ಗೋಧ್ರಾ ಹೇಳಿಕೆ | ಬಿಕೆ ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಿ: ಸಂಸದ ನಳಿನ್ ಕುಮಾರ್ ಕಟೀಲ್

Date:

“ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು” ಎಂದು ಹೇಳಿಕೆ ನೀಡಿದ್ದ ಬಿಕೆ ಹರಿಪ್ರಸಾದ್ ಹೇಳಿಕೆಯನ್ನು ಖಂಡಿಸಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, “ಬಿಕೆ ಹರಿಪ್ರಸಾದ್ ಅವರನ್ನು ಸರ್ಕಾರ ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಮಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಒಂದು ಕಡೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಅಂತ ಹೇಳುತ್ತಿದ್ದಾರೆ. ಉಪಮುಖ್ಯಮಂತ್ರಿಗಳು ಪರಿಶೀಲನೆ ಮಾಡುತ್ತಾರೆ ಅಂತ ಹೇಳುತ್ತಾರೆ. ಕೂಡಲೇ ಬಿಕೆ ಹರಿಪ್ರಸಾದ್ ಅವರು ತಮಗೆ ಇದ್ದ ಮಾಹಿತಿಯನ್ನು ಗೃಹ ಇಲಾಖೆಗೆ ನೀಡಬೇಕು ಅಥವಾ ಇವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ಗೋಧ್ರಾ ಘಟನೆಯ ಹಿಂದೆ ಕಾಂಗ್ರೆಸ್ ಕೂಡ ಇತ್ತು. ಅಂದು ಮೋದಿ ಸರ್ಕಾರವನ್ನ ಬೀಳಿಸಲು ಕಾಂಗ್ರೆಸ್ ಕೂಡ ಷಡ್ಯಂತ್ರ ಮಾಡಿತ್ತು. ಹಾಗಾಗಿ ಅದೇ ರೀತಿಯ ಷಡ್ಯಂತ್ರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ನಾನು ಆರೋಪಿಸುತ್ತಿದ್ದೇನೆ. ಹಾಗಾಗಿ, ತಕ್ಷಣವೇ ಬಿಕೆ ಹರಿಪ್ರಸಾದ್ ಅವರನ್ನು ಬಂಧಿಸಬೇಕು ಎಂದು ನಾನು ಆಗ್ರಹಿಸುತ್ತಿದ್ದೇನೆ” ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಉತ್ತರಿಸಿದ ಕಟೀಲ್, “ಭಾರತ ಹಿಂದೂರಾಷ್ಟ್ರ. ಹಿಂದೂ ಅನ್ನುವಂತಹ ಶಬ್ದ ಜಾತ್ಯತೀತವಾದದ್ದು. ನಮ್ಮ ದೇಶದಲ್ಲಿ ರಾಮರಾಜ್ಯದ ಪರಿಕಲ್ಪನೆ ಬಿತ್ತಿದವರೇ ಮಹಾತ್ಮ ಗಾಂಧೀಜಿ. ಗಾಂಧೀಜಿ ಈ ದೇಶವನ್ನು ಜಾತ್ಯತೀತ ಮಾಡಿ ಎಂದು ಹೇಳಿರಲಿಲ್ಲ. ಬದಲಾಗಿ ರಾಮರಾಜ್ಯ ಮಾಡಿ ಎಂದಿದ್ದರು. ರಾಮರಾಜ್ಯದ ಪರಿಕಲ್ಪನೆಯೇ ಹಿಂದೂ ರಾಷ್ಟ್ರದ ಪರಿಕಲ್ಪನೆ. ಹಾಗಾದರೆ, ಗಾಂಧೀಜಿ ಒಪ್ಪಿದ್ದ ವಿಚಾರವನ್ನು ಯತೀಂದ್ರ ಸಿದ್ದರಾಮಯ್ಯ ಒಪ್ಪುವುದಿಲ್ಲವೇ? ಇದನ್ನು ಮೊದಲು ಅವರು ಸ್ಪಷ್ಟಪಡಿಸಲಿ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು: ಬಿ ಕೆ ಹರಿಪ್ರಸಾದ್ ಎಚ್ಚರಿಕೆ

“ಈ ದೇಶ ಹಿಂದೂ ರಾಷ್ಟ್ರ ಆದ ಕಾರಣದಿಂದಾಗಿ ಜಾತ್ಯತೀತತೆ ಉಳಿದಿದೆ. ಹಿಂದೂ ರಾಷ್ಟ್ರದ ಪರಿಣಾಮವಾಗಿಯೇ ಈ ದೇಶ ಚೆನ್ನಾಗಿ ನಡೆಯುತ್ತಿದೆ. ಕಾಂಗ್ರೆಸ್ ಆಡಳಿತದ ವೇಳೆ ಈ ದೇಶದಲ್ಲಿ ಪಾಕಿಸ್ತಾನದ ರೀತಿಯ ಆಡಳಿತವಿತ್ತು. ಆಗ ಭಯೋತ್ಪಾದನೆ, ನಕ್ಸಲ್ ಚಟುವಟಕೆ ತಾಂಡವವಾಡುತ್ತಿತ್ತು. ಇಂದು ಅವೆಲ್ಲವೂ ನಿಂತಿದೆ. ಅದಕ್ಕೆ ಕಾರಣ ಹಿಂದೂ ರಾಷ್ಟ್ರದ ಪರಿಕಲ್ಪನೆಯೇ ಕಾರಣ. ಇದನ್ನೇ ಗಾಂಧೀಜಿ ಬಯಸಿದ್ದರು” ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ‘ರಾಮರಾಜ್ಯ’ವನ್ನು ತಮ್ಮದೇ ಶೈಲಿಯಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವ್ಯಾಖ್ಯಾನಿಸಿದ್ದಾರೆ.

“ಮರ್ಯಾದಾ ಪುರುಷ ರಾಮನನ್ನು ನಮ್ಮ ದೇಶ ಆದರ್ಶವನ್ನಾಗಿಸಿಕೊಂಡಿದೆ. ರಾಮನಿಗೆ ಇನ್ನೊಂದು ಹೋಲಿಕೆ ಇಲ್ಲ. ರಾಮನಿಗೆ ರಾಮನೇ ಹೋಲಿಕೆ. ಹೆಸರನ್ನು ಯಾರೂ ಬೇಕಾದರೂ ಇಟ್ಟುಕೊಳ್ಳಬಹುದು. ಹೆಸರನ್ನು ಇಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ರಾಮ ಆಗಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದೆ. ಆದರೆ ರಾವಣನ ಗುಣ ಇದೆ” ಎಂದು ಬಿಜೆಪಿ ಕರ್ನಾಟಕ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...