ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

Date:

ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಲಿರುವ ಅಧಿಸೂಚನೆ ಪ್ರಕಾರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆ ನೀಡಿದೆ.

ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಒಂದು ಬಾರಿಗೆ ಮಾತ್ರ ಅನ್ವಯಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಈ ಮಾಹಿತಿ ಹಂಚಿಕೊಂಡರು.

“2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್​ಸಿ ಹೊರಡಿಸಲಿರುವ ಅಧಿಸೂಚನೆಯಡಿ ಅರ್ಹ ಅಭ್ಯರ್ಥಿಗಳು ಒಂದು ಬಾರಿಗೆ ಮಾತ್ರ ಈ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಕೊರೋನಾ ಸಾಂಕ್ರಾಮಿಕ ಪಿಡುಗು ಹಾಗೂ ನೇಮಕ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ವಯೋಮಿತಿ ಕಾರಣಕ್ಕೆ ವಂಚಿತರಾಗಲಿದ್ದಾರೆ ಎಂಬ ಆತಂಕವನ್ನು ಸರ್ಕಾರ ಕೊನೆಗಾಣಿಸಿದೆ. ಸಾಮಾನ್ಯ ವರ್ಗ- 35 ರಿಂದ 38, ಪ್ರವರ್ಗ 2ಎ, 2ಬಿ, 3ಎ, 3ಬಿ- 38 ರಿಂದ 41, ಎಸ್​ಟಿ, ಪ್ರವರ್ಗ-1: 40 ರಿಂದ 43 ವರ್ಷಕ್ಕೆ ವಯೋಮಿತಿ ಏರಿಕೆ ಮಾಡಿದೆ” ಎಂದು ಎಚ್.ಕೆ.ಪಾಟೀಲ್ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಭಾಷಾ ನಾಮಫಲಕ

ನಾಮಫಲಕದಲ್ಲಿ ಶೇ.50 ಕನ್ನಡ, ಉಳಿದ ಶೇ.50 ಅನ್ಯಭಾಷೆಗೆ ಅವಕಾಶ ಕಲ್ಪಿಸಿದ್ದ ನಿಯಮಕ್ಕೆ ತಿದ್ದುಪಡಿ ತಂದು, ಶೇ.60ರಷ್ಟು ಕನ್ನಡ, ಮಿಕ್ಕ ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಸಂಬಂಧಿಸಿದ ನಿಯಮಕ್ಕೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024ಕ್ಕೆ ಅನುಮೋದನೆ ನೀಡುವ ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಸಂತೈಸಲು, ನಾಡು-ನುಡಿಗೆ ಕಟಿಬದ್ಧವೆಂಬ ಸಂದೇಶವನ್ನು ಸರ್ಕಾರ ಸಾರಿದೆ.

ಇದನ್ನು ಓದಿದ್ದೀರಾ? ಸಾರಿಗೆ ನಿಗಮಗಳ ₹581 ಕೋಟಿ ಮೋಟಾರು ವಾಹನ ತೆರಿಗೆ ಬಾಕಿ: ವಿನಾಯಿತಿ ನೀಡಿದ ಸಚಿವ ಸಂಪುಟ ಸಭೆ

ವನ್ಯಪ್ರಾಣಿ ಜನ್ಯ ಉತ್ಪನ್ನ: ಹಿಂದಿರುಗಿಸುವ ಗಡುವು ವಿಸ್ತರಣೆ

ರಾಜ್ಯಾದ್ಯಂತ ತೀವ್ರ ವಿವಾದ, ಚರ್ಚೆಗೆ ಗ್ರಾಸವಾಗಿದ್ದ ವನ್ಯಪ್ರಾಣಿ ಜನ್ಯ ಉತ್ಪನ್ನಗಳ ವಿಷಯದಲ್ಲಿ ಅಂತಿಮ ತೆರೆ ಎಳೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ಉತ್ಪನ್ನಗಳನ್ನು ಸರ್ಕಾರಕ್ಕೆ ಆದ್ಯಾರ್ಪಣೆ (ಸರೆಂಡರ್) ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಹುಲಿ ಉಗುರು, ಆನೆದಂತ ಇತ್ಯಾದಿ ವನ್ಯಜೀವಿಗಳ ಉತ್ಪನ್ನಗಳನ್ನು ತಮ್ಮ ಬಳಿ ಇಟ್ಟುಕೊಂಡವರು ಸ್ವಯಂಪ್ರೇರಿತವಾಗಿ ಸರ್ಕಾರಕ್ಕೆ ಒಪ್ಪಿಸಲು ಮತ್ತಷ್ಟು ಕಾಲಾವಕಾಶ ದೊರೆತಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...