ವಂಚನೆ ಪ್ರಕರಣ | ಮುಧೋಳ‌ದಲ್ಲಿದ್ದ ಚೈತ್ರಾ ಕುಂದಾಪುರ ಕಾರು ಸಿಸಿಬಿ ವಶಕ್ಕೆ

Date:

  • ಕಾರು ಇಟ್ಟುಕೊಂಡಿದ್ದ ಮುಧೋಳದ ಸಂಘ ಪರಿವಾರದ ಕಾರ್ಯಕರ್ತನನ್ನು ವಿಚಾರಣೆ ನಡೆಸಿದ ಸಿಸಿಬಿ
  • ‘ಡ್ರೈವಿಂಗ್ ಸ್ಕೂಲ್‌’ ನಡೆಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತ ಕಿರಣ್ ಗಣಪ್ಪಗೋಳ

ಉದ್ಯಮಿ ಗೋವಿಂದ ಪೂಜಾರಿಯವರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್ ನೀಡಿಸುವುದಾಗಿ ನಂಬಿಸಿ 5 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಚೈತ್ರಾ ಕುಂದಾಪುರ ಕಾರನ್ನು ಬಾಗಲಕೋಟೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬಾಗಲಕೋಟೆಯ ಮುಧೋಳದ ಸಂಘ ಪರಿವಾರದ ಕಾರ್ಯಕರ್ತನೋರ್ವನ ಮನೆ ಬಳಿ ಕಾರು ಪತ್ತೆಯಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

32 ವರ್ಷದ ಸಂಘ ಪರಿವಾರದ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಎಂಬುವವನ ಮನೆಯಲ್ಲಿದ್ದ KA 20 ME 7253 ನೋಂದಣಿ ಸಂಖ್ಯೆ ಹೊಂದಿರುವ ಚೈತ್ರಾಳ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
chaithra with srikant

ಮುಧೋಳ‌ ನಗರದಲ್ಲಿ ಬಲಪಂಥೀಯ ಸಂಘಟನೆಗಳಿಂದ ಆಯೋಜಿಸಲಾಗಿದ್ದ ಕೆಲವು ಕಾರ್ಯಕ್ರಮಗಳಿಗೆ ಅತಿಥಿಯಾಗಿ ಹೋಗಿದ್ದ ವೇಳೆ ಚೈತ್ರಾ ಕುಂದಾಪುರಗೆ ಕಿರಣ್ ಪರಿಚಯವಾಗಿತ್ತು. ಕಿರಣ್ ಮುಧೋಳ‌ ನಗರದಲ್ಲಿ ‘ಡ್ರೈವಿಂಗ್ ಸ್ಕೂಲ್‌’ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಕಿರಣ್, ಮೂರು ಬಾರಿ ನಗರಕ್ಕೆ ಚೈತ್ರಾ ಕುಂದಾಪುರಳನ್ನು ಅತಿಥಿಯಾಗಿ ಭಾಷಣಕ್ಕೆಂದು ಕರೆಸಿದ್ದನು.

ಚೈತ್ರಾಳ ವಿರುದ್ಧ ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಸೆ. 9ರಂದು ಕಿರಣ್​ಗೆ ಕರೆ ಮಾಡಿದ್ದ ಚೈತ್ರಾ ಆಪ್ತ, ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್, “ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಚೈತ್ರಾ ಕಾರನ್ನು ನಿಲ್ಲಿಸಿದ್ದೇವೆ. ಅದನ್ನು ತಂದು‌ ನಿಮ್ಮ‌ ಬಳಿ ಇಟ್ಟುಕೊಳ್ಳಿ” ಎಂದು ತಿಳಿಸಿದ್ದಾಗಿ ವರದಿಯಾಗಿದೆ.

ಶ್ರೀಕಾಂತ್ ನೀಡಿದ್ದ ಸೂಚನೆಯಂತೆ ಸೆ. 9ರಂದು ಸೊಲ್ಲಾಪುರಕ್ಕೆ ತೆರಳಿ, ಕಾರಿನ ಕೀ ಪಡೆದುಕೊಂಡು ತನ್ನ ಮನೆಯ ಆವರಣದಲ್ಲಿ ಇರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಕಾರಿನ ಬಗ್ಗೆ ಮಾಹಿತಿ ಪಡೆದುಕೊಂಡು ಭಾನುವಾರ ಮುಧೋಳ‌ದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

chaithtra Kundapura car

ಚೈತ್ರಾಳ ಹೆಸರಿನಲ್ಲಿಯೇ ಇರುವ ಕಾರು
ಶ್ರೀಕಾಂತ್ ಮತ್ತು ಕಿರಣ್ ಕರೆ ಆಧಾರದ ಮೇಲೆ ಸಿಸಿಬಿ ಪೊಲೀಸರು, ಚೈತ್ರಾಳ ಹೆಸರಿನಲ್ಲಿಯೇ ಇರುವ ಕಾರನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ, ಸೊಲ್ಲಾಪುರದಿಂದ ಕಾರು ತಂದಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಕಿರಣ್​ನನ್ನು ಕೂಡ ವಿಚಾರಣೆ ನಡೆಸಿದ್ದು, ತನಿಖೆಯ ವಿಚಾರವಾಗಿ ಕರೆದಾಗ ಬರುವಂತೆ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. KA-20 ME 7253 ಸಂಖ್ಯೆ ಕಾರ್ 2023ರಲ್ಲಿ ಚೈತ್ರಾ ಕುಂದಾಪುರ ಹೆಸರಿನಲ್ಲಿಯೇ ಖರೀದಿಯಾಗಿದೆ.

ಸಿಸಿಬಿ ಪೊಲೀಸರ ತನಿಖೆ ವೇಳೆ ಚೈತ್ರಾ ಸ್ಥಿರಾಸ್ತಿ, ಚರಾಸ್ತಿ ಪತ್ತೆಯಾಗಿದ್ದು, ಒಟ್ಟು ₹1.08ಕೋಟಿ ಆಸ್ತಿ-ಪಾಸ್ತಿ ದಾಖಲೆಗಳು ಪತ್ತೆಯಾಗಿವೆ. ಅದರಲ್ಲಿ ₹65 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಅಲ್ಲದೇ, ಚೈತ್ರಾ ಉಡುಪಿಯ ಉಪ್ಪೂರಿನಲ್ಲಿರುವ ಸಹಕಾರಿ ಬ್ಯಾಂಕ್​​ನಲ್ಲಿ ₹40 ಲಕ್ಷ ಠೇವಣಿ ಇಟ್ಟಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...