ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್‌ ಹೆಚ್ಚಳಕ್ಕೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

Date:

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ ವಿಚಾರವಾಗಿ ಸಂಬಂಧಪಟ್ಟ ಸಚಿವರನ್ನು ಕರೆಸಿ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಿದ್ದು, 2 ದಿನಗಳಲ್ಲಿ ಅವರು ತಮ್ಮ ಅಭಿಪ್ರಾಯ ನೀಡಲಿದ್ದಾರೆ. ಇವುಗಳ ಆಧಾರದ ಮೇಲೆ ಕೇಂದ್ರ ಸಚಿವಾಲಯದ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಪ್ರಸ್ತಾಪಿಸುತ್ತೇವೆ” ಎಂದು ಹೇಳಿದರು.

“ಈ ಯೋಜನೆ ಜಾರಿಗೆ ಸರ್ಕಾರ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ಅಗತ್ಯ ಹಣ ಮೀಸಲಿಡಲಾಗುವುದು. ಆಂಧ್ರ ಹಾಗೂ ತೆಲಂಗಾಣಕ್ಕೆ 13 ಟಿಎಂಸಿ ನೀರು ಲಾಭವಾಗಲಿ, ನಷ್ಟ ಆಗಲಿ. ನಾವು ಅಣೆಕಟ್ಟನ್ನು 524 ಮೀಟರ್ ಗಳಿಗೆ ಎತ್ತರಿಸಬೇಕು. ಅದಕ್ಕೆ ಎಷ್ಟು ಬೇಕೋ ಅಷ್ಟು ಪ್ರಯತ್ನ ನಾವು ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟನಲ್ ರಸ್ತೆ, ಮೆಟ್ರೋಗೆ ಅಗತ್ಯವಿರುವ ಜಾಗ ಪಡೆಯುತ್ತೇವೆ

ಟನಲ್ ರಸ್ತೆ ಹಾಗೂ ಮೆಟ್ರೋ ಕಾಮಗಾರಿಗೆ ಹೆಬ್ಬಾಳ ಬಳಿಯ ಜಾಗದ ವಿಚಾರವಾಗಿ ನಡೆದ ಸಭೆಯ ಬಗ್ಗೆ ಕೇಳಿದಾಗ, “ಹೆಬ್ಬಾಳ ಜಂಕ್ಷನ್ ಬಹಳ ಮುಖ್ಯವಾದ ಜಾಗ. ಇಲ್ಲಿ ಮೆಟ್ರೋ ಹಾಗೂ ಟನಲ್ ರಸ್ತೆ ಅವಶ್ಯವಿದೆ. ಹೀಗಾಗಿ ನಾವು ಅಗತ್ಯವಿರುವ ಜಾಗವನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ನಾವು ಯೋಜನೆ ಹಿಂಪಡೆಯಲು ಸಾಧ್ಯವಿಲ್ಲ. ಮೆಟ್ರೋ ಹಾಗೂ ಟನಲ್ ರಸ್ತೆ ಅಧಿಕಾರಿಗಳು ಸೇರಿ ಇದರ ವಿನ್ಯಾಸ ಸಿದ್ಧಪಡಿಸುವಂತೆ ಸೂಚಿಸಿದ್ದೇವೆ. ಇದಕ್ಕೆ ಅಗತ್ಯವಿರುವ ಮಿಲಿಟರಿ ಜಾಗ ಹಾಗೂ ಖಾಸಗಿ ಜಾಗ ಎಷ್ಟು ಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ಟಿಡಿಆರ್ ಅಥವಾ ಎಫ್ ಎ ಆರ್ ಮೂಲಕ ಪರಿಹಾರ ನೀಡಲು ನಾವು ಬದ್ಧವಾಗಿದ್ದೇವೆ. ನಾವು ಈ ಜಾಗ ಬಿಟ್ಟು ಕೊಡಲು ಸಿದ್ದವಿಲ್ಲ‌. ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಬೇಕಾಗಿದ್ದು, ಇದಕ್ಕೆ ಅಗತ್ಯವಿರುವ ಜಾಗದ ವಿಚಾರವಾಗಿ ನಾವು ಸಭೆ ಮಾಡಿದ್ದೇವೆ” ಎಂದು ಹೇಳಿದರು.

ಒಳಮೀಸಲಾತಿ | ಮುಕ್ತ ಅವಕಾಶ ನೀಡಿದ್ದೇವೆ

ಒಳ ಮೀಸಲಾತಿ ವಿಚಾರವಾಗಿ ಸಮೀಕ್ಷೆ ಆರಂಭವಾಗುತ್ತಿರುವ ಬಗ್ಗೆ ಕೇಳಿದಾಗ, “ಒಳ ಮೀಸಲಾತಿಗೆ ಸಮೀಕ್ಷೆ ಮಾಡಲು ಸಚಿವ ಸಂಪುಟ ತೀರ್ಮಾನ ಮಾಡಿದೆ. ಇದಕ್ಕಾಗಿ ಸಮಿತಿ ಮಾಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಗೊಂದಲ ಇಲ್ಲದಂತೆ ಜನರು ತಮ್ಮ ಜಾತಿಗಳನ್ನು ಸ್ಪಷ್ಟವಾಗಿ ಮಾಹಿತಿ ನೀಡಬೇಕು ಎಂದು ಮುಕ್ತ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ಒಳ ಮೀಸಲಾತಿ ಬಗ್ಗೆ ಗೊಂದಲಗಳಿವೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದೆ. ಈ ಸಮುದಾಯಗಳಲ್ಲಿ ಕೆಲವು ಪಂಗಡಗಳು ಸರಿಯಾಗಿ ಮಾಹಿತಿ ನೀಡಿಲ್ಲ, ನಮ್ಮ ಸಂಖ್ಯೆ ಹೆಚ್ಚಿದೆ, ನಗರ ಪ್ರದೇಶದಲ್ಲಿ ಇರುವವರು ತಮ್ಮ ಸಮುದಾಯವನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...