ಸಾಗರ ಕ್ಷೇತ್ರ | ಎರಡು ಬಾರಿ ಬಿಜೆಪಿಯಿಂದ ಗೆದ್ದಿದ್ದ ಗೋಪಾಲಕೃಷ್ಣ ಬೇಳೂರು ಈಗ ಕಾಂಗ್ರೆಸ್‌ ಅಭ್ಯರ್ಥಿ

Date:

  • ಕಾಗೋಡು ಪುತ್ರಿ ಡಾ. ರಾಜನಂದಿನಿಗೆ ಕೈ ತಪ್ಪಿದ ಟಿಕೆಟ್
  • ಸಾಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಕಟವಾಗದ ಟಿಕೆಟ್

2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದೆ.

ಸೊರಬ ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಯಂತೆ ಮಧು ಬಂಗಾರಪ್ಪ ಕಣಕ್ಕೆ ಇಳಿಯುತ್ತಿದ್ದಾರೆ. ಭದ್ರಾವತಿ ಕ್ಷೇತ್ರದಿಂದ ಬಿ ಕೆ ಸಂಗಮೇಶ್ವರ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ಮಿಸ್ ಆಗುತ್ತಾ? ಕಾಗೋಡು ಪುತ್ರಿಗೆ ಟಿಕೆಟ್ ಸಿಗುತ್ತಾ? ಅಥವಾ ಮೂಲ ಕಾಂಗ್ರೆಸ್ಸಿಗರು ಬಂಡಾಯ ಏಳುತ್ತಾರಾ ಎಂಬ ಗೊಂದಲಗಳಿದ್ದವು. ಈಗ ಆ ಗೊಂದಲಗಳಿಗೆ ತೆರೆ ಎಳೆದ ಪಕ್ಷ, ಸಾಗರ ಕ್ಷೇತ್ರಕ್ಕೆ ಗೋಪಾಲಕೃಷ್ಣ ಬೇಳೂರು ಅವರಿಗೆ ಟಿಕೆಟ್‌ ನೀಡಿದೆ. ಆ ಮೂಲಕ ಈ ಬಾರಿ ಕಾಂಗ್ರೆಸ್‌ ಇಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಿದೆ.

ಬಿಜೆಪಿಯಿಂದ 2004 ಮತ್ತು 2008ರಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಗೋಪಾಲಕೃಷ್ಣ ಬೇಳೂರು ಬಿ ಎಸ್‌ ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರು. ಆದರೆ, ಕಳೆದ ಚುನಾವಣೆಯಲ್ಲಿ ಸಾಗರದಿಂದ ಹರತಾಳು ಹಾಲಪ್ಪ ಟಿಕೆಟ್‌ ಪಡೆದು, ಕಾಗೋಡು ವಿರುದ್ಧ ಗೆದ್ದು ಬಂದರು. ಟಿಕೆಟ್‌ ತಪ್ಪಿದ್ದರಿಂದ ಮುನಿಸಿಕೊಂಡು ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ಸಿನ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಕೂಡ ಸಾಗರ ಕ್ಷೇತ್ರಕ್ಕೆ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಎಸ್‌ ಬಂಗಾರಪ್ಪ ಅವರ ಅಪ್ಪಟ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಗೋಪಾಲಕೃಷ್ಣ ಬೇಳೂರು ಅವರಿಗೆ ಕಾಂಗ್ರೆಸ್‌ ಅಳೆದು ತೂಗಿ ಅಂತಿಮ ಮುದ್ರೆ ಒತ್ತಿದೆ.

