ಚೈತ್ರಾ ಪ್ರಕರಣ | ಪ್ರಧಾನಿ ಮೋದಿ ಹೆಸರಲ್ಲಿ ಒಂದೂವರೆ ಕೋಟಿ ಪಡೆದಿದ್ದ ಅಭಿನವ ಹಾಲಶ್ರೀ

Date:

  • ವಂಚನೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಸಿಸಿಬಿ ಪೊಲೀಸರು
  • ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ

ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಳಿಸಿದ ಸಿಸಿಬಿ ಪೊಲೀಸರು, ಆರೋಪಿಯಾಗಿರುವ ಅಭಿನವ ಹಾಲಶ್ರೀ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ₹1.50 ಕೋಟಿ ಪಡೆದಿದ್ದ ಸಂಗತಿ ಬಯಲಾಗಿದೆ.

ವಂಚನೆ ಪ್ರಕರಣದ ಎ3 ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಅವರನ್ನು ವಿಚಾರಣೆ ನಡೆಸಿದ್ದು, ಸಾಕಷ್ಟು ಮಾಹಿತಿ ಕಲೆಹಾಕಿರುವುದಾಗಿ ವರದಿಯಾಗಿದೆ. ಲಿಖಿತ ಹೇಳಿಕೆ ಪಡೆದಿದ್ದು, ಬೆಂಗಳೂರು ಹಾಗೂ ಹಿರೇಹಡಗಲಿಗೆ ಕರೆದುಕೊಂಡು ಹೋಗಿ, ಮಹಜರು ಪ್ರಕ್ರಿಯೆಗಳನ್ನು ಪೂರೈಸುತ್ತಿದ್ದಾರೆ.

ಸೆ.29ರವರೆಗೆ ಸಿಸಿಬಿ ಕಸ್ಟಡಿಯಲ್ಲಿರುವ ಅಭಿನವ ಹಾಲಶ್ರೀ ಅವರಿಂದ ಉದ್ಯಮಿಯನ್ನು ನಂಬಿಸಿದ್ದು ಹೇಗೆ ಎಂಬ ಪ್ರಸಂಗಗಳ ಬಗ್ಗೆಯೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ದೂರುದಾರ ಗೋವಿಂದ ಬಾಬು ಪೂಜಾರಿಗೆ 2022ರ ಸೆಪ್ಟೆಂಬರ್‌ನಲ್ಲಿ ಕರೆ ಮಾಡಿದ್ದ ಚೈತ್ರಾ ಹಾಗೂ ವಿಶ್ವನಾಥ್ ಜೀ ಪಾತ್ರ ನಿರ್ವಹಿಸಿದ್ದ ರಮೇಶ್, ‘ಬೈಂದೂರಿನಿಂದ ಸ್ಪರ್ಧಿಸಲು ನಿಮಗೆ ಟಿಕೆಟ್ ನೀಡಲು ಬಿಜೆಪಿ ಕೇಂದ್ರದ ನಾಯಕರು ಒಪ್ಪಿದ್ದಾರೆ. ಕರ್ನಾಟಕದಲ್ಲಿ ಸೀಟು ಹಂಚಿಕೆ ಮಾಡಲು ಹೊಸಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿ ಅವರ ಶಿಫಾರಸು ಬೇಕು. ಪ್ರಭಾವಿಗಳಾಗಿರುವ ಅವರನ್ನು ಭೇಟಿಯಾಗಿ’ ಎಂದಿದ್ದರು.

chaithra kundapura

ಇದನ್ನು ನಂಬಿದ್ದ ಗೋವಿಂದ ಬಾಬು ಪೂಜಾರಿ, ಸ್ವಾಮೀಜಿಯನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಮನೆ ಹಾಗೂ ಹಿರೇಹಡಗಲಿ ಮಠದಲ್ಲಿ ಹಲವು ಬಾರಿ ಭೇಟಿಯಾಗಿದ್ದರು ಎಂದು ತಿಳಿದುಬಂದಿದೆ.

