ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

Date:

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ತಿಳಿಸಿದ್ದಾರೆ.

ಗುರುವಾರ ಸಂಜೆ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಯವರನ್ನು ಮನವೊಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

“ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಗೆ 2017 ಸೆಪ್ಟೆಂಬರ್ 23ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು” ಎಂದರು.

“ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್ ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು. ಇದೀಗ ಸರ್ಕಾರದ ಮಹತ್ವದ ತೀರ್ಮಾನ ದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ ಸಿ -ಎಸ್ ಟಿ ವರ್ಗ 6.70 ಲಕ್ಷರೂ.ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬ ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಹಿಂದೆ ಕ್ರಮವಾಗಿ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ ಲೈನ್ ಅರ್ಜಿ ಗಳಿಗೆ ಅನ್ವಯ ಆಗದು” ಜಮೀರ್ ಸ್ಪಷ್ಟ ಪಡಿಸಿದ್ದಾರೆ.

ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎಸ್. ಟಿ. ಸೋಮಶೇಖರ್, ಎಸ್. ಆರ್. ವಿಶ್ವನಾಥ್, ಮಂಜುಳಾ ಲಿಂಬಾವಳಿ, ಎಂ. ಕೃಷ್ಣಪ್ಪ, ಮುನಿರಾಜು,ಶಿವಣ್ಣ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...