ಮೇಕೆದಾಟು ಯೋಜನೆ | ಬಿಜೆಪಿಯವರು ದೇವೇಗೌಡರ ಸಲಹೆ ಪಡೆಯಲಿ: ರಮೇಶ್ ಬಾಬು

Date:

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೇಕೆದಾಟು ಯೋಜನೆ ಜಾರಿಗೆ ಡಿ ಕೆ ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲಾಗಿದೆ. ಈ ಮಧ್ಯೆ ಹಿರಿಯರಾದ ದೇವೇಗೌಡರು ಈ ಯೋಜನೆ ಪರವಾಗಿ ಮಾತನಾಡಿರುವುದು ಒಳ್ಳೆಯದು” ಎಂದರು.

“ಕುಮಾರಸ್ವಾಮಿ ಅವರು ಸಹ ಶೀಘ್ರ ಗುಣಮುಖರಾಗಲಿ. ಸುಮಲತಾ ಅವರನ್ನು ಅಕ್ಕ ಎಂದು ಕುಮಾರಸ್ವಾಮಿ ಕರೆದಿದ್ದಾರೆ. ಅವರ ಪರವಾಗಿ ಮಾತನಾಡುತ್ತಿದ್ದಾರೆ. ಸುಮಲತಾ ಅವರನ್ನು ಎಂಎಲ್ ಸಿ ಮಾಡಿ” ಎಂದು ಬಿಜೆಪಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಾಗ 7 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದರು. ನಾವು ಯಾವುದೇ ಪಕ್ಷಗಳ ಮನೆ ಬಾಗಿಲಿಗೆ ಹೋಗಬಾರದು ಅವರೇ ನಮ್ಮ ಬಳಿ ಬರಬೇಕು ಎಂದು ದೇವೇಗೌಡರು ಪದೇ, ಪದೇ ಹೇಳುತ್ತಿದ್ದರು. ಈಗ ಪ್ರತಿದಿನ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುವ ಪರಿಸ್ಥಿತಿ ಉಂಟಾಗಿದೆ” ಎಂದು ಕುಟುಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

“ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಹಿಂದೆ ಲೋಕಶಕ್ತಿ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು 3 ಸ್ಥಾನಗಳನ್ನು ಗೆದ್ದರು. ಕರ್ನಾಟಕದಲ್ಲಿ ಈ ಪಕ್ಷ ಇತ್ತು ಎಂಬುದೇ ಜನಕ್ಕೆ ಮರೆತು ಹೋಗಿದೆ. ಇದೇ ಪರಿಸ್ಥಿತಿ ಜೆಡಿಎಸ್ ಪಕ್ಷಕ್ಕೆ ಖಂಡಿತಾ ಬರಲಿದೆ. ಜೆಡಿಎಸ್ ಕರ್ನಾಟಕದಿಂದ ಕಣ್ಮರೆ ಆಗುತ್ತದೆ. ಕೇವಲ ಮೂರು ಸ್ಥಾನಕ್ಕೆ ಅಂಗಲಾಚುತ್ತಿದೆ. ಸಿ.ಎಸ್.ಪುಟ್ಟರಾಜು ಅವರನ್ನೇ ಅಭ್ಯರ್ಥಿ ಎಂದು ಹೇಳಿ ಈಗ ನಾನೇ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ ಕುಮಾರಸ್ವಾಮಿ. ಅಂದರೆ ಇವರಿಗೆ ಕುಟುಂಬ ಮಾತ್ರ ಮುಖ್ಯ” ಎಂದು ಟೀಕಿಸಿದರು.

“2013ರ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ಬಿಜೆಪಿ ಬೆಂಬಲದಿಂದ ಜೆಡಿಎಸ್ ಸ್ಪರ್ಧೆ ಮಾಡಿತ್ತು. ಆದರೆ ಗೆದಿದ್ದು ಮಾತ್ರ ಕಾಂಗ್ರೆಸ್ ಪಕ್ಷ. ಕನಿಷ್ಠ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಜೆಡಿಎಸ್ ಪಕ್ಷದ ಆತ್ಮ ವಂಚನೆಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...