ಪಕ್ಷದ ಚಿಹ್ನೆ, ಪ್ರಣಾಳಿಕೆ ಬಿಡುಗಡೆ | ರಾಜಕೀಯದ ʼಫುಟ್ಬಾಲ್ʼ ಆಟ ಆರಂಭ ಎಂದ ಜನಾರ್ಧನ ರೆಡ್ಡಿ

Date:

  • ʼಇನ್ನು ಮುಂದೆ ನನ್ನ ಪಕ್ಷ ರಾಜಕೀಯದ ಪುಟ್ಬಾಲ್ ಆಡಲಿದೆʼ
  • ಭರ್ಜರಿ ಭರವಸೆಗಳನ್ನು ಘೋಷಣೆ ಮಾಡಿದ ಜನಾರ್ಧನ ರೆಡ್ಡಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ ಮತ್ತು ಪ್ರಣಾಳಿಕೆ ಬಿಡುಗಡೆ ಕಾರ್ಯ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು.

ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ಧನ ರೆಡ್ಡಿ ಪಕ್ಷದ ಚಿಹ್ನೆ ʼಪುಟ್ಬಾಲ್ʼ ಹಾಗೂ ʼಪ್ರಣಾಳಿಕೆʼ ವಿಚಾರಗಳನ್ನು ಅನಾವರಣ ಮಾಡಿದರು.

ಬಳಿಕ ಮಾತನಾಡಿದ ಜನಾರ್ಧನ ರೆಡ್ಡಿ, “ರಾಜಕೀಯದಲ್ಲಿ ನನ್ನವರು, ಶತ್ರುಗಳು, ಎಲ್ಲರೂ ಸೇರಿಕೊಂಡು ನನ್ನನ್ನು ಫುಟ್ಬಾಲ್ ತರ ಆಡಿಸಿದರು. ಈಗ ನಾನು ಎಲ್ಲರನ್ನು ಸೇರಿಸಿ ಫುಟ್ಬಾಲ್ ಆಡಬಹುದು ಎಂದು ʼಫುಟ್ಬಾಲ್ʼ ಚಿಹ್ನೆಯನ್ನ ಆಯ್ಕೆ ಮಾಡಿಕೊಂಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಡಿಸೆಂಬರ್ ತಿಂಗಳಿನಿಂದಲೇ ನಾನು ನನ್ನ ಪಕ್ಷದ ಉದ್ದೇಶ, ಧ್ಯೇಯಗಳನ್ನು ಪ್ರಚಾರ ಮಾಡುತ್ತಿದ್ದೆ. ಪಕ್ಷಕ್ಕೆ ನಾನು ಊಹಿಸಿಕೊಂಡಿದ್ದಕ್ಕಿಂತಲೂ ಹೆಚ್ಚಿನ ಬೆಂಬಲ ಸಿಕ್ಕಿದೆ. ನಿರೀಕ್ಷೆ ಮೀರಿ ಜನರ ವಿಶ್ವಾಸ ಗಳಿಸಿಕೊಂಡಿದ್ದೇನೆ.

ಕಾರ್ಯಾರಂಭ ಮಾಡಿದ 90 ದಿನಗಳಲ್ಲಿ 12 ಮಂದಿ ಅಭ್ಯರ್ಥಿಗಳ ಘೋಷಣೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ 19 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇನೆ” ಎಂದು ರೆಡ್ಡಿ ಹೇಳಿದರು.

“ಇನ್ನೂ 20 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹಾಕಲಿದ್ದೇವೆ. 51 ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಾಚರಣೆ ನಡೆಯುತ್ತಿದೆ. ಒಟ್ಟಾರೆ 30 ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ. ಇದಕ್ಕಾಗಿ ಹಗಲಿರುಳು ಪಕ್ಷ ಸಂಘಟನಾ ಕೆಲಸ ಮಾಡುತ್ತಿದ್ದೇನೆ” ಎಂದು ರೆಡ್ಡಿ ತಿಳಿಸಿದರು.

