ಹತಾಶೆಗೊಳಗಾಗಿರುವ ನರೇಂದ್ರ ಮೋದಿಯಿಂದ ಸುಳ್ಳುಗಳ ಸುರಿಮಳೆ: ಸಿಎಂ ಸಿದ್ದರಾಮಯ್ಯ

Date:

ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗಿ ಮೋದಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಸುಳ್ಳುಗಳ ಸುರಿಮಳೆ ಸುರಿಸುತ್ತಿದ್ದಾರೆ. ನಾಚಿಕೆ ಇಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ ಗಡ್ಡದೇವರ ಮಠ ಅವರ ಪರವಾಗಿ ಆಯೋಜಿಸಲಾಗಿದ್ದ ಪ್ರಚಾರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರು, ರೈತರು, ಮಹಿಳೆಯರು, ಶ್ರಮಿಕರು, ಹಿಂದುಳಿದವರು ಸೇರಿ ಎಲ್ಲ ವರ್ಗಗಳಿಗೆ ಆರ್ಥಿಕ ಶಕ್ತಿ ನೀಡುವುದು ಕಾಂಗ್ರೆಸ್ ಮಾತ್ರ. ಇತಿಹಾಸ ತೆಗೆದು ನೋಡಿ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಹಿಂದುಳಿದವರ ಮೀಸಲಾತಿ ಕಿತ್ತುಕೊಳ್ಳುತ್ತದೆ ಎನ್ನುವ ಸುಳ್ಳುಗಳನ್ನು ಸೃಷ್ಟಿಸಿ, ಸುಳ್ಳುಗಳಿಂದ ಹಿಂದುಳಿದವರನ್ನು ಬಕ್ರಾ ಮಾಡಬಹುದು ಎಂದುಕೊಂಡು ನರೇಂದ್ರ ಮೋದಿ ಓಡಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಒಬ್ಬನೇ ಒಬ್ಬ ಕುರುಬರಿಗೂ ಟಿಕೆಟ್ ನೀಡದ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಕರಿ ಕಂಬಳಿ ವೇಷ ಹಾಕೊಂಡು ಡ್ರಾಮಾ ಮಾಡ್ತಿದ್ದಾರೆ. ಕುರುಬರು ಈ ಬಾರಿ ದಯಮಾಡಿ ಯಾಮಾರಬೇಡಿ. ಬಿಜೆಪಿಗೆ ಮತ ಹಾಕಿ ಮೋಸ ಹೋಗಬೇಡಿ ಎಂದು ಕರೆ ನೀಡಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿ ಪಡಿಸಿ ಎಂದರೆ ಮೋದಿ ಹೇಳಿದಂತೆ ಡ್ಯಾನ್ಸ್ ಡ್ಯಾನ್ಸ್ ಮಾಡಿಕೊಂಡು ಕಾಲ ಕಳೆದರು. ರಾಜ್ಯಕ್ಕೆ, ಹಾವೇರಿ ಗದಗ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ನಯಾಪೈಸೆ ಅನುಕೂಲ ಮಾಡದ ಬೊಮ್ಮಾಯಿ ಅವರನ್ನು ಸೋಲಿಸಿ ಮನೆಗೆ ಕಳುಹಿಸಿ ಎಂದು ಕರೆ ನೀಡಿದರು.

ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ಜಾತಿ, ಎಲ್ಲಾ ಧರ್ಮಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ನಾವು ಐದು ಗ್ಯಾರಂಟಿಗಳನ್ನು ಕೊಟ್ಟಂತೆ ರಾಷ್ಟ್ರೀಯ ಕಾಂಗ್ರೆಸ್ 25 ಗ್ಯಾರಂಟಿಗಳನ್ನು ಘೋಷಿಸಿದೆ. ಈ ಗ್ಯಾರಂಟಿ ಪತ್ರಕ್ಕೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸಹಿ ಹಾಕಿದ್ದಾರೆ ಎಂದರು.

“ಬಿಜೆಪಿ ಭಾರತೀಯರ ಭಾವನೆಗಳನ್ನು ಕೆರಳಿಸಿ ಬದುಕಿನ ಜತೆ ಚೆಲ್ಲಾಟ ಆಡುತ್ತದೆ. ಕಾಂಗ್ರೆಸ್ ಭಾರತೀಯರ ಭಾವನೆಗಳನ್ನು ಗೌರವಿಸುತ್ತಲೇ ಬದುಕನ್ನು ಮೇಲೆತ್ತುವ ಕೆಲಸ ಮಾಡುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...