ಸಾವಿರ ದರೋಡೆ, ಇನ್ನೂರು ಉಡುಗೊರೆ : ಇದು ಹೊಸ ಜುಮ್ಲಾ ಎಂದ ನಟ ಪ್ರಕಾಶ್ ರಾಜ್

Date:

  • ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರ ರೂ. 200 ಇಳಿಸಿದ ಕೇಂದ್ರ ಸರ್ಕಾರ
  • ತಿಂಗಳ ಹಿಂದೆ ಆನ್‌ಲೈನ್ ತರಗತಿಯಲ್ಲಿ ಶಿಕ್ಷಕ ನೀಡಿದ್ದ ಹೇಳಿಕೆ ಕೂಡ ವೈರಲ್

2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಎಲ್ಲ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.

ಓಣಂ ಮತ್ತು ರಕ್ಷಾಬಂಧನ್ ಹಬ್ಬದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಇದು ವಿಶೇಷ ಉಡುಗೊರೆಯಾಗಿ ದರ ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಹೇಳಿದೆಯಾದರೂ, ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿಯೇ ತೆಗೆದುಕೊಂಡಿರುವ ಈ ನಿರ್ಧಾರವು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

prakash raj and modi

ಕೇಂದ್ರದ ನಡೆಯನ್ನು ಟೀಕಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ‘ಇದು ಹೊಸ ಜುಮ್ಲಾ. ಸಾವಿರ ದರೋಡೆ ಮಾಡಿ, ಇನ್ನೂರು ಉಡುಗೊರೆಯಾಗಿ ಹಿಂತಿರುಗಿಸುವುದು’ ಎಂದು ಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

200 ರೂ ಕಡಿಮೆ ಮಾಡಿರುವ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದರು. ಈ ಹೇಳಿಕೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ ಅನ್ನು ರೀಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್, ‘ಇದು ಹೊಸ ಜುಮ್ಲಾ’ ಎಂದು ಟೀಕಿಸಿದ್ದಾರೆ.

ಈ ನಡುವೆ ಡಾ. ನಿಮೋ ಯಾದವ್ ಎಂಬ ಟ್ವಿಟರ್, ಅನ್ ಅಕಾಡೆಮಿ ಆನ್‌ಲೈನ್ ತರಗತಿ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರೊಫೆಸರ್ ಒಬ್ಬರು ಗ್ಯಾಸ್ ದರಕ್ಕೆ ಸಂಬಂಧಿಸಿ ಕಳೆದ ತಿಂಗಳು ನೀಡಿದ್ದ ಹೇಳಿಕೆಯನ್ನು ಟ್ವೀಟ್ ಮಾಡಿದ್ದಾರೆ. ತಿಂಗಳ ಹಿಂದೆಯೇ ದರ ಇಳಿಕೆಯ ಬಗ್ಗೆ ಈ ಪ್ರೊಫೆಸರ್ ಭವಿಷ್ಯ ನುಡಿದಿದ್ದರು ಎಂದು ಬರೆದುಕೊಂಡಿದ್ದಾರೆ.

ಟ್ವೀಟ್‌ನಲ್ಲಿ, ‘ಇವರು ಅವಧ್ ಓಜಾ. ಅನ್ ಅಕಾಡೆಮಿ ಆನ್‌ಲೈನ್ ತರಗತಿಯ ಶಿಕ್ಷಕ. ವಿಶ್ವದ ಇತಿಹಾಸವನ್ನು ಕಲಿಸುತ್ತಾರೆ. 2024ರ ಚುನಾವಣೆ ಸಮೀಪ ಬರುತ್ತಿದ್ದಂತೆ, ಮುಂಬರುವ ತಿಂಗಳುಗಳಲ್ಲಿ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಮತ್ತು ಇಂಧನದ ಬೆಲೆಗಳನ್ನು ಕಡಿಮೆ ಮಾಡುವುದನ್ನು ನೀವು ನೋಡುತ್ತೀರಿ. ಸರ್ಕಾರವು ಜನರನ್ನು ಮೂರ್ಖರನ್ನಾಗಿ ಮಾಡುವುದು ಹೀಗೆ ಎಂದಿದ್ದರು. ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ₹200 ರಷ್ಟು ಕಡಿಮೆ ಮಾಡಿದೆ. ಅವರ ಮಾತು ಇಂದು ನಿಜವಾಗಿದೆ” ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...