ಹಿಂದು ಭಾವನೆಗೆ ಶಿಕ್ಷಕಿ ಧಕ್ಕೆ ತಂದಿಲ್ಲ; ಬಿಜೆಪಿ ಶಾಸಕನ ಒತ್ತಡದಿಂದ ಅಮಾನತು: ಜೆರೋಸಾ ಶಾಲೆ ಮುಖ್ಯಶಿಕ್ಷಕಿ

Date:

ಹಿಂದು ಧಾರ್ಮಿಕ ಭಾವನೆಗೆ ಶಿಕ್ಷಕಿ ಪ್ರಭಾ ಅವರು ಧಕ್ಕೆ ತಂದಿಲ್ಲ. ಆದರೆ, ಅವರನ್ನು ಅಮಾನತು ಮಾಡುವಂತೆ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಒತ್ತಡ ಹಾಕಿದರು ಎಂದು ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯ ಮುಖ್ಯಶಿಕ್ಷಕಿ ಅನಿತಾ ಹೇಳಿದ್ದಾರೆ.

ಸೈಂಟ್ ಜೆರೋಸಾ ಶಾಲೆಯಲ್ಲಿ ಫೆಬ್ರವರಿ 8 ಪಾಠ ಮಾಡುವಾಗ ಶಿಕ್ಷಕಿ ಹಿಂದು ಭಾವನೆಗೆ ಧಕ್ಕೆ ತಂದಿದ್ದಾರೆಂದು ವಿವಾದ ಎದ್ದಿತ್ತು. ವಿವಾದದ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಶಿಕ್ಷಕಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ರವೀಂದ್ರನಾಥ ಠಾಗೋರ್ ರಚಿಸಿದ ‘ವರ್ಕ್‌ ಈಸ್‌ ವರ್ಷಿಪ್’ ಕವನವನ್ನು ಬೋಧಿಸುವಾಗ ಸಿ. ಪ್ರಭಾ ಅವರು ಹಿಂದೂ ಧರ್ಮ ಮತ್ತು ಪ್ರಧಾನಿ ವಿರುದ್ಧ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಶಿಕ್ಷಕಿ ಹಿಂದು ಭಾವನೆಗಳಿಗೆ ಧಕ್ಕೆ ತಂದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕವಿತೆಯನ್ನು ವಿದ್ಯಾರ್ಥಿಗಳಿಗೆ ಕಲಿಸುವಾಗ ಶಿಕ್ಷಕಿ, ‘ದೇವಾಲಯಗಳು, ಚರ್ಚುಗಳು ಮತ್ತು ಮಸೀದಿಗಳು ಕೇವಲ ಕಟ್ಟಡಗಳು. ದೇವರು ಮಾನವ ಹೃದಯದಲ್ಲಿ ನೆಲೆಸಿದ್ದಾನೆ. ಆದ್ದರಿಂದ ದೇವರ ಹೆಸರಿನಲ್ಲಿ ಮನುಷ್ಯರನ್ನು ಕೊಲ್ಲಬಾರದು. ನಾವು ಕೆಲಸ ಮತ್ತು ಮನುಷ್ಯರನ್ನು ಗೌರವಿಸಬೇಕು ಮತ್ತು ಅವರಲ್ಲಿ ದೇವರನ್ನು ಕಾಣಬೇಕು. ದೇವರು ರಚನೆಗಳಲ್ಲಿ ಅಸ್ತಿತ್ವದಲ್ಲಿಲ್ಲ. ಆದರೆ ಮಾನವ ಹೃದಯದಲ್ಲಿ ಮತ್ತು ನಾವೆಲ್ಲರೂ ದೇವರ ದೇವಾಲಯಗಳು’ ಎಂದು ಬೋಧಿಸಿದ್ದರು. ಇದರಲ್ಲಿ, ಶಿಕ್ಷಕಿ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತರುವ ಮಾತನ್ನಾಡಿಲ್ಲ. ಕವಿತೆಯ ಅರ್ಥವನ್ನು ವಿದ್ಯಾರ್ಥಿಗಳಿಗೆ ವಿವರಿಸಿದ್ದಾರೆ” ಎಂದು ಹೇಳಿದ್ದಾರೆ.

“ಆಡಿಯೋ ಸಂದೇಶದಲ್ಲಿ ಅನಾಮಧೇಯ ಮಹಿಳೆ ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ, ಶಿಕ್ಷಕಿ ಪ್ರಭಾ ಅವರು ಕವಿತೆಯನ್ನು ವಿವರಿಸುವಾಗ ಹಿಂದು ಅಥವಾ ಯಾವುದೇ ಇತರ ಧರ್ಮದ ವಿರುದ್ಧ ಅಥವಾ ಪ್ರಧಾನಿಯ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡಿಲ್ಲ. ಶಾಲಾ ಆಡಳಿತ ಮಂಡಳಿಯು ಜಿಲ್ಲಾಡಳಿತವನ್ನು ಸಂಪರ್ಕಿಸಿ ಆಡಿಯೋ ಸಂದೇಶವು ಸತ್ಯಕ್ಕೆ ದೂರವಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ರಕ್ಷಣೆ ಕೋರಿದೆ. ವೈರಲ್ ಆಗಿರುವ ಮಹಿಳೆಯ ಆಡಿಯೋ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ಕೂಡ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

