ಮೇಕೆದಾಟು ಯೋಜನೆ | ಪ್ರಧಾನಿ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ಸಾಯುವೆ: ಹೆಚ್‌ ಡಿ ದೇವೇಗೌಡ

Date:

ನನ್ನ ಕೊನೆ ಉಸಿರು‌ ಎಳೆಯುವ ಮುನ್ನವೇ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭರವಸೆ ನೀಡಿದರು.

ಚನ್ನಪಟ್ಟಣದ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದ ಅವರು, “ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ” ಎಂದರು.

“ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ನಾನು ಪ್ರಧಾನಿ ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ

“ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ‌ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ” ಎಂದರು.

“ಎಲ್ಲಿ ಡಿಕೆ?, ಎಲ್ಲಿ ಎಚ್‌ಡಿಕೆ?, ಎಲ್ಲಿ ಕುಮಾರಸ್ವಾಮಿ? ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ” ಎಂದು ಹರಿಹಾಯ್ದರು.

“ನಿಖಿಲ್ ನನ್ನು ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ” ಎಂದು ತಿಳಿಸಿದರು.

ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು: ನಟಿ ತಾರಾ

“ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣಿರು ಬರುತ್ತದೆ. ಇದನ್ನೇ ಟೀಕೆ ಮಾಡಬಾರದು” ಎಂದು ಬಿಜೆಪಿ ಹಿರಿಯ ನಾಯಕಿ ಹಾಗೂ ನಟಿ ತಾರಾ ಹೇಳಿದರು.

ದೇವೇಗೌಡರ ಜತೆ ನಿಲಸಂದ್ರದಲ್ಲಿ ನಿಖಿಲ್ ಪರ ಪ್ರಚಾರ ಮಾಡಿದ ತಾರಾ ಅವರು; ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ಅಭಿವೃದ್ಧಿ ಬಗ್ಗೆ ಮಾತಾಡಿದರೆ ಬಹಳ‌ ಮಾತಾಡಬಹುದು. ಎಲ್ಲರಿಗೂ ಒಂದು ಅವಕಾಶ ಕೊಟ್ಟಿದ್ದೀರಿ. ನಿಖಿಲ್ ಕುಮಾರಸ್ವಾಮಿಗೆ ಒಂದು ಅವಕಾಶ ಕೊಡಿ. ಈ ಕ್ಷೇತ್ರಕ್ಕೆ ದೇವೆಗೌಡರು, ಕುಮಾರಸ್ವಾಮಿ ಏನ್ ಮಾಡಿದ್ದಾರೆ ಅಂತ ನೆನಪು ಮಾಡಿಕೊಳ್ಳಿ. ನೂರಾರು ಕೆರೆ ತುಂಬಿದವರು ಕುಮಾರಸ್ವಾಮಿ. ಆದರೆ, ಯಾರೋ ಕೆರೆ ತುಂಬಿಸಿದವರು ಅಂತಾರೆ. ಇದು ಸರಿಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...