ಬಿಜೆಪಿಯಲ್ಲಿ ಭಿನ್ನಮತ

ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದೆ. ಅದರಲ್ಲೂ ಹಾಲಿ ಶಾಸಕ ಹರತಾಳು ಹಾಲಪ್ಪ ವಿರುದ್ಧವೇ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಮುಖಂಡರು ತಿರುಗಿ ಬಿದ್ದಿದ್ದಾರೆ. ಹೀಗಾಗಿ ಸಾಗರದಲ್ಲಿ ಈ ಬಾರಿಯೂ ತಾವೇ ಸ್ಪರ್ಧಿಸಬೇಕು ಎಂಬ ಉಮೇದಿನಲ್ಲಿದ್ದ ಹಾಲಪ್ಪ ಅವರಿಗೆ ಹೊಸ ಬೆಳವಣಿಗೆ ತಲೆನೋವಾಗಿ ಪರಿಣಮಿಸಿದೆ.

ಒಂದು ವೇಳೆ ಹಾಲಪ್ಪ ಅವರಿಗೆ ಟಿಕೆಟ್‌ ತಪ್ಪಿದ್ದೇ ಆದಲ್ಲಿ ಬಿಜೆಪಿಯಿಂದ ಸಾಗರದ ಅಭ್ಯರ್ಥಿಯಾಗಿ 1991 ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಕೆ ಜಿ ಶಿವಪ್ಪ ಅವರ ಪುತ್ರ ಕೆ ಎಸ್‌ ಪ್ರಶಾಂತ್‌ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಪ್ರಶಾಂತ್‌ ಬಿಜೆಪಿಯ ಯೂತ್‌ ಐಕಾನ್‌ ಆಗಿ ಗುರುತಿಸಿಕೊಂಡಿದ್ದಾರೆ. ಪಕ್ಷದಲ್ಲಿ ಸಕ್ರಿಯರಾಗಿರುವ ಜೊತೆಗೆ ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡು ಅವರು ನೀಡುವ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದಾರೆ.

ಈಡಿಗ ಸಮುದಾಯ ಪ್ರಾಬಲ್ಯ ಹೊಂದಿರುವ ಸಾಗರ ಕ್ಷೇತ್ರದಲ್ಲಿ ಈಡಿಗರ ಮತ ಸೆಳೆಯಲು ಪ್ರಶಾಂತ್‌ ಸೂಕ್ತ ವ್ಯಕ್ತಿ. ಈಡಿಗರ ಜೊತೆಗೆ ಬ್ರಾಹ್ಮಣ ಹಾಗೂ ಲಿಂಗಾಯತ ಮತಗಳನ್ನೂ ಪ್ರಶಾಂತ್‌ ಸೆಳೆಯುವ ಹಿನ್ನೆಲೆಯಲ್ಲಿ ಪ್ರಶಾಂತ್‌ಗೆ ಟಿಕೆಟ್‌ ನೀಡಿದಲ್ಲಿ ಬಿಜೆಪಿ ಸುಲಭವಾಗಿ ಗೆಲ್ಲಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.

ಕ್ಷೇತ್ರದ ಹಿನ್ನೆಲೆ

1957ರಿಂದಲೂ ಕಾಂಗ್ರೆಸ್​ನ ಭದ್ರಕೋಟೆಯಾಗಿದ್ದ ಸಾಗರ ಕ್ಷೇತ್ರದಿಂದ 1972ರಲ್ಲಿ ಮೊದಲ ಬಾರಿ ಕಾಗೋಡು ತಿಮ್ಮಪ್ಪ ಅವರು ಸಂಯುಕ್ತ ಸೋಷಿಯಲಿಸ್ಟ್​ ಪಾರ್ಟಿಯಿಂದ ಕಣಕ್ಕಿಳಿದು ಗೆಲುವು ಕಂಡಿದ್ದರು. ಇದಾದ ಬಳಿಕ 1978 ಹಾಗೂ 1983ರಲ್ಲಿ ಕಾಂಗ್ರೆಸ್​ ಪಕ್ಷದ ಎಲ್​ ಟಿ ತಿಮ್ಮಪ್ಪ ಹೆಗಡೆ ಅವರು ಜಯ ಗಳಿಸಿದ್ದರು. ತದನಂತರ 1985ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್​ ಹಿಡಿತದಿಂದ ತಪ್ಪಿಸಿಕೊಂಡಿದ್ದ ಸಾಗರ ಕ್ಷೇತ್ರದಲ್ಲಿ ಜನತಾ ಪಾರ್ಟಿಯ ಬಿ. ಧರ್ಮಪ್ಪ ಗೆಲುವಿನ ನಗೆ ಬೀರಿದ್ದರು. ಆದರೆ, ಇದಾದ ಬೆನ್ನಲ್ಲೇ ಬದಲಾದ ರಾಜಕೀಯ ಬೆಳವಣಿಗೆಯಿಂದ ಕಾಗೋಡು ತಿಮ್ಮಪ್ಪ ಅವರು ಕಾಂಗ್ರೆಸ್​ಗೆ ಸೇರ್ಪಡೆಗೊಂಡರು. ಅಲ್ಲದೇ 1989, 94 ಹಾಗೂ 99ರ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಕಣಕ್ಕಿಳಿದು, ಈ ಮೂರೂ ಅವಧಿಯಲ್ಲೂ ತಮ್ಮ ಎದುರಾಳಿಗೆ ಸೋಲುಣಿಸಿ ಗೆದ್ದು ಬೀಗಿದರು.

