ವದಂತಿಗಳಿಗೆ ಕಿವಿಗೊಡಬೇಡಿ, ಉಚಿತ ಬಸ್ ಪ್ರಯಾಣ 10 ವರ್ಷ ಮುಂದುವರಿಯಲಿದೆ: ರಾಮಲಿಂಗಾರೆಡ್ಡಿ

Date:

  • ‘ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್’ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ
  • ‘ಒಂದು ಪಕ್ಷದವರು ಬಂದ್ ವದಂತಿ ಹರಡಿಸುತ್ತಿದ್ದಾರೆ’ ಎಂದ ಸಚಿವ ರಾಮಲಿಂಗಾ ರೆಡ್ಡಿ

ಮಹಿಳೆಯರಿಗೆ ಈಗಾಗಲೇ ನೀಡಲಾಗಿರುವ ಗ್ಯಾರಂಟಿಗಳ ಪೈಕಿ ಉಚಿತ ಬಸ್ ಪ್ರಯಾಣದ ಯೋಜನೆಯಾದ ‘ಶಕ್ತಿ’ಯು ಇನ್ನೂ ಹತ್ತು ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

‘ಶಕ್ತಿ ಯೋಜನೆ ನಿಲ್ಲಿಸಲಾಗುತ್ತೆಂದು ಸುಳ್ಳು ಸುದ್ದಿ’ಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಇದು ವದಂತಿಯಷ್ಟೇ. ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ, 10 ವರ್ಷಗಳ ಕಾಲ ಶಕ್ತಿ ಯೋಜನೆ ಮುಂದುವರಿಯುತ್ತದೆ. ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಮ್ಮ ಸರ್ಕಾರದ ಶಕ್ತಿ ಯೋಜನೆಯ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಕೆಲವರು ಬಸ್ ಪಾಸ್ ಕೊಡಿ ಎಂದು ಅಧಿಕಾರಿಗಳಲ್ಲಿ ಕೇಳುತ್ತಿದ್ದಾರೆ ಅಂತ ಮಾಹಿತಿ ಬಂದಿದೆ. ಇದು ವದಂತಿಯಷ್ಟೇ. ಮುಂದಿನ ಬಾರಿ ಅಧಿಕಾರಕ್ಕೆ ಬರುವುದರ ಜೊತೆಗೆ 10 ವರ್ಷಗಳ ಕಾಲವೂ ಮುಂದುವರಿಯುತ್ತದೆ. ಹಾಗಾಗಿ, ಹೆಣ್ಣುಮಕ್ಕಳು ಯಾರೂ ಬಸ್ ಪಾಸ್ ಪಡೆಯುವ ಅಗತ್ಯವಿಲ್ಲ. ವದಂತಿಗಳನ್ನು ನಂಬಬೇಡಿ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟೀಕರಣ ನೀಡಿದರು.

ಈ ನಡುವೆ ಕೆಎಸ್‌ಆರ್‌ಟಿಸಿ ಕೂಡ ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ. ಮಹಿಳೆಯರ ಉಚಿತ‌ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ’ ಎಂದು ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...