“ಮರಳಿ ಬಿಜೆಪಿಗೆ ಹೋಗುವ ಮಾತಿಲ್ಲ. ಈ ಬಗ್ಗೆ ನಾನು ಯಾರ ಜೊತೆಗೂ ಮಾತನಾಡಿಲ್ಲ. ಆ ಸಮಯ ಈಗ ಮೀರಿ ಹೋಗಿದೆ. ಹಿರಿಯರಿಗೆಲ್ಲ ಅಂದೇ ಮಾತನಾಡಿ ಎಲ್ಲ ಆಗಿದೆ ಎಂದಿದ್ದೇನೆ. ಯಾವ ಬಿಜೆಪಿ ನಾಯಕರ ಜೊತೆಗೂ ನಾನು ಸಂಪರ್ಕ ಹೊಂದಿಲ್ಲ” ಎಂದರು.

ಮಿತ್ರರ ಕ್ಷೇತ್ರಗಳಲ್ಲಿ ಸ್ಪರ್ಧೆ ಇಲ್ಲ

“ಎಲ್ಲಿ ನಮಗೆ ಶಕ್ತಿ ಇರುತ್ತದೆಯೋ ಅಲ್ಲಿ ಸ್ಪರ್ಧೆ ಮಾಡ್ತೇವೆ. ಗೆಲ್ಲುವ ಸಾಧ್ಯತೆ ಇರುವ ಕಡೆ ಮಾತ್ರ ಸ್ಪರ್ಧೆ ಮಾಡುತ್ತೇವೆ ಎಂದು ಜನಾರ್ಧನ ರೆಡ್ಡಿ ಹೇಳಿದರು.ಆ ಮೂಲಕ ಮಿತ್ರ ಶ್ರೀರಾಮುಲು ಕಣಕ್ಕಿಳಿಯಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಸ್ಪರ್ಧೆ ಇಲ್ಲ” ಎಂದು ಪರೋಕ್ಷವಾಗಿ ರೆಡ್ಡಿ ತಿಳಿಸಿದರು.

ಪ್ರಶ್ನೋತ್ತರದ ಬಳಿಕ ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ಧನರೆಡ್ಡಿ, ಜನರಿಗೆ ನೀಡಿರುವ ಭರವಸೆಗಳ ಅನಾವರಣ ಮಾಡಿದರು.

  • ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆ ಹೀಗಿವೆ:
  • ಪ್ರತಿ ಮನೆಗೆ 250 ಯೂನಿಟ್ ಉಚಿತ ವಿದ್ಯುತ್
  • ಎಸ್ ಸಿ, ಎಸ್ಟಿ ಸಮುದಾಯದವರಿಗೆ ಉಚಿತ ನಿವೇಶನ
  • 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ 15 ಸಾವಿರ ಬಂಡವಾಳ ನೆರವು
  • ರೈತರಿಗೆ ಬಡ್ಡಿ ರಹಿತ ಸಾಲ
  • ಹೆಣ್ಣು ಮಕ್ಕಳ ಹೆಸರಿನಲ್ಲಿ ಮನೆ ಇಲ್ಲದೆ ಇರುವವರಿಗೆ 2ಬಿಹೆಚ್ಕೆ ಮನೆ
  • ಎಲ್ಲ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಮಾನ ವೇತನ
  • ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ
  • ಮಹಿಳೆಯರ ಭದ್ರತೆಗಾಗಿ ಹೊಸ ಮಹಿಳೆಯರ ತಂಡ ಸ್ಥಾಪನೆ
  • ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ರೂ. ವೇತನ ಹೆಚ್ಚಳ
  • ಆರ್ಥಿಕ ದೌರ್ಬಲ್ಯ ಮಕ್ಕಳಿಗೆ ಉಚಿತ ಶಿಕ್ಷಣ ಇತ್ಯಾದಿಗಳಾಗಿವೆ.
e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...