ಮೋದಿ ನೇತೃತ್ವದ ಹೊಸ ಸರ್ಕಾರದಲ್ಲಿ ಹಿಂದಿನ ಸಚಿವರಿಗೆ ಖೊಕ್!

Date:

ಮೋದಿ ಮೂರನೇ ಅವಧಿಗೆ ಪ್ರಧಾನಿ ಆಗಲಿದ್ದಾರೆ. ಯಾವುದೇ ಪಕ್ಷಕ್ಕೂ ಬಹುಮತವಿಲ್ಲದ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಮೋದಿ ಪ್ರಧಾನಿ ಆಗುತ್ತಿದ್ದಾರೆ. ಬಹುಮತವಿಲ್ಲದ ಬಿಜೆಪಿಗೆ ಸಮ್ಮಿಶ್ರ ಸರ್ಕಾರವನ್ನು ನಡೆಸುವ ಸವಾಲು ಇದೆ. ಅದರಲ್ಲೂ, ಹಿಂದಿನ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದ 19 ಮಂತ್ರಿಗಳು ಹೀನಾಯವಾಗಿ ಸೋಲುಂಡಿದ್ದಾರೆ. ಅವರಲ್ಲಿ, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಆರ್ ಕೆ ಸಿಂಗ್ ಮತ್ತು ಅರ್ಜುನ್ ಮುಂಡಾ ಪ್ರಮುಖರು.

ಈಗ ಮೋದಿ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದೆ. ತಮ್ಮ ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎನ್‌ಡಿಎ ಸರ್ಕಾರವನ್ನು ಮುನ್ನಡೆಸುವ ಸವಾಲು ಮೋದಿ-ಶಾ ಜೋಡಿಗಿದೆ. ಮಿತ್ರ ಪಕ್ಷಗಳು ಸಂಪುಟದಲ್ಲಿ ನಾನಾ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಅವರಿಗೂ ಅವಕಾಶ ಕೊಡಬೇಕಾಗಿದೆ. ಹೀಗಾಗಿ, ಸೋತವರು ಮತ್ತು ಕಡಿಮೆ ಅಂತರದಲ್ಲಿ ಗೆದ್ದ ಹಿಂದಿನ ಸರ್ಕಾರದ ಮಂತ್ರಿಗಳನ್ನು ಈ ಬಾರಿಯ ಸಂಪುಟದಲ್ಲಿ ಕೈಬಿಟ್ಟು, ಹೊಸಬರಿಗೆ ಮಣೆ ಹಾಕಲು ಬಿಜೆಪಿ ಮುಂದಾಗಿದೆ ಎಂದು ವರದಿಯಾಗಿದೆ.

ಹೊಸ ಸಚಿವ ಸಂಪುಟದಲ್ಲಿ ಪ್ರಾದೇಶಿಕತೆ ಮತ್ತು ಜಾತಿ ಪ್ರಾತಿನಿಧ್ಯ ಹಾಗೂ ಆಡಳಿತಾತ್ಮಕ ಸಾಮರ್ಥ್ಯವನ್ನು ಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಅದಾಗ್ಯೂ, ಸೋತ ಮಂತ್ರಿಗಳಲ್ಲಿ ತಮ್ಮ ಸರ್ಕಾರದ ನೀತಿಗಳನ್ನು ಸಮರ್ಥಿಸಿಕೊಂಡಿದ್ದ ಸ್ಮೃತಿ ಇರಾನಿ, ಅರ್ಜುನ್ ಮುಂಡಾ ಮತ್ತು ಆರ್‌ಕೆ ಸಿಂಗ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಮಂತ್ರಿಗಿರಿ ಕೊಡುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನ ಶಶಿ ತರೂರ್ ವಿರುದ್ಧ ಸ್ಪರ್ಧಿಸಿದ್ದ ರಾಜೀವ್ ಚಂದ್ರಶೇಖರ್ ತಿರುವನಂತಪುರಂನಲ್ಲಿ 16,077 ಮತಗಳ ಅಂತರದಿಂದ ಸೋತಿದ್ದರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ 1.67 ಲಕ್ಷ ಮತಗಳ ಅಂತರದಿಂದ ಸೋತಿದ್ದಾರೆ. ಅರ್ಜುನ್ ಮುಂಡಾ 1.49 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ.

ಕಡಿಮೆ ಅಂತದಿಂದ ಗೆದ್ದಿರುವ ಸಂಸದರನ್ನು ಸಂಪುಟದಲ್ಲಿ ಸಚಿವರನ್ನಾಗಿ ಸೇರಿಸಿಕೊಳ್ಳಲು ಬಿಜೆಪಿ ನಾಯಕತ್ವ ನಿರಾಕರಿಸುತ್ತಿದೆ ಎಂದು ಮೂಲಗಳು ಹೇಳುತ್ತಿವೆ. ಮುಂದಿನ ಸಂಪುಟದಲ್ಲಿ ಹಲವಾರು ಬದಲಾವಣೆಗಳಾಗಲಿದ್ದು, ರಾಜ್ಯಸಭೆ ಸದಸ್ಯೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಗಳಿವೆ.

ಬುಡಕಟ್ಟು ವ್ಯವಹಾರಗಳ ಸಚಿವಾಲಯವನ್ನು ತನ್ನ ಮಿತ್ರ ಪಕ್ಷ ಟಿಡಿಪಿ ಅಥವಾ ಜೆಡಿಯುಗೆ ಬಿಟ್ಟುಕೊಡುವ ಸಾಧ್ಯತೆಗಳಿವೆ.

“ರೈಲ್ವೆ ಸಚಿವಾಲಯವನ್ನು ಬಿಜೆಪಿ ಉಳಿಸಿಕೊಂಡರೆ, ಅದರ ಎರಡು ಕೇಂದ್ರ ರಾಜ್ಯ ಸಚಿವ ಹುದ್ದೆಗಳಲ್ಲಿ ಒಂದು ಜೆಡಿಯು ಅಥವಾ ಟಿಡಿಪಿ ಅಥವಾ ಶಿವಸೇನಾ (ಶಿಂಧೆ ಬಣ)ಕ್ಕೆ ನೀಡುವ ಸಾಧ್ಯತೆಗಳಿವೆ. ಎನ್‌ಡಿಎ ಮೈತ್ರಿಕೂಟದ ಎಲ್ಲ ನಾಯಕರೊಂದಿಗೆ ಬಿಜೆಪಿ ಸಮಾಲೋಚನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅಜಯ್ ಕುಮಾರ್ ಮಿಶ್ರಾ, ಸುಭಾಷ್ ಸರ್ಕಾರ್, ಕೈಲಾಶ್ ಚೌಧರಿ, ಸಂಜೀವ್ ಬಲ್ಯಾನ್, ರಾವ್ಸಾಹೇಬ್ ದಾನ್ವೆ, ಕುಶಾಲ್ ಕಿಶೋರ್, ನಿರಂಜನ್ ಜ್ಯೋತಿ ಮತ್ತು ಮಹೇಂದ್ರ ನಾಥ್ ಪಾಂಡೆ ಅವರು ಚುನಾವಣೆಯಲ್ಲಿ ಸೋತಿರುವ ಕೇಂದ್ರ ರಾಜ್ಯ ಸಚಿವರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...