ಗಿಫ್ಟ್‌ ಪಾಲಿಟಿಕ್ಸ್‌ | ಬೆಳ್ಳಿ ಎಂದು ನಕಲಿ ಬೆಳ್ಳಿ ಲಕ್ಷ್ಮಿ ಫೋಟೋ ಕೊಟ್ಟ ಬಿಜೆಪಿ ಶಾಸಕ

Date:

  • ಬೆಳ್ಳಿ ಲಕ್ಷ್ಮಿ ಫೋಟೋ ಹರಿದ ಮಹಿಳೆ
  • ಬಿಜೆಪಿ ಉಡುಗೊರೆಗೆ ಮಹಿಳೆ ಆಕ್ರೋಶ

ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಡುವೆ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಬೆಳ್ಳಿ ಫೋಟೋ ಎಂದು ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಆದರೆ, ಬಿಜೆಪಿ ಶಾಸಕ ನೀಡಿರುವ ಬೆಳ್ಳಿಯ ಅಸಲಿಯತ್ತನ್ನು ಮಹಿಳೆಯೊಬ್ಬರು ಬಯಲು ಮಾಡಿದ್ದಾರೆ.

ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಸದಾ ಹೇಳಿಕೊಳ್ಳುವ ಪ್ರೀತಂ ಗೌಡ ಅವರು ಮಹಿಳೆಯರಿಗೆ ಬೆಳ್ಳಿಯ ಲಕ್ಷ್ಮಿ ಫೋಟೋ ನೀಡಿದ್ದಾರೆ. ಆದರೆ, ಅದು ಬೆಳ್ಳಿಯದ್ದಲ್ಲ ನಕಲಿ ಎಂಬುದು ವಿಡಿಯೋ ಮೂಲಕ ಬಹಿರಂಗವಾಗಿದೆ.

ಕಳೆದ ಹದಿನೈದು ದಿನದಿಂದ ಹಾಸನ ಕ್ಷೇತ್ರದ ವ್ಯಾಪ್ತಿಯಲ್ಲಿ ಅಷ್ಟಲಕ್ಷ್ಮಿ ಪೂಜೆ ಹೆಸರಿನಲ್ಲಿ ಮತದಾರರ ಸೆಳೆಯಲು ಯತ್ನ ನಡೆಯುತ್ತಿದೆ. ಶಾಸಕ ಪ್ರೀತಂಗೌಡ ಬೆಂಬಲಿಗರಿಂದ ವಾರ್ಡ್‌ವಾರು ಹಾಗು ಗ್ರಾ.ಪಂಚಾಯಿತಿವಾರು ಕಾರ್ಯಕ್ರಮ ನಡೆಯುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

ಬಿಜೆಪಿ ಶಾಸಕ ನೀಡಿದ ಬೆಳ್ಳಿ ಲಕ್ಷ್ಮಿ ಫೋಟೋದ ಅಸಲಿಯತ್ತು ಬಯಲು ಮಾಡಿದ ಮಹಿಳೆಯೊಬ್ಬರು ವಿಡಿಯೋದಲ್ಲಿ, “ಇದು ಬೆಳ್ಳಿ ಫೋಟೋ ಅಂತ ಕೊಟ್ಟವ್ರೆ, ಬೆಳ್ಳಿದೋ ಬಂಗಾರದ್ದೋ ನೋಡೋಣ, ಬೆಳ್ಳಿನ ನೀರಿಗೆ ಬಿಡ್ತಿವಿ ನೋಡಿ” ಎಂದು ಫೋಟೋವನ್ನು ಬಿಚ್ಚಿದ್ದಾರೆ.

ಬೆಳ್ಳಿ ಬಣ್ಣದ ಪೇಪರ್ ಮೂಲಕ ಲಕ್ಷ್ಮಿ ಫೋಟೋ ಮಾಡಲಾಗಿದ್ದು, “ನೋಡಿ, ಇದು ಬೆಳ್ಳಿ ಲಕ್ಷ್ಮಿ, ಇದು ಮಾರಿದ್ರೆ ಮೂವತ್ತು ಸಾವ್ರ ಸಿಗುತ್ತೆ ನೋಡಿ” ಎಂದು ಹರಿದು ಬಿಸಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...