ರಾಜಕೀಯ ಕಾರಣಗಳಿಂದ ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ: ಡಿಸಿಎಂ ಡಿ.ಕೆ.ಶಿವಕುಮಾರ್

Date:

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿ, “400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ”ಎಂದು ತಿಳಿಸಿದರು.

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ” ಎಂದರು.

“ಒಂದು ದೇಶ ಒಂದು ಚುನಾವಣೆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಕುತಂತ್ರ. ನಾವು ಈಗ ಇರುವ ಚುನಾವಣಾ ವ್ಯವಸ್ಥೆಯ ಪರವಾಗಿ ನಿಲ್ಲುತ್ತೇವೆ” ಎಂದು ಹೇಳಿದರು.

ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, “ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ” ಎಂದು ಹೇಳಿದರು.

ಡಿಸಿಎಂ ಅವರಿಂದ ಗೋವರ್ಧನ ಹೋಮ

“ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ ಗುರುಗಳ ನಿರ್ದೇಶನದ ಮೇಲೆ ಗೋವರ್ಧನ ಹೋಮವನ್ನು ವರದರಾಜ ದೇವಾಲಯದಲ್ಲಿ ನೆರವೇರಿಸಿದ್ದೇನೆ. 2023ರ ವಿಧಾನಸಭಾ ಚುನಾವಣೆ ವೇಳೆ ನಾನು ವರದರಾಜ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೆ. ಜೊತೆಗೆ ತಮಿಳುನಾಡಿನ ಅನೇಕ ದೇವಾಲಯಗಳಿಗೂ ಭೇಟಿ ಕೊಟ್ಟಿದ್ದೆ. ದೇವರ ಅನುಗ್ರಹದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...