ತಲಾ 10 ಕೆಜಿ ಅಕ್ಕಿ ಕೊಟ್ಟರೆ, ‘ನುಡಿದಂತೆ ನಡೆದ ಸರ್ಕಾರ’ವೆಂದು ನಾವೇ ಹೇಳುತ್ತೇವೆ: ಬಿಜೆಪಿ ಸಂಸದ

Date:

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್‌ ಭರವಸೆ ನೀಡಿರುವ 10 ಕೆ.ಜಿ ಅಕ್ಕಿಯ ಬದಲಿಗೆ 340 ರೂ. ಪಡಿತರ ಖಾತೆಗೆ ಹಾಕಬೇಕು ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪಡಿತರದಾರರಿಗೆ ತಲಾ 10 ಕೆ.ಜಿ ಕೊಟ್ಟರೆ ನುಡಿದಂತೆ ನಡೆದ ಸರ್ಕಾರ ಎಂದು ನಾವೂ ಹೇಳುತ್ತೇವೆ” ಎಂದಿದ್ದಾರೆ.

ವಿಧಾನಸಭಾ ಚುನಾವಣೆ ಸಮಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಕಾಂಗ್ರೆಸ್‌ ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ, 10 ಕೆ.ಜಿ ಅಕ್ಕಿ ಕೊಡಲು ಕಸರತ್ತು ನಡೆಸಿತ್ತು. ಆದರೆ, ಕೇಂದ್ರವು ಹೆಚ್ಚುವರಿ ಅಕ್ಕಿ ಕೊಡಲು ಸಾಧ್ಯವಿಲ್ಲವೆಂದು ಹೇಳಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ, ಅಕ್ಕಿ ಖರೀದಿ ಬಗ್ಗೆ ಮಾತನಾಡಿದ್ದರು. ಆದರೆ, ಯಾವ ರಾಜ್ಯಗಳಿಂದಲೂ ಅಗತ್ಯ ಅಕ್ಕಿ ಸಿಗದ ಪರಿಣಾಮ, ಐದು ಕೆ.ಜಿ ಅಕ್ಕಿ ಕೊಡುತ್ತೇವೆ. ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ಪಡಿತರದಾರರ ಖಾತೆ ಹಾಕುತ್ತೇವೆಂದು ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...