ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ಲೂಟಿ ಹೊಡೆದ ಸಂಪತ್ತು ನೀವೇ ಕೊಟ್ಟುಬಿಡಿ: ಕಾಂಗ್ರೆಸ್‌ಗೆ ವಿಜಯೇಂದ್ರ ಸಲಹೆ

Date:

ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಸಂಸದರ ಮನೆಗೆ ಐಟಿ ದಾಳಿಯ ವೇಳೆಯಲ್ಲಿ ಸುಮಾರು 200 ಕೋಟಿ ನಗದು ಪತ್ತೆ ವಿಚಾರ ಈಗ ದೇಶಾದ್ಯಂತ ಸುದ್ದಿಯಾಗುತ್ತಿದೆ. ಈ ಬೆಳವಣಿಗೆಯ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ಲೂಟಿ ಹೊಡೆದ ಸಂಪತ್ತನ್ನು ನೀವೇ ಕೊಟ್ಟುಬಿಡಿ” ಎಂದು ಕಾಂಗ್ರೆಸ್‌ಗೆ ಸಲಹೆ ನೀಡಿದ್ದಾರೆ.

ತಮ್ಮ ಸುದೀರ್ಘ ಟ್ವೀಟ್‌ನಲ್ಲಿ, “ಈ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗುತ್ತಿಲ್ಲ, ಅದರಲ್ಲಿ ಮುಸ್ಲಿಮರಿಗೆ ಪಾಲು ಸಿಗುತ್ತಿಲ್ಲ ಎಂದು ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಓಲೈಕೆ ಭಾಷಣ ಮಾಡಿದ್ದರು. ಈ ದೇಶದ ಜನರ ಸಂಪತ್ತು ಯಾರ ಬಳಿ ಇದೆ? ಲೂಟಿ ಹೊಡೆದವರಾರು? ಎಂಬ ನಿಮ್ಮ ಆವೇಶಭರಿತ ಪ್ರಶ್ನೆಗಳಿಗೆ ಐಟಿ ಅಧಿಕಾರಿಗಳು ಇದೀಗ ಉತ್ತರ ದೊರಕಿಸಿಕೊಟ್ಟಿದ್ದಾರೆ” ಎಂದು ವಿಜಯೇಂದ್ರ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಏಜೆಂಟರ ಮೇಲೆ ಐಟಿ ದಾಳಿ ನಡೆದಷ್ಟೂ, ಜನರಿಂದ ಲೂಟಿ ಹೊಡೆದ ಅಕ್ರಮ ಕಪ್ಪು ಹಣ ಪತ್ತೆಯಾಗುತ್ತಲೇ ಇದೆ. ಸದ್ಯ ನಡೆದಿರುವ ಐಟಿ ದಾಳಿಯಲ್ಲಿ ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಬಳಿ ಸರಿ ಸುಮಾರು 156 ಚೀಲಗಳಲ್ಲಿ ಬರೋಬ್ಬರಿ 225 ಕೋಟಿ ನಗದು ಪತ್ತೆ ಪ್ರಕರಣ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಕರಾಳ ಮುಖ ದರ್ಶನ ಮಾಡಿಸಿದೆ” ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನು ಓದಿದ್ದೀರಾ? ಮೂರು ರಾಜ್ಯಗಳಲ್ಲಿ ಮುಂದುವರೆದ ಐಟಿ ದಾಳಿ: ಪತ್ತೆಯಾಯ್ತು ಬರೋಬ್ಬರಿ ₹290 ಕೋಟಿ

“ಸುದೀರ್ಘ ಕಾಲ ಕಾಂಗ್ರೆಸ್ ಲೂಟಿ ಹೊಡೆದಿರುವ ಈ ದೇಶದ ಸಂಪತ್ತು ಎಲ್ಲೆಲ್ಲಿವೇ ಎಂಬುದನ್ನು ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ನೀವೇ ಹೊರತಂದು ಸಕ್ರಮ ಮಾರ್ಗದಲ್ಲಿ ಜನರಿಗೆ ಹಂಚಿಬಿಡಿ. ಈ ದೇಶದ ಸಂಪತ್ತು ಶತಮಾನಗಳಿಂದಲೂ ಲೂಟಿಯಾಗುತ್ತಲೇ ಇದೆ ಎಂಬುದಕ್ಕೆ ಇತಿಹಾಸವೇ ಇದೆ. ಮೊದಲಿಗೆ ಮೊಘಲರು,
ನಂತರ ಬ್ರಿಟೀಷರು, ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ಸಿಗರು ಎಂಬುದು ಅಸಲಿ ಸತ್ಯ ಎಂಬುದಕ್ಕೆ ಇಂದಿಗೂ ಪುರಾವೆಗಳು ಸಿಗುತ್ತಲೇ ಇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಂಗ್ರೆಸ್ ಕಾಲೆಳೆದಿದ್ದಾರೆ.

kateel 2

ಇದೇ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಹ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ದೇಶದ ಜನರ ಸಂಪತ್ತೆಲ್ಲಾ ಕಾಂಗ್ರೆಸ್ ನಾಯಕರ ಬಳಿಯೇ ಇದೆ. ಐಟಿ ಅಧಿಕಾರಿಗಳು ಈಗ ಅದನ್ನೆಲ್ಲ ಹೊರತೆಗೆಯುವ ಕಾರ್ಯ ಮಾಡುತ್ತಿದ್ದಾರೆ. ಜಾರ್ಖಂಡ್ ಕಾಂಗ್ರೆಸ್ ಸಂಸದನ ಬಳಿ ಪತ್ತೆಯಾಗಿರುವ ಕೋಟ್ಯಂತರ ಹಣ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ಮಾಡಿ ಬಚ್ಚಿಟ್ಟಿರುವ ಸಣ್ಣ ಸ್ಯಾಂಪಲ್” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...