ಗದಗ | ಯುವ ಮುಸ್ಲಿಂ ವ್ಯಾಪಾರಿಯನ್ನು ಬೀದಿಪಾಲು ಮಾಡಿದ ಬಿಜೆಪಿ ಪ್ರಚಾರ ಯಾತ್ರೆ

Date:

  • ಅಮಿತ್‌ ಶಾ ಭಾಗಿಯಾಗಿದ್ದ ಪ್ರಚಾರ ಸಭೆಯಲ್ಲಿ ನಡೆದ ಘಟನೆ
  • ತಂಪು ಪಾನೀಯ ಗಾಡಿಯನ್ನು ಹರಿದು ಮುಕ್ಕಿದ ಬಿಜೆಪಿ ಕಾರ್ಯಕರ್ತರು

ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಟಾಟಾ ಏಸ್‌ ವಾಹನದಲ್ಲಿ ತಂಪು ಪಾನೀಯ ಮಾರುತ್ತಿದ್ದ ಯುವ ಮುಸ್ಲಿಂ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ವಾಹನದಲ್ಲಿದ್ದ ಪಾನೀಯವನ್ನೆಲ್ಲ ಕಿತ್ತುಕೊಂಡು ರಂಪಾಟ ಮಾಡಿರುವ ಘಟನೆ ನಡೆದಿದೆ.

ಗದಗದಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಿಜೆಪಿ ಸಮಾವೇಶಕ್ಕೆ ಸಾವಿರಾರು ಜನರನ್ನು ಅಕ್ಕಪಕ್ಕದ ಊರುಗಳಿಂದ ಕರೆಸಲಾಗಿತ್ತು. ಬೇಸಿಗೆಯ ತಾಪಮಾನ ಹೆಚ್ಚಿದ್ದರೂ ಬಂದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ. ನೆರೆದಿದ್ದವರೂ ಬಾಯಾರಿಕೆಯಿಂದ ಹನಿ ನೀರಿಗಾಗಿ ಹಾತೊರಿಯುತ್ತಿದ್ದರು.

ಈ ವೇಳೆ, ಶರೀಫ ಎಂಬ ಮುಸ್ಲಿಂ ವ್ಯಾಪಾರಿ ತಂಪು ಪಾನೀಯಗಳನ್ನು ಮಾರಾಟ ಮಾಡಲೆಂದು ಸಮಾವೇಶದ ಸ್ಥಳಕ್ಕೆ ತನ್ನ ವಾಹನದಲ್ಲಿ ಆಗಮಿಸಿದ್ದರು. ಇದನ್ನು ಗಮನಿಸಿದ ಕೆಲ ಬಿಜೆಪಿ ಕಾರ್ಯಕರ್ತರು ಆತನ ಬಳಿಯಿದ್ದ ತಂಪು ಪಾನೀಯಗಳನ್ನು ಪಡೆದುಕೊಳ್ಳಲು ಮುಂದೆ ಧಾವಿಸಿದರು. ಇದನ್ನು ಕಂಡ ಜನ ಬಿಜೆಪಿ ಕಾರ್ಯಕರ್ತರು ತಮಗಾಗಿ ತಂಪು ಪಾನೀಯ ತಂದಿದ್ದಾರೆ ಎಂದು ಭಾವಿಸಿ, ವಾಹನದ ಮೇಲೇರಿ ಗಾಡಿಯಲ್ಲಿದ್ದ ಎಲ್ಲ ತಂಪು ಪಾನೀಯಗಳನ್ನು ಕೈಗೆ ಸಿಕ್ಕಷ್ಟು ಬಾಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಬಿಜೆಪಿಯಿಂದ ಲಿಂಗಾಯತರ ನಿಂದನೆ ಎಂದ ಮೋದಿ; ಕಮಲ ಪಡೆ ಯಡವಟ್ಟು

ಇದರಿಂದ ಆಘಾತಗೊಂಡ ಶರೀಫ ಕೆಲ ಕಾಲ ಅವರನ್ನು ಅಲ್ಲಿಂದ ಕಳುಹಿಸುವ ಪ್ರಯತ್ನ ಮಾಡಿದನಾದರೂ, ತನ್ನ ಮುಂದೆ ಧಾವಿಸಿ ಬರುತ್ತಿದ್ದ ಸಾವಿರಾರು ಜನರನ್ನು ಎದುರಿಸಲಾಗದೇ ಅಸಹಾಯಕನಾಗಿ, ಭಯಭೀತನಾಗಿ, ಅಳಲು ಪ್ರಾರಂಭಿಸಿದರು. ಅಷ್ಟರಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಹಾಗೂ ಅಲ್ಲಿದ್ದ ಜನರನ್ನು ಕಳುಹಿಸುವ ಪ್ರಯತ್ನ ಮಾಡಿದರು.

ಈ ಘಟನೆಯನ್ನು ಕಂಡ ಕೆಲವರು ಮುಸ್ಲಿಂ ಯುವಕನ ಅಸಹಾಯಕತೆಗೆ ಹಾಗೂ ಬಿಜೆಪಿ ಕಾರ್ಯಕರ್ತರ ನಡೆಗೆ ಬೇಸರ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾನದಲ್ಲಿ ಬಿಜೆಪಿ ವಿರುದ್ಧ ಕಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...