ರೆಂಟ್‌ ಅಗ್ರಿಮೆಂಟ್‌ ಇದ್ದರೆ ಮಾತ್ರ ಬಾಡಿಗೆದಾರರಿಗೆ ʼಉಚಿತ ವಿದ್ಯುತ್ʼ: ಸಚಿವ ಕೆ ಜೆ ಜಾರ್ಜ್ ಮಾಹಿತಿ

Date:

  • ʼಗೃಹ ಜ್ಯೋತಿʼ ಉಚಿತ ವಿದ್ಯುತ್ ಯೋಜನೆ ಲಾಭದ ವ್ಯಾಪ್ತಿಗೆ ಬಾಡಿಗೆದಾರರು
  • ಫ್ರೀ ವಿದ್ಯುತ್ ವಿಚಾರದ ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ ಜೆ ಜಾರ್ಜ್

ಬಾಡಿಗೆದಾರರಿಗೂ ಗೃಹ ಜ್ಯೋತಿ ಯೋಜನೆ ಯ ಉಚಿತ ವಿದ್ಯುತ್ ಲಾಭ ಸಿಗಲಿದೆ. ಇದಕ್ಕಾಗಿ ಅವರು ಮನೆ ಬಾಡಿಗೆ ದಾಖಲೆ ಹೊಂದಿರಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.

ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಾಡಿಗೆದಾರರು ಈ ಯೋಜನೆ ಲಾಭ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು, ಅವರಿಗೂ ಯೋಜನೆ ಲಾಭ ಸಿಗಲಿದೆ. ಈ ವಿಚಾರದಲ್ಲಿ ಅನಗತ್ಯ ಗೊಂದಲ ಬೇಡ ಎಂದಿದ್ದಾರೆ.

ಸಚಿವರ ಈ ವಿಚಾರದಲ್ಲಿ ನೀಡಿರುವ ಸ್ಪಷ್ಟೀಕರಣದಂತೆ, ಬಾಡಿಗೆದಾರರು ಯೋಜನೆಗೆ ಅರ್ಜಿ ಸಲ್ಲಿಸುವಾಗ ಎಷ್ಟು ವರ್ಷಗಳಿಂದ ಆ ಬಾಡಿಗೆ ಮನೆಯಲ್ಲಿದ್ದಾರೆ ಎಂಬ ದಾಖಲೆ ತೋರಿಸಬೇಕು. ವಿದ್ಯುತ್ ಬಿಲ್ ಜೊತೆಗೆ ಬಾಡಿಗೆ ಮನೆ ಕರಾರು ಪತ್ರ ಇರಬೇಕು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊತೆಗೆ ಮನೆ ಮಾಲೀಕನ ತಾನು ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ನನ್ನ ಬಳಿ ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಕಡ್ಡಾಯವಾಗಿ ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು ಎಂದು ಹೇಳಿದರು.

ಒಂದು ವೇಳೆ ಇದರಲ್ಲಿ ತಪ್ಪು ಮಾಹಿತಿ ನೀಡಿದರೇ ಈ ಯೋಜನೆ ಅಂತಹ ಬಾಡಿಗೆದಾರರರಿಗೆ ಅನ್ವಯವಾಗುವುದಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಗೃಹ ಜ್ಯೋತಿಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ

ಸರ್ಕಾರದ ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಮನೆಯವರೂ 200 ಯುನಿಟ್ ವಿದ್ಯುತ್ ಉಚಿತ ಪಡೆಯಲು ಅರ್ಜಿ ತುಂಬಬೇಕಾದ ಅನಿವಾರ್ಯತೆ ಎದುರಾಗಿದೆ.‌ ಮನೆ ಯಜಮಾನ ಅಗತ್ಯ ದಾಖಲೆಗಳೊಂದಿಗೆ ಪೋರ್ಟ್‌ಗೆ ತೆರಳಿ ಆನ್ ಲೈನ್ ಮೂಲಕ ತನ್ನ ಮೂಲ ಮಾಹಿತಿ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿದೆ. ಇದಕ್ಕೆ ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಬೇಕು.

   ಬಾಡಿಗೆದಾರರು

• ವಾಸವಿರುವ ಮನೆಯ ಆರ್ ಆರ್ ಸಂಖ್ಯೆಯೊಂದಿಗೆ ತಮ್ಮ ಆಧಾರ್ ಲಿಂಕ್ ಮಾಡಬೇಕು.
• ಇದಕ್ಕೆ ಬಾಡಿಗೆ ಮನೆಯ ಕರಾರು ಪತ್ರ (ರೆಂಟಲ್ ಅಗ್ರಿಮೆಂಟ್)ವನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.
• ಒಂದು ದಾಖಲೆಯನ್ನು ಒಂದು ಮೀಟರ್ ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ.
• ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್ ನೊಂದಿಗಿನ ಲಿಂಕ್ ತೆಗೆಯಬೇಕು.
• ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್ ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು.

    ಸ್ವಂತ ಮನೆಯವರು ಈ ರೀತಿ ಮಾಡಬೇಕು

• ಆರ್ ಆರ್ ನಂಬರ್ ನೊಂದಿಗೆ ಆಧಾರ್ ಲಿಂಕ್ ಮಾಡಬೇಕು.
• ಒಂದಕ್ಕಿಂತ ಹೆಚ್ಚು ಮನೆಯಿದ್ದರೆ ಒಂದು ಮನೆಗೆ ಮಾತ್ರ ಅವಕಾಶ.
• ಎರಡು ಮೀಟರ್ ಹೊಂದಿದ್ದರೆ ಯಾವುದಾದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯ.

ಈ ಸುದ್ದಿ ಓದಿದ್ದೀರಾ?:ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ

ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಜಾರಿಯಾಗಲಿದೆ. ಗ್ರಾಹಕರು ಹಿಂದೆ ಬಳಕೆ ಮಾಡುತ್ತಿದ್ದ ವಿದ್ಯುತ್ ಪ್ರಮಾಣದ ಆಧಾರದ ಮೇಲೆ ವಿದ್ಯುತ್ ಉಚಿತ ಸಿಗಲಿದೆ, ಎಂದು ಸರ್ಕಾರ ಷರತ್ತು ವಿಧಿಸಿದೆ.

ಅಲ್ಲದೆ, 12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು ಎಂದು ಸರ್ಕಾರ ಹೇಳಿದೆ. ಈ ರೀತಿ 200 ಯೂನಿಟ್‌ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...