ಗ್ಯಾಸ್‌ ಸಿಲಿಂಡರ್ ದರ ಇಳಿಕೆ ಚುನಾವಣೆ ಗಿಮಿಕ್: ಜಗದೀಶ್‌ ಶೆಟ್ಟರ್‌ ಟೀಕೆ

Date:

  • ‘ಮೋದಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಕನಿಷ್ಠ 500 ರೂ. ಇಳಿಸಬೇಕಿತ್ತು’
  • ‘ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಉಚಿತ ಯೋಜನೆ ಘೋಷಣೆಯಾಗಬಹುದು’

ಮುಂದಿನ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಗಿಮಿಕ್ ಮಾಡಲು ಕೇಂದ್ರ ಸರ್ಕಾರ ಗ್ಯಾಸ್‌ ಸಿಲಿಂಡರ್ ದರ ಇಳಿಸಿದೆ. ಡಿಸೆಂಬರ್‌ ವೇಳೆಗೆ ಲೋಕಸಭಾ ಚುನಾವಣೆ ನಡೆಯುವ ಸಂಭವವಿದೆ. ಆದ್ದರಿಂದ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಪರಿಷತ್‌ ಸದಸ್ಯ ಜಗದೀಶ್ ಶೆಟ್ಟರ್ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ವರ್ಷದ ಕೊನೆಗೆ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು. ಹಾಗೆಯೇ ಕೆಲವು ಉಚಿತ ಯೋಜನೆ ಘೋಷಣೆ ಆಗಬಹುದು” ಎಂದರು.

“ಸಿಲಿಂಡರ್ ದರವನ್ನು ಈಗಾಗಲೇ ಕೇಂದ್ರ ಸರ್ಕಾರ ಸಾವಿರ ರೂಪಾಯಿ ಹೆಚ್ಚಿಸಿದೆ. ಈಗ ಕೇವಲ 200 ರೂಪಾಯಿ ಇಳಿಸಿದರೆ ಏನು ಉಪಯೋಗ? ಮೋದಿ ಅವರಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಕನಿಷ್ಠ 500 ರೂ. ಇಳಿಸಬೇಕಿತ್ತು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

“ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಅದರಂತೆ ಈಗಾಗಲೇ ಮೂರು ಯೋಜನೆ ಜಾರಿಯಾಗಿದ್ದು, ಇಂದು ನಾಲ್ಕನೇ ಯೋಜನೆ ಗೃಹಲಕ್ಷ್ಮೀಗೆ ಚಾಲನೆ ಸಿಕ್ಕಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಡವರು, ದೀನ ದಲಿತರು, ಮಧ್ಯಮ ವರ್ಗ ಸೇರಿ ಜನಸಾಮಾನ್ಯರಿಗೆ ಅನುಕೂಲವಾಗಿದೆ” ಎಂದರು.

“ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನದಿಂದ ಹತಾಶೆಗೊಂಡಿರುವ ಬಿಜೆಪಿ, ಇನ್ನಿಲ್ಲದ ಆರೋಪಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧೋಗತಿಗೆ ಹೋಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರ ಸೇರಿ ರಾಜ್ಯದಲ್ಲಿ 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...