ರೈಲ್ವೆ ಕ್ರಾಸಿಂಗ್‌ನ ಗೇಟ್‌ಕೀಪರ್‌ಗೆ ತಮಿಳು ಗೊತ್ತಿಲ್ಲದ್ದು ಶಾಲಾ ವ್ಯಾನ್ ಅಪಘಾತಕ್ಕೆ ಕಾರಣವಾಗಿರಬಹುದು: ಡಿಎಂಕೆ ನಾಯಕ

Date:

ತಮಿಳುನಾಡಿನ ಕಡಲೂರಿನಲ್ಲಿ ಸಂಭವಿಸಿದ ಶಾಲಾ ವ್ಯಾನ್ ಅಪಘಾತಕ್ಕೆ ತಮಿಳು ಭಾಷೆ ಬರದಿರುವುದೇ ಕಾರಣವಾಗಿರಬಹುದು ಎಂದು ಡಿಎಂಕೆಯ ಹಿರಿಯ ನಾಯಕ ಟಿಕೆಎಸ್ ಎಳಂಗೋವನ್ ಮಂಗಳವಾರ ಆರೋಪಿಸಿದ್ದಾರೆ. “ರೈಲ್ವೆ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ತಮಿಳು ಭಾಷಿಕರಲ್ಲ, ಸರಿಯಾಗಿ ಸಂವಹನ ನಡೆಯದ್ದು ಈ ದುರಂತಕ್ಕೆ ಕಾರಣವಾಗಿರಬಹುದು” ಎಂದು ಡಿಎಂಕೆ ನಾಯಕ ಅಭಿಪ್ರಾಯಿಸಿದರು.

ಕಡಲೂರು ಮತ್ತು ಅಲಪ್ಪಕ್ಕಂ ನಡುವಿನ ಇಂಟರ್‌ಲಾಕ್ ಇಲ್ಲದ ಲೆವೆಲ್ ಕ್ರಾಸಿಂಗ್‌ನ ಗೇಟ್ ಸಂಖ್ಯೆ 170ರಲ್ಲಿ ಬೆಳಿಗ್ಗೆ 7.45ರ ಸುಮಾರಿಗೆ ಐದು ವಿದ್ಯಾರ್ಥಿಗಳಿದ್ದ ಶಾಲಾ ವ್ಯಾನ್‌ ಅಪಘಾತಕ್ಕೀಡಾಗಿದೆ. ಚಾಲಕ ರೈಲು ಬರುವ ಕಾರಣ ಗೇಟ್ ಮುಚ್ಚಿದ್ದಾಗ ಹಳಿ ದಾಟಿ ವಾಹನ ಚಲಾಯಿಸಲು ಯತ್ನಿಸಿದ್ದ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ವಿಲುಪುರಂ-ಮೈಲಾಡುತುರೈ ಪ್ಯಾಸೆಂಜರ್ ಸೇವೆಯ ರೈಲು ಸಂಖ್ಯೆ 56813, ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ನಿಮಿಲೇಶ್ (12), ಚಾರುಮತಿ (16) ಮತ್ತು ಚೆಝಿಯಾನ್ ಎಂದು ಗುರುತಿಸಲಾಗಿದೆ. ಉಳಿದವರು ಇನ್ನೂ ಕಡಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆಯ ನಂತರ ಪಂಕಜ್ ಶರ್ಮಾ ಎಂದು ಗುರುತಿಸಲಾದ ಗೇಟ್‌ಕೀಪರ್ ಅನ್ನು ಅಮಾನತುಗೊಳಿಸಲಾಗಿದ್ದು, ತನಿಖೆಯ ಭಾಗವಾಗಿ ಬಂಧಿಸಲಾಗಿದೆ. ಶರ್ಮಾ ಗೇಟ್ ಮುಚ್ಚುತ್ತಿರುವಾಗ ಹಳಿ ದಾಟಿ ವಾಹನ ಚಲಾಯಿಸದಂತೆ ಎಚ್ಚರಿಕೆ ನೀಡಿದ್ದರೂ ವ್ಯಾನ್ ಚಾಲಕ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆದರೆ ತಮಿಳು ಬಾರದಿರುವುದು ಕಾರಣವಾಗಿರಬಹುದು ಎಂದು ಡಿಎಂಕೆ ನಾಯಕ ಅಭಿಪ್ರಾಯಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಡಿಕ್ಕಿಗೆ ಕಾರಣ ಪತ್ತೆಗಾಗಿ ಸದ್ಯ ರೈಲ್ವೆ ಮತ್ತು ಸ್ಥಳೀಯ ಪೊಲೀಸರ ಜಂಟಿ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...