ಸೆ.18ರಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ

Date:

ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ‘ಸಂಸತ್ತಿನ ವಿಶೇಷ ಅಧಿವೇಶನ’ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

“ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರದ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆ ಗದ್ದಲಗಳ ನಡುವೆ ಮುಂಗಾರು ಅಧಿವೇಶನವು ಇತ್ತೀಚೆಗೆ ಮುಕ್ತಾಯಗೊಂಡಿತ್ತು. ಅದಾಗಿ ಒಂದು ತಿಂಗಳಲ್ಲಿ ವಿಶೇಷ ಅಧಿವೇಶನ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲಿಯೂ ವಿಶೇಷ ಕಲಾಪಗಳು ನಡೆಯಲಿದ್ದು, ಒಟ್ಟು ಐದು ದಿನ ಅಧಿವೇಶನ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ವಾಪಸ್ ನೀಡಲು ಹಾಗೂ ಶೀಘ್ರದಲ್ಲಿಯೇ ಚುನಾವಣೆ ನಡೆಸಲು ಕಾಲಮಿತಿ ಸಿದ್ಧಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಬೆನ್ನಲ್ಲೇ ವಿಶೇಷ ಅಧಿವೇಶನ ಕರೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಹಿಂಡೆನ್‌ಬರ್ಗ್ 2.0? ಒಸಿಸಿಆರ್‌ಪಿ ವರದಿಯ ನಂತರ ಅದಾನಿ ಷೇರುಗಳು ತೀವ್ರ ಕುಸಿತ

ಇತ್ತೀಚಿಗೆ ನಡೆದ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಂದು ಪ್ರಾರಂಭವಾಗಿ ಆಗಸ್ಟ್ 12 ರಂದು ಮುಕ್ತಾಯವಾಯಿತು. ಆ ಸಂದರ್ಭದಲ್ಲಿ ಸರ್ಕಾರದಿಂದ 23 ಮಸೂದೆಗಳನ್ನು ಅಂಗೀಕರಿಸಲಾಯಿತು. ಮಣಿಪುರದ ಹಿಂಸಾಚಾರ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) 2023ರ ವಿವಾದಾತ್ಮಕ ಮಸೂದೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿತ್ತು. ವಿಪಕ್ಷಗಳು ಸರ್ಕಾರ ಮಂಡಿಸಿದ ಯಾವುದೇ ಚರ್ಚೆಗಳಲ್ಲಿ ಪಾಲ್ಗೊಂಡಿರದೆ ಪ್ರತಿಭಟನೆ ನಡೆಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...