ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

Date:

  • ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಮಾಜಿ ಸಚಿವ ತಿರುಗೇಟು
  • ಗೋ ಹತ್ಯೆ ನಿಷೇಧ ಕಾಯ್ದೆ ಕಾಂಗ್ರೆಸ್ ಅವಧಿಯಲ್ಲಿ 1964ರಿಂದಲೂ ಅಸ್ತಿತ್ವದಲ್ಲಿತ್ತು

ಗೋವುಗಳನ್ನು ಏಕೆ ಕಡಿಯಬಾರದು ಎನ್ನುವ ನಿಮ್ಮ ಮನಸ್ಥಿತಿಯೇ ನನಗೆ ವಿಚಿತ್ರವಾಗಿ ಕಾಣಿಸುತ್ತಿದೆ. ಒಂದಿಷ್ಟು ಕಸಾಯಿ ಕಾಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಗೋವುಗಳ ದಾರುಣ ಅಂತ್ಯ ಎಲ್ಲವನ್ನು ನೋಡಿದ ನಂತರ ಮತ್ತೊಮ್ಮೆ ಆಲೋಚನೆ ಮಾಡಿ ಹೇಳಿಕೆ ನೀಡಿ ಎಂದು ಪಶುಸಂಗೋಪನಾ ಇಲಾಖೆ ಮಾಜಿ ಸಚಿವ ಪ್ರಭು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಪ್ರಭು ಚೌಹಾಣ್ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ನಿಜ ಬಣ್ಣವನ್ನು ತೋರಿಸಲು ಪ್ರಾರಂಭಿಸಿದೆ. ಯಾರ ಹೊಟ್ಟೆಯನ್ನು ತುಂಬಲು ಗೋವುಗಳನ್ನು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆ ಕಾಂಗ್ರೆಸ್ ಅವಧಿಯಲ್ಲಿ 1964ರಿಂದಲೂ ಅಸ್ತಿತ್ವದಲ್ಲಿತ್ತು. ಆಗಲೂ ಹಸುವನ್ನು ಕಡಿಯಬಾರದು ಎಂದು ಕಾನೂನಾಗಿತ್ತು. ಆದರೆ, ಆ ಕಾನೂನಿನಲ್ಲಿದ್ದ ಕೆಲ ದುರ್ಬಲವಾದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಗೋಹತ್ಯೆ ನಿಷೇಧ ಕಾಯ್ದೆಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಬಲಪಡಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೇವಲ ರಾಜಕೀಯ ಲಾಭ ನಷ್ಟದ ದೃಷ್ಟಿಯಿಂದ ನೋಡುವ ಬದಲು ಜನಸಾಮಾನ್ಯನ, ರೈತನ ಜೀವನದಲ್ಲಿ ಇರುವ ಅದರ ಭಾವನಾತ್ಮಕ ಸಂಬಂಧದ ಬಗ್ಗೆ ತಿಳಿದುಕೊಂಡು ಮಾತನಾಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಮನೆಯಲ್ಲಿ ಗೋವು ಸಾಕುವುದಿಲ್ಲವೆಂದ ಮಾತ್ರಕ್ಕೆ ಅದರ ಬಗ್ಗೆ ಭಾವನಾತ್ಮಕ ಸಂಬಂಧ ಇರಬಾರದು ಎಂದೇನಿಲ್ಲ. ಅದು ತಾಯಿಯಂತೆ ನಿತ್ಯ ಪೂಜೆಗೊಳಗಾಗುವ ದೈವ. ಅದರ ಸಂರಕ್ಷಣೆ, ಪೋಷಣೆ ಮತ್ತು ಗೋ ತಳಿಗಳ ಅಭಿವೃದ್ಧಿ ಸರ್ಕಾರದ ಮೂಲ ಕರ್ತವ್ಯವಾಗಿರಬೇಕೇ ಹೊರತು ಗೋವುಗಳನ್ನು ಕಡಿಯುವುದಕ್ಕೆ ಪ್ರೇರೇಪಿಸುವುದಲ್ಲ ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಪಶುಸಂಗೋಪನೆ ಸಚಿವ ವೆಂಕಟೇಶ್

ನಮ್ಮ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ಗೋವುಗಳ ಸಂರಕ್ಷಣೆಗೆ ಶ್ರಮ ಪಟ್ಟಿದ್ದೇವೆ. ಪ್ರಾಣಿ ಕಲ್ಯಾಣ ಸಹಾಯವಾಣಿ, ಪ್ರಾಣಿ ಕಲ್ಯಾಣ ಮಂಡಳಿ, ಜಿಲ್ಲೆಗೊಂದು ಗೋಶಾಲೆ, ಪಶು ಚಿಕಿತ್ಸಾ ವಾಹನ ಹೀಗೆ ಗೋ ಸಂರಕ್ಷಣೆಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಗೋವನ್ನು ಒಮ್ಮೆ ವೈಜ್ಞಾನಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅಧ್ಯಯನ ನಡೆಸಿ ನಂತರ ತೀರ್ಮಾನಿಸಿ ಎಂದು ಕಾಂಗ್ರೆಸ್ಸಿನ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...