“ಫೆಬ್ರವರಿ 12ರಂದು ಶಿಕ್ಷಣ ಇಲಾಖೆಯಿಂದ, ಬಿಇಒ ಕಚೇರಿಯಿಂದ ವಿಷಯ ಪರಿವೀಕ್ಷಕರು, ಡಿಡಿಪಿಐ ಕಚೇರಿಯ ಸಮನ್ವಯಾಧಿಕಾರಿ, ಬಿಇಒ, ಇಸಿಒ ಮತ್ತು ಸಿಆರ್‌ಪಿ ಶಾಲೆಗೆ ಭೇಟಿ ನೀಡಿದ್ದು, ಅವರ ಕೋರಿಕೆಯ ಮೇರೆಗೆ ಸತ್ಯವನ್ನು ವಿವರಿಸಲಾಗಿದೆ. ಇದಾದ ಬಳಿಕ ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಅವರು ಹಿಂದು ಸಂಘಟನೆಗಳೊಂದಿಗೆ ಬಂದು ಶಾಲೆಯ ವಿರುದ್ಧ ಘೋಷಣೆ ಕೂಗಿದರು. ಆಡಳಿತವು ಅವರನ್ನು ಗುರುತಿಸಿ, ಅವರಿಗೆ ಅರ್ಹ ಗೌರವ ನೀಡಿ ಶಾಲೆಯೊಳಗೆ ಆಹ್ವಾನಿಸಿತು. ಆದರೆ, ಅವರು ಒಳಗೆ ಬರಲು ನಿರಾಕರಿಸಿದರು. ಅವರು ಶಾಲೆ ಮತ್ತು ಆಡಳಿತದ ವಿರುದ್ಧ ಪ್ರತಿಭಟಿಸಿದರು. ಸರ್ವಜನಾಂಗದವರನ್ನು ಗೌರವಿಸಬೇಕಿದ್ದ ಶಾಸಕರು ಶಾಲೆಯ ಮಕ್ಕಳನ್ನೇ ಶಾಲೆ ವಿರುದ್ಧ ಘೋಷಣೆ ಕೂಗಲು ಪ್ರಚೋದಿಸಿದರು. ಅವರ ವರ್ತನೆ ನೋವು ತಂದಿದೆ” ಎಂದು ಮುಖ್ಯಶಿಕ್ಷಕಿ ವಿವರಿಸಿದ್ದಾರೆ.

“ಶಾಲೆಯ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕರನ್ನು ಭೇಟಿ ಮಾಡುವಂತೆ ಬಿಇಒ ಹಾಗೂ ಇತರ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ ಮೇರೆಗೆ ಬಳಿಕ ನಾನು ಅವರನ್ನು ಭೇಟಿ ಮಾಡಿದೆ. ಅವರು ಶಿಕ್ಷಕಿಯನ್ನು ತತ್‌ಕ್ಷಣ ವಜಾಗೊಳಿಸುವಂತೆ ನನಗೆ ಒತ್ತಡ ಹಾಕಿದರು. ಅಮಾನತು ಮಾಡದಿದ್ದರೆ, ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದರು. ಶಿಕ್ಷಣ ಸಂಸ್ಥೆಯ ನಿಯಮಗಳ ಪ್ರಕಾರ ವಿಚಾರಣೆಯಿಲ್ಲದೆ ಶಿಕ್ಷಕರನ್ನು ಅಮಾನತು ಮಾಡಲು ಸಾಧ್ಯವಿಲ್ಲವೆಂದು ತಿಳಿಸದರೂ, ಅವರು ಕೇಳಲಿಲ್ಲ. ಬೇರೆ ದಾರಿಯಿಲ್ಲದೆ ಮತ್ತು ಕಾನೂನು-ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸೇರಿದ್ದ ಗುಂಪನ್ನು ಚದುರಿಸಲು, ಶಿಕ್ಷಕಿ ಪ್ರಭಾ ಅವರನ್ನು ಅನಿವಾರ್ಯವಾಗಿ ಅಮಾನತು ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ಶಿಕ್ಷಕಿಯಿಂದ ಧರ್ಮ ಅವಹೇಳನ ಪ್ರಕರಣ; ಸತ್ಯಶೋಧನಾ ತನಿಖೆಗೆ ಕಾಂಗ್ರೆಸ್ ಆಗ್ರಹ

