ಜಮೀನು ಕೊಟ್ಟಿದೀವಿ, ಉದ್ಯೋಗ ನೀಡಿಲ್ಲ; ಇನ್ಫೋಸಿಸ್‌ಗೆ ನೀಡಿದ ಭೂಮಿ ವಾಪಸ್ ಪಡೆಯಿರಿ: ಬಿಜೆಪಿ ಶಾಸಕ ಬೆಲ್ಲದ್

Date:

“ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ – ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು” ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಬಜೆಟ್‌ ಅಧಿವೇಶನದ ಮೂರನೇ ದಿನದ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ” ನನ್ನ ಕ್ಷೇತ್ರದಲ್ಲಿ (ಹುಬ್ಬಳ್ಳಿ – ಧಾರವಾಡ ಪಶ್ಚಿಮ) ಕೈಗಾರಿಕಾ ಕಾರಿಡಾರ್ ಇದೆ. ಇನ್ಫೋಸಿಸ್‌ನವರು 58 ಎಕರೆ ಜಾಗ ತೆಗೆದುಕೊಂಡಿದ್ದಾರೆ. ಆದರೆ, ನನ್ನ ಕ್ಷೇತ್ರದ ಒಬ್ಬರಿಗೂ ಅಲ್ಲಿ ನೌಕರಿ ನೀಡಲಿಲ್ಲ” ಎಂದು ಆರೋಪಿಸಿದ್ದಾರೆ.

“ಎಕರೆಗೆ ಒಂದೂವರೆ ಕೋಟಿ ರೂಪಾಯಿ ಬೆಲೆಬಾಳುವ ಜಮೀನನ್ನು ರೈತರಿಂದ 35 ಲಕ್ಷ ರೂಪಾಯಿಗೆ ಇನ್ಫೋಸಿಸ್‌ಗೆ ಕೊಡಲಾಗಿದೆ. ಆದರೆ, ಕೈಗಾರಿಕೆಗೆ ಕೊಟ್ಟಿರುವ ಜಮೀನಿನಲ್ಲಿ ಅವರು ತೋಟ ಮಾಡಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ಫೋಸಿಸ್ ಅಂತಹ ಕಂಪೆನಿ ನಮ್ಮ ನಗರಕ್ಕೆ ಬಂದರೆ ನಮ್ಮ ಮಕ್ಕಳಿಗೆ ಅಲ್ಲಿ ಉದ್ಯೋಗ ಸಿಗುತ್ತದೆ ಎಂದು ರೈತರಿಗೆ ವಿನಂತಿ ಮಾಡಿಕೊಂಡು ಜಮೀನನ್ನು ಮಾರಾಟ ಮಾಡಲಾಗಿದೆ. ಆ ರೈತರನ್ನು ನಾನೀಗ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತಹ ಪರಿಸ್ಥಿತಿಯಲ್ಲಿ ನಾನಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರು ಈ ಅನ್ಯಾಯ ಖಂಡಿಸಿ ನ್ಯಾಯಾಲಯದ ಮೊರೆ ಹೋಗುವುದನ್ನು ನಾನು ತಪ್ಪಿಸಿದ್ದೇನೆ. ಕೂಡಲೇ ರಾಜ್ಯ ಸರ್ಕಾರ ಇನ್ಫೋಸಿಸ್ ಸಂಸ್ಥೆಗೆ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

“ಹುಬ್ಬಳ್ಳಿ ನಿಲ್ದಾಣ ಪ್ರಾಧಿಕಾರದವರು ಕೂಡ ಇದೇ ರೀತಿ ಅನ್ಯಾಯ ಮಾಡಿದ್ದಾರೆ. ಒಂದೇ ಒಂದು ಉದ್ಯೋಗ ನೀಡದೇ ನಮ್ಮ ನೆಲಕ್ಕೆ ದ್ರೋಹ ಬಗೆದಿದ್ದಾರೆ. ಇವರಿಗೆಲ್ಲಾ ದಂಡ ಬಿದ್ದರೇನೇ ಬುದ್ದಿ ಬರುವುದು” ಬೆಲ್ಲದ್ ಅಭಿಪ್ರಾಯ ಪಟ್ಟರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಧ್ಯ ಪ್ರವೇಶಿಸಿ, “ನೌಕರಿಯನ್ನು ಕೊಡದೇ ಇದ್ದರೆ, ಸಂಸ್ಥೆಯನ್ನು ಮುಚ್ಚಲು ಸಾಧ್ಯವಿಲ್ಲ. ಅಲ್ಲಿ ಸಾವಿರಾರು ಜನ ಕೆಲಸ ಮಾಡಿಕೊಂಡಿದ್ದಾರೆ. ಅದಕ್ಕೆ, ನಿಯಮವನ್ನು ಉಲ್ಲಂಘಿಸಿದರೆ ದಂಡ ವಿಧಿಸಿದರೆ, ರೈತರಿಗೂ ಇದರಿಂದ ಸಹಾಯ ಆಗಬಹುದು” ಎಂದರು.

“ಜಮೀನನ್ನು ಪಡೆದುಕೊಂಡು ಯಾವುದೇ ಸಂಸ್ಥೆ ಕಾರ್ಯಾರಂಭ ಮಾಡಿದ ಮೇಲೆ ಏನೂ ಮಾಡಲು ಸಾಧ್ಯವಿಲ್ಲ. ಏನಾದರೂ ಕ್ರಮ ತೆಗೆದುಕೊಂಡರೆ, ಐದೇ ನಿಮಿಷದಲ್ಲಿ ಕೋರ್ಟಿನಿಂದ ಸ್ಟೇ ತರುತ್ತಾರೆ” ಎಂದು ಹೇಳಿದರು.

ಅರವಿಂದ್‌ ಬೆಲ್ಲದ ಅವರ ಪ್ರಶ್ನೆಗೆ ಉತ್ತರಿಸಿದ ಐಟಿ ಸಚಿವ ಪ್ರಿಯಾಂಕ್ ಖರ್ಗೆ, “ಇನ್ಫೋಸಿಸ್ ಆಗಲಿ ಅಥವಾ ವಿಮಾನ ನಿಲ್ದಾಣ ಪ್ರಾಧಿಕಾರವೇ ಆಗಲಿ ಸ್ಥಳೀಯರಿಗೆ ಅವರವರ ವಿದ್ಯಾರ್ಹತೆಗೆ ಅನುಗುಣವಾಗಿ ಕಡ್ಡಾಯ ಕೆಲಸ ನೀಡಬೇಕಾಗುತ್ತದೆ. ಆ ರೀತಿ ಕಾನೂನಿನಲ್ಲೇ ಸ್ಪಷ್ಟನೆ ನೀಡಲಾಗಿದೆ. ಉದ್ಯೋಗ ನೀಡದೇ ಇದ್ದರೆ ಅದು ತಪ್ಪಾಗುತ್ತದೆ” ಎಂದರು.

“ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರವೇ ನೇರವಾಗಿ ನಿರ್ವಹಿಸುತ್ತಿದ್ದರೆ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಬೇಕಾಗುತ್ತದೆ” ಎಂದು ಖರ್ಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...