ಕರಾವಳಿ ಜನರಿಂದ ರಕ್ತಕಣ್ಣೀರು ಸುರಿಯಲಿ ಎಂದು ಹಪಾಹಪಿಸುತ್ತಿರುವ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ

Date:

ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದ್ದು, ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ ‘ರಕ್ತಕಣ್ಣೀರು’ ಸುರಿಯಲಿ ಎಂದು ಹಪಾಹಪಿಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಅವರು, ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು? ‘ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು’ ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೆಣಸಾಟ ಸೇನೆಯದು, ಮೆರೆದಾಟ ಮೋದಿಯದು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು! ಸಿದ್ದರಾಮಯ್ಯನವರೆ ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರೆ ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ! ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ ‘ಕೊಲೆ ವಿಕೋಪ’ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...