“ಸಮಿತಿಯಲ್ಲಿ ವಿಶ್ವನಾಥ್ ಜೀ ಅವರು ಹಿರಿಯರು. ಅವರೇ ನನಗೆ ಕರ್ನಾಟಕದ ಜವಾಬ್ದಾರಿ ಕೊಡಿಸಿದ್ದಾರೆ. ಪ್ರಧಾನ ಮಂತ್ರಿ ಮೋದಿ ಅವರ ಜೊತೆಗೂ ನಾನು ನಿಕಟ ಸಂಪರ್ಕ ಇಟ್ಟುಕೊಂಡಿದ್ದೇನೆ. ನಿಮಗೆ ಟಿಕೆಟ್ ಕೊಡಿಸುತ್ತೇನೆ. ಇದಕ್ಕಾಗಿ 1.50 ಕೋಟಿ ನೀಡಬೇಕು” ಎಂದಿದ್ದರು. ಅಭಿನವ ಹಾಲಶ್ರೀ ಹೇಳಿಕೆಯನ್ನು ನಿಜವೆಂದು ನಂಬಿ, ಹಣ ನೀಡಿದ್ದರು.

modi amit shah

ಆ ಬಳಿಕ ವಿಶ್ವನಾಥ್ ಜೀ ತೀರಿಕೊಂಡಿರುವುದಾಗಿ ಚೈತ್ರಾ ಹಾಗೂ ಇತರರ ಮಾತಿನಿಂದ ಅನುಮಾನಗೊಂಡು, ತಮ್ಮನ್ನು ವಂಚಿಸುತ್ತಿರುವುದು ಗೋವಿಂದ ಬಾಬು ಅವರಿಗೆ ತಿಳಿದುಬಂದಿತ್ತು. ಅವಾಗಲೇ, ನೀಡಿದ್ದ ಹಣ ವಾಪಸು ಪಡೆಯಲು ಸ್ವಾಮೀಜಿಯನ್ನು ಪುನಃ ಭೇಟಿಯಾಗಿದ್ದ ಸಂದರ್ಭದಲ್ಲಿ ತಾನು ಪಡೆದಿದ್ದ 1.50 ಕೋಟಿ ಹಣವನ್ನು ಮರಳಿಸುವುದಾಗಿಯೂ ತಿಳಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ : ಸೋಷಿಯಲ್ ಮೀಡಿಯಾಗಳಲ್ಲಿ ಪತ್ರ ವೈರಲ್

ಈಗ ತನಿಖೆಯಲ್ಲಿ ತಿಳಿದು ಬರುತ್ತಿರುವ ಎಲ್ಲ ಅಂಶಗಳನ್ನು ಈ ಹಿಂದೆಯೇ ಉದ್ಯಮಿ ಗೋವಿಂದ ಬಾಬು ತಮ್ಮ ಸುದೀರ್ಘ ನಾಲ್ಕು ಪುಟಗಳ ಪತ್ರದಲ್ಲೂ ತಿಳಿಸಿದ್ದರು. ಈ ಪತ್ರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಆ ಸಂದರ್ಭದಲ್ಲಿ ಈ ದಿನ.ಕಾಮ್ ಖುದ್ದು ಚೈತ್ರಾ ಕುಂದಾಪುರ ಹಾಗೂ ವಂಚನೆಗೊಳಗಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಯನ್ನು ಮಾತನಾಡಿಸಿ, ವರದಿ ಮಾಡಿತ್ತು.

ಆಗ ಚೈತ್ರಾ ಕುಂದಾಪುರ ಈ ದಿನ.ಕಾಮ್ನೊಂದಿಗೆ, “ಇವೆಲ್ಲವೂ ಸುಳ್ಳು ಸುದ್ದಿ. ಸೋಷಿಯಲ್ ಮೀಡಿಯಾಗಳಲ್ಲಿ ಫೇಕ್ ಲೆಟರ್‌ಗಳನ್ನು ಹಾಕಿ, ನಮ್ಮ ತೇಜೋವಧೆ ಮಾಡುತ್ತಿರುವ ಬಗ್ಗೆ ಎಲ್ಲರ ವಿರುದ್ಧ ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ” ಎಂದಿದ್ದರು.

ಈ ಬೆಳವಣಿಗೆ ನಡೆದು ಎರಡು ತಿಂಗಳ ಬಳಿಕ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸರಿಗೆ ದೂರು ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...