ಗೂಂಡಾ ಕಾಯಿದೆ ಹೇಳಿಕೆ | ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ತಿರುಗಿಬಿದ್ದ ಬಜರಂಗದಳ!

Date:

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, “ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ” ಎಂದು ನೀಡಿರುವ ಹೇಳಿಕೆ ಈಗ ಬಿಜೆಪಿಗೆ ತಿರುಗುಬಾಣವಾಗಿದೆ.

ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಯ ವಿರುದ್ದ ಬಜರಂಗದಳ ಕಿಡಿಕಾರಿದ್ದು, “ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಆರ್‌‌.ಅಶೋಕ್​ಗೆ ಬಜರಂಗದಳದ ಮಂಗಳೂರಿನ ಮುಖಂಡ ಪುನೀತ್ ಅತ್ತಾವರ, ತನ್ನ ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದು, “ನೀವು ಆರ್ ಅಶೋಕ್ ಅಲ್ಲ. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ. ಅಂದರೆ ಅಡ್ಜಸ್ಟ್ ಮೆಂಟ್ ಅಶೋಕ್” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಆರ್ ಅಶೋಕ್ ಸದನದಲ್ಲಿ ನೀಡಿದ್ದ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡಿರುವ ಪುನೀತ್ ಅತ್ತಾವರ, “ಅಶೋಕ್ ಅವರೇ, ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜಸ್ಟ್‌ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ. ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳು” ಎಂದು ಏಕವಚನದಲ್ಲೇ ಹಾಕಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

“ಪ್ರತಿಪಕ್ಷ ನಾಯಕನಾಗಿರುವ ನೀವು, ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ” ಎಂಬ ಎಚ್ಚರಿಕೆಯನ್ನು ಬಜರಂಗದಳದ ಮುಖಂಡ ಪುನೀತ್ ಅತ್ತಾವರ ನೀಡಿದ್ದಾರೆ.

ಆರ್ ಅಶೋಕ್ ಹೇಳಿದ್ದೇನು?
ಸದನದಲ್ಲಿ ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವ ವಿಚಾರವಾಗಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದರು.

ಈ ವೇಳೆ, “ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಇದೇ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಧರಣಿ ಕೂಡ ನಡೆದು, ದೊಡ್ಡ ಗಲಾಟೆಯೇ ಆಗಿತ್ತು. ಅವತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನನ್ನ ಮೇಲೆ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ವೇಳೆ ಯುವತಿಯರ ಮೇಲೆ ದೌರ್ಜನ್ಯ ಎಸಗಿ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ಥರ ನೀವೂ ಕೂಡ ಕ್ರಮ ಕೈಗೊಳ್ಳಿ” ಎಂದು ಈಗಿನ ಗೃಹ ಸಚಿವ ಪರಮೇಶ್ವರ್​ ಅವರಲ್ಲಿ ಆಗ್ರಹಿಸುತ್ತಿದ್ದ ಭರದಲ್ಲಿ ಆರ್.ಅಶೋಕ್ ಈ ಹೇಳಿಕೆ ನೀಡಿದ್ದರು. ವಿಪಕ್ಷ ನಾಯಕ ಆರ್ ಅಶೋಕ್ ಅವರ ಈ ಹೇಳಿಕೆಯ ವಿರುದ್ಧ ಬಜರಂಗದಳ ತಿರುಗಿಬಿದ್ದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...