು ಹೋಗಿದ್ದೆ ಎಂದು ಯಡಿಯೂರಪ್ಪ ಹೇಳಿದ್ದರು” ಎಂಬಿತ್ಯಾದಿ ಹಲವಾರು ಅಂಶಗಳನ್ನು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಐಆರ್‌ನಲ್ಲಿರುವ ಅಂಶಗಳೇನು?

ಈ ಹಿಂದೆ ನನ್ನ ಮಗಳ ಮೇಲೆ ಆಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಸಹಾಯ ಕೇಳಲೆಂದು ಫೆ. 2, 2024ರಂದು ನನ್ನ ಮಗಳನ್ನು ಕರೆದುಕೊಂಡು ಯಡಿಯೂರಪ್ಪ ಅವರ ಬಳಿ ಹೋಗಿದ್ದೆ. ನನ್ನ ಮಗಳ ಮೇಲಾಗಿದ್ದ ದೌರ್ಜನ್ಯವನ್ನು ಎಸ್‌ಐಟಿಗೆ ವಹಿಸುವ ವಿಚಾರವಾಗಿ ನೆರವು ಕೇಳಿಕೊಂಡು ಹೋಗಿದ್ದೆ. ಯಡಿಯೂರಪ್ಪನವರನ್ನು ನಾನು ಅಪ್ಪಾಜಿ ಎಂದು ಕರೆಯುತ್ತಿದ್ದೆ. ಅವರ ಮನೆಯಲ್ಲಿ ಅಂದು ಸುಮಾರು ಒಂಭತ್ತು ನಿಮಿಷಗಳ ಕಾಲ ಮಾತನಾಡಿ, ನಮಗೆ ಟೀ ಕೊಡಿಸಿದರು. ನನ್ನ ಮಗಳ ಕೈಯನ್ನು ಹಿಡಿದುಕೊಂಡು ಯಡಿಯೂರಪ್ಪನವರು ಮಾತನಾಡಿಸುತ್ತಿದ್ದಾಗ, ನನ್ನ ಮಗಳು ತಾತ ಎಂದು ಕರೆಯುತ್ತಿದ್ದಳು. ಆ ಬಳಿಕ ಮಗಳೊಂದಿಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಐದು ನಿಮಿಷ ತನ್ನ ರೂಮಿನೊಳಗೆ ಕರೆದುಕೊಂಡು ಹೋಗಿ, ಬಳಿಕ ಲಾಕ್ ಮಾಡಿದ್ದಾರೆ. ರೂಮಿನಲ್ಲಿ ನನ್ನ ಮಗಳು ಹಾಕಿದ್ದ ಶ್ವೆಟರ್‌ನ ಒಳಗೆ ಕೈ ಹಾಕಿ, ಬಲಭಾಗದ ಎದೆಯ ಮೇಲೆ ಕೈ ಹಾಕಿ, ಹಿಚುಕಿದ್ದಾರೆ. ಈ ವೇಳೆ ನನ್ನ ಮಗಳು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಕೂಡ ಹೊರಗೆ ಬರಲು ಯಡಿಯೂರಪ್ಪನವರು ಬಿಡಲಿಲ್ಲ. ಆಮೇಲೆ ಮೆಲ್ಲಗೆ ಯಡಿಯೂರಪ್ಪನವರೇ ಬಾಗಿಲು ತೆರೆದಾಗ, ಮಗಳು ಓಡಿ ಬಂದು ಕೂಡಲೇ ರೂಮಿನೊಳಗೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ಈ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ಯಾಕೆ ಹೀಗೆ ಮಾಡಿದ್ರಿ ಎಂದು ಕೇಳಿದ್ದಕ್ಕೆ, ಅವರು, “ಆಕೆಗೆ(ಮಗಳಿಗೆ) ರೇಪ್ ಆಗಿದೆಯೋ? ಇಲ್ಲವೋ? ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದು ಹೇಳಿರುವುದಾಗಿ ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

“ನಾನು ಪ್ರಶ್ನಿಸಿದಾಗ, ಕೂಡಲೇ ನನ್ನೊಂದಿಗೆ ಯಡಿಯೂರಪ್ಪನವರು ಕ್ಷಮೆಯಾಚಿಸುತ್ತಾ, ನಿಮಗೆ ಮೋಸ ಆಗಿರುವ ಬಗ್ಗೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು. ಅದಕ್ಕೆ ನಾನು ಒಪ್ಪಲಿಲ್ಲ. ಆದರೂ, ಯಡಿಯೂರಪ್ಪನವರು ಇಲ್ಲಿನ ವಿಚಾರವನ್ನು ಹೊರಗೆ ಎಲ್ಲೂ ತಿಳಿಸಬಾರದೆಂದು ನಮ್ಮನ್ನು ತಡೆಯಲು ತುಂಬಾ ಪ್ರಯತ್ನಿದ್ದಾರೆ” ಎಂದು ಆರೋಪಿಸಿದ್ದಾರೆ.

WhatsApp Image 2024 03 15 at 12.01.37 PM
ಎಫ್ಐಆರ್ ಪ್ರತಿ

”ನನ್ನ ಮಗಳಿಗಾದ ಅನ್ಯಾಯಕ್ಕೆ ನ್ಯಾಯ ಕೇಳಲು ಹೋಗಿದ್ದಾಗ ನನ್ನ ಮಗಳಿಗೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಹಾಗಾಗಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಅಪ್ರಾಪ್ತ ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...