“ಶಿಕ್ಷಕಿ ಪ್ರಭಾ ಅವರಿಗೆ ಜೆರೋಸಾ ಶಾಲೆಯಲ್ಲಿ ಐದು ವರ್ಷ ಅನುಭವ ಸೇರಿದಂತೆ 16 ವರ್ಷಗಳ ಬೋಧನಾನುಭವ ಇದೆ. ಅವರ ವಿರುದ್ಧ ಇದುವರೆಗೆ ಯಾವುದೇ ದೂರು ಬಂದಿಲ್ಲ. ಇಡೀ ಪ್ರಕರಣದಲ್ಲಿ ಗಮನಿಸುವ ನಿರ್ಣಾಯಕ ಅಂಶವೆಂದರೆ – ವೈರಲ್ ಆಡಿಯೋದಲ್ಲಿ ಶಾಲೆಯ ಬಗ್ಗೆ ಮಾತನಾಡಿದ ಮಹಿಳೆ ನಿಜವಾಗಿಯೂ ಜೆರೋಸಾ ವಿದ್ಯಾರ್ಥಿಯ ಪೋಷಕರೇ ಎಂಬುದು. ಆಕೆ ಪೋಷಕಿಯಾಗಿಲ್ಲದಿದ್ದರೆ, ಇಂತಹ ಸುಳ್ಳು ಆರೋಪಗಳನ್ನು ಮಾಡುವ ಹಿಂದೆ ಆಕೆಯ ಅಜೆಂಡಾ ಏನು. ಆಕೆ ಪೋಷಕರಾಗಿದ್ದರೆ ಶಾಲೆಯ ಆಡಳಿತ ಮಂಡಳಿಗೆ ಈ ಬಗ್ಗೆ ಲಿಖಿತ ದೂರು ಏಕೆ ನೀಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕನಿಷ್ಠ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಾಲೆಯ ಪ್ರತಿಷ್ಠೆಯನ್ನು ಹಾಳುಗೆಡಹಲು ಈ ಘಟನೆ/ಪ್ರತಿಭಟನೆಯನ್ನು ಆಯೋಜಿಸಿದಂತೆ ತೋರುತ್ತದೆ. ನಾವು ಜಾತ್ಯತೀತರಾಗಿದ್ದೇವೆ ಮತ್ತು ಯಾವಾಗಲೂ ಎಲ್ಲಾ ವಿದ್ಯಾರ್ಥಿಗಳನ್ನು ಗೌರವಿಸುತ್ತೇವೆ ಮತ್ತು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಯಾರನ್ನೂ ತಾರತಮ್ಯ ಮಾಡುವುದಿಲ್ಲ. ಪ್ರತಿ ವರ್ಷ ನಾವು ದೀಪಾವಳಿ, ಕ್ರಿಸ್ಮಸ್ ಮತ್ತು ಈದ್ ಆಚರಿಸುತ್ತೇವೆ.
ಅಹಿತಕರ ಘಟನೆ ನಡೆದಾಗ ಪೊಲೀಸರು ಮಾಧ್ಯಮದವರನ್ನು ಜೆರೋಸಾ ಆವರಣದೊಳಗೆ ಬಿಡಲಿಲ್ಲ ಎಂದು ಹೇಳಲಾಗಿದೆ. ಅದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ” ಎಂದು ಮುಖ್ಯಶಿಕ್ಷಕಿ ಅನಿತಾ ಹೇಳಿದ್ದಾರೆ.

ಶಿಕ್ಷಕಿ ಭೋಧಿಸಿದ್ದ ಕವನ ಹೀಗಿದೆ:
‘ತೊರೆದು ಬಿಡು ಆ ನಿನ್ನ ಮಂತ್ರ ಪಠಣಗಳನ್ನು
ಸುಮ್ಮನೆ ಕುಳಿತುಕೊಳ್ಳಬೇಡ
ದೇವರು ಗುಡಿ ಚರ್ಚು ಮಸೀದಿಗಳಲ್ಲಿ ಇಲ್ಲ
ಕಣ್ಣನ್ನು ತೆರೆದು ನೋಡು, ಇಲ್ಲಿ ಇದ್ದಾನೆ
ನೇಗಿಲ ಯೋಗಿಯೊಳಗೆ ಇದ್ದಾನೆ
ಕಠಿಣ ಪರಿಶ್ರಮಿಯಲ್ಲಿ ಇದ್ದಾನೆ
ಶುದ್ಧತೆಯ ಹೆಸರಲ್ಲಿ ಮೈಗೆ ಸ್ನಾನ ಮಾಡುವವನಲ್ಲಿ ಇಲ್ಲ
ಮೂಢ ಮಡಿವಂತಿಕೆಯಲ್ಲಿ ಇಲ್ಲ
ಮೂಢ ಸಂಪ್ರದಾಯದಲ್ಲಿ ಇಲ್ಲ
ಇಳಿದು ಬಾ ಈ ದೂಳಿನ ಮಣ್ಣಿಗೆ
ಪರಿಶ್ರಮ ಪಟ್ಟು ದುಡಿದು ಕೆಲಸ ಮಾಡಿದರೆ ನೀನು ದೇವರ ಕೃಪೆಗೆ ಪಾತ್ರನಾಗುತ್ತಿ’

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...