ಬಿಜೆಪಿಗೆ ಮತ್ತೊಂದು ಆಘಾತ; ಕಾಂಗ್ರೆಸ್‌ನತ್ತ ಹೊರಟ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಸಂದೀಪ್ 

Date:

ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಆಡಳಿತಾರೂಢ ಬಿಜೆಪಿ ನಾನಾ ರೀತಿಯ ತಂತ್ರ-ಕುತಂತ್ರಗಳನ್ನು ಎಣೆಯುತ್ತಿದೆ. ಆದರೆ, ಇದೇ ಸಮಯದಲ್ಲೇ, ಕರ್ನಾಟಕದಲ್ಲಿ ಬಿಜೆಪಿಗೆ ಆಘಾತಗಳ ಮೇಲೆ ಆಘಾತಗಳು ಎದುರಾಗುತ್ತಿವೆ. ಹಲವಾರು ಪ್ರಮುಖ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಿದ್ದಾರೆ. ಇದೀಗ, ಬಿಜೆಪಿ ರಾಜ್ಯ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಡಾ. ಸಂದೀಪ್‌ ಕೂಡ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ.

ಸಂದೀಪ್ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಅವರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಪರಿಶಿಷ್ಟ ಜಾತಿ ಹಿನ್ನೆಲೆಯ ಸಂದೀಪ್ ಅವರು ಬಿಜೆಪಿಯಲ್ಲಿ ತಳಹಂತದಿಂದಲೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಸಕಲೇಶಪುರ ಅಥವಾ ಆನೇಕಲ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿತ್ತು. ಆದರೆ, ಕೊಸ ಕ್ಷಣದಲ್ಲಿ ಟಿಕೆಟ್‌ ಕೊಟ್ಟಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ, ಲೋಕಸಭಾ ಚುನಾವಣೆಗೆ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವುದಾಗಿಯೂ ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಆ ಟಿಕೆಟ್ ಕೂಡ ದೊರೆತಿಲ್ಲ. ಹೀಗಾಗಿ, ಸಂದೀಪ್ ಅವರು ನಿರಂತರವಾಗಿ ಟಿಕೆಟ್ ವಂಚಿತರಾಗಿದ್ದಾರೆ. ಅವರು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...