ಮಹಾ ಚುನಾವಣೆ | 5 ತಿಂಗಳಲ್ಲಿ 39 ಲಕ್ಷ ಮತದಾರರ ನೋಂದಣಿ; ಅಕ್ರಮ ನಡೆದಿದೆ ಎಂದ ರಾಹುಲ್‌ ಗಾಂಧಿ

Date:

ಕಳೆದ ವರ್ಷ ನಡೆದ ಮಹಾರಾಷ್ಟ್ರದ ಚುನಾವಣೆ ಹಲವು ಕಾರಣಗಳಿಂದ ಇಡೀ ದೇಶದ ಗಮನ ಸೆಳೆದಿತ್ತು. ವಿಧಾನಸಭಾ ಚುನಾವಣಾ ಫಲಿತಾಂಶ ಆಶ್ಚರ್ಯ ಉಂಟು ಮಾಡಿದ್ದರೆ, ಆಡಳಿತ ವಿರೋಧಿ ಅಲೆ ಇದ್ದಾಗಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಹಲವರಲ್ಲಿ ಗಂಭೀರ ಪ್ರಶ್ನೆ ಹುಟ್ಟುಹಾಕಿತ್ತು. ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌, ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಆರೋಪಿಸುತ್ತಲೇ ಬಂದಿದ್ದವು. ಇದೀಗ, ಆ ಆರೋಪಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಕೇವಲ ಐದು ತಿಂಗಳ ಅವಧಿಯಲ್ಲಿ 39 ಲಕ್ಷಕ್ಕೂ ಹೆಚ್ಚು ಮತದಾರರು ಹೊಸದಾಗಿ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಶುಕ್ರವಾರ, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿಯ ಶರದ್‌ ಪವಾರ್‌ ಬಣ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಹುಲ್‌ಗಾಂಧಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದ ಭಾರೀ ಅಕ್ರಮದ ಬಗ್ಗೆ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.

2019ರ ವಿಧಾನಸಭೆಯಿಂದ 2024ರಲ್ಲಿ ನಡೆದ ಲೋಕಸಭೆ ಚುನಾವಣೆ ಈ ಐದು ವರ್ಷಗಳ ಅಂತರದಲ್ಲಿ ಮಹಾರಾಷ್ಟ್ರದಲ್ಲಿ 32 ಲಕ್ಷ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಆದರೆ, 2024 ಲೋಕಸಭಾ ಚುನಾವಣೆ ನಂತರ ಐದು ತಿಂಗಳಲ್ಲಿ 39 ಲಕ್ಷ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಸೇರ್ಪಡೆಯಾದ ಒಟ್ಟು ಮತದಾರರ ಸಂಖ್ಯೆ ಹಿಮಾಚಲ ಪ್ರದೇಶದಂತಹ ರಾಜ್ಯದ ಜನಸಂಖ್ಯೆಗೆ ಸಮನಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹರಾಷ್ಟ್ರದಲ್ಲಿ ಇದ್ದಕ್ಕಿಂದ್ದಂತೆ ಇಷ್ಟೊಂದು ಸಂಖ್ಯೆಯಲ್ಲಿ ಹೊಸದಾಗಿ ಮತದಾರರು ಸೇರ್ಪಡೆಯಾಗಿರುವ ಬಗ್ಗೆ ಆತಂಕ ಮತ್ತು ಆಶ್ಚರ್ಯ ವ್ಯಕ್ತ ಪಡಿಸಿರುವ ಅವರು ಪರಿಷ್ಕೃತ ಮತದಾರರ ಪಟ್ಟಿಯನ್ನು ಒದಗಿಸುವಂತೆ ಚುನಾವಣಾ ಆಯೋಗವನ್ನು ಕೇಳಿದ್ದಾರೆ.

ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗವು ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ವಾಸ್ತವಾಂಶಗಳೊಂದಿಗೆ ಲಿಖಿತವಾಗಿ ಈ ಆರೋಪಕ್ಕೆ ಪ್ರತಿಕ್ರಿಯಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪ ಮಾಡಿದ ಕೂಡಲೇ ಚುನಾವಣಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ರಾಜಕೀಯ ಪಕ್ಷಗಳನ್ನು ಆದ್ಯತೆಯ ಪಾಲುದಾರರು ಎಂದು ಚುನಾವಣಾ ಆಯೋಗ ಪರಿಗಣಿಸುತ್ತದೆ. ಸಹಜವಾಗಿ ಮತದಾರರು ಕೂಡ ಪ್ರಧಾನರಾಗಿದ್ದಾರೆ ಮತ್ತು ರಾಜಕೀಯ ಪಕ್ಷಗಳಿಂದ ಬರುವ ಅಭಿಪ್ರಾಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಆಯೋಗ ಗೌರವಿಸುತ್ತದೆ. ‘ದೇಶದಾದ್ಯಂತ ಏಕರೂಪವಾಗಿ ಅಳವಡಿಸಿಕೊಂಡಿರುವ ಸಂಪೂರ್ಣ ವಾಸ್ತವಿಕ ಮತ್ತು ಕಾರ್ಯವಿಧಾನ ಸಂಪೂರ್ಣ ಮಾಹಿತಿಯೊಂದಿಗೆ ಆಯೋಗವು ಲಿಖಿತವಾಗಿ ಪ್ರತಿಕ್ರಿಯಿಸುತ್ತದೆ’ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...