ಆದರೆ, 2004 ಚುನಾವಣೆಯಲ್ಲೂ ಗೆಲ್ಲುವ ವಿಶ್ವಾಸದಲ್ಲಿ ಮತ್ತೆ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದ ಕಾಗೋಡು ತಿಮ್ಮಪ್ಪರವರಿಗೆ ಭಾರೀ ನಿರಾಸೆಯಾಯ್ತು. ಈ ಕ್ಷೇತ್ರದಿಂದ ಅವರ ಪ್ರತಿಸ್ಪರ್ಧಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಗೋಪಾಲಕೃಷ್ಣ ಬೇಳೂರು ಗೆದ್ದು ಬೀಗಿದ್ದರು. 2008ರ ಚುನಾವಣೆಯಲ್ಲಿ ಬಿಎಸ್​ವೈ ಕೃಪಾಕಟಾಕ್ಷದಿಂದ ಮತ್ತೆ ಕಣಕ್ಕಿಳಿದ ಗೋಪಾಲಕೃಷ್ಣ ಬೇಳೂರು, ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಕಾಗೋಡು ವಿರುದ್ಧ ಗೆಲುವು ಸಾಧಿಸಿದರು.

2013ರ ಚುನಾವಣೆ ವೇಳೆಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಿಜೆಪಿಯಿಂದ ದೂರವಾಗಿ ತಮ್ಮದೇ ಆದ ಕೆಜೆಪಿ ಪಕ್ಷ ಕಟ್ಟಿದ್ದರು. ಹೀಗಾಗಿ ಆ ಚುನಾವಣೆಯಲ್ಲಿ ಕೆಜೆಪಿಯಿಂದ ಬಿ ಆರ್ ಜಯಂತ್, ಜೆಡಿಎಸ್ ಹುರಿಯಾಳಾಗಿದ್ದ ಗೋಪಾಲಕೃಷ್ಣ ಬೇಳೂರು ಮತ್ತು ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪರ ಮಧ್ಯೆ ತ್ರಿಕೋನ ಕದನ ಏರ್ಪಟ್ಟಿತ್ತು. ಆದರೆ ಈ ಚುಣಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಸಮೀಪ ಪ್ರತಿಸ್ಪರ್ಧಿ ಕೆಜೆಪಿಯ ಜಯಂತ್‌ರನ್ನು 41,248 ಮತಗಳ ಅಂತರದಿಂದ ಸೋಲಿಸಿದರು.

ಆಗ ಪ್ರತಿಪಕ್ಷದ ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಬೇಳೂರು ಈಗ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಟಿಕೆಟ್ ಇನ್ನೂ ಪ್ರಕಟವಾಗಿಲ್ಲ. ಹಾಲಪ್ಪ ಬಂದರೆ ಮಾತ್ರ ಸಮಬಲದ ಹೋರಾಟ ಇರಲಿದೆ ಎನ್ನುವುದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಮಾತು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...