ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಪರಿಷ್ಕರಿಸಿದೆ: ಸಿದ್ದರಾಮಯ್ಯ

Date:

  • ಸರ್ಕಾರದ ನಾಲ್ಕು ವರ್ಷದ ಮೌನ ಪ್ರಶ್ನಿಸಿದ ಸಿದ್ದರಾಮಯ್ಯ
  • ಕಾಂಗ್ರೆಸ್ ನಾಯಕರ ಸಭೆ ಬಳಿಕ ಎರಡನೇ ಪಟ್ಟಿ ಬಿಡುಗಡೆ

ನೂತನ ಮೀಸಲಾತಿ ಜಾರಿ ನಿರ್ಧಾರ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ “ಸರ್ಕಾರ ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಮೀಸಲಾತಿ ಪರಿಷ್ಕರಣೆ ಮಾಡಿದೆ. ಸರ್ಕಾರಕ್ಕೆ ಮೀಸಲಾತಿ ಕೊಡುವ ಉದ್ದೇಶ ಇದ್ದರೆ ಅಧ್ಯಯನ ಮಾಡಿ ಸಂವಿಧಾನಬದ್ಧವಾಗಿ ನೀಡುತ್ತಿದ್ದರು” ಎಂದು ಕುಟುಕಿದ್ದಾರೆ.

”ಒಳಮೀಸಲಾತಿ ವಿಚಾರವಾಗಿ 4 ವರ್ಷದಿಂದ ಸುಮ್ಮನಿದ್ದ ರಾಜ್ಯ ಸರ್ಕಾರ ಚುನಾವಣೆ ಬಂದಾಗ ಓಟಿಗಾಗಿ ಕೊನೆ ಗಳಿಗೆಯಲ್ಲಿ ಜಾರಿ ಮಾಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾ. ನಾಗಮೋಹನ್ ದಾಸ್‌ ಅವರ ಸಮಿತಿ ರಚನೆಯಾಗಿರುವುದು ಸಮ್ಮಿಶ್ರ ಸರ್ಕಾರ ಇದ್ದಾಗ. ವರದಿ ಸಲ್ಲಿಕೆಯಾಗಿರುವುದು 2020ರಲ್ಲಿ. ಆದರೆ, ಮೀಸಲಾತಿ ಜಾರಿಯ ನಿರ್ಧಾರ ತೆಗೆದುಕೊಂಡಿದ್ದು ಮಾತ್ರ 2023ರಲ್ಲಿ” ಎಂದು ಕುಹಕವಾಡಿದ್ದಾರೆ.

“ವರದಿ ಸಲ್ಲಿಕೆಯಾದ ಬಳಿಕ ಮೂರು ವರ್ಷಗಳ ಕಾಲ ಸರ್ಕಾರ ಏನು ಮಾಡುತ್ತಿತ್ತು. ಸರ್ಕಾರ ಈಗ ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ, ಮೀಸಲಾತಿ ಪ್ರಮಾಣ 56%ಕ್ಕೆ ಏರಿಕೆಯಾಗಿದೆ. ಇದು ಸುಪ್ರೀಂಕೋರ್ಟ್‌ ಆದೇಶದ ಉಲ್ಲಂಘನೆ” ಎಂದು ಹೇಳಿದ್ದಾರೆ.

“ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವ ಕೆಲಸವನ್ನು ಸರ್ಕಾರ ಮಾಡಿದೆಯಾ? ಹೀಗಿದ್ದಾಗ ಇದು ಊರ್ಜಿತವಾಗುತ್ತದಾ? ಒಟ್ಟಾರೆಯಾಗಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ವರ್ಗದ ಜನರಿಗೆ ಮೋಸ ಮಾಡಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇದು ಯೋಗಿಯ ಉತ್ತರ ಪ್ರದೇಶವಲ್ಲ: ಪ್ರಿಯಾಂಕ್‌ ಖರ್ಗೆ

“ಮುಸ್ಲಿಮರಿಗೆ ನೀಡುತ್ತಿದ್ದ 2ಬಿ ಮೀಸಲಾತಿಯನ್ನು ಏಕೆ ಸರ್ಕಾರ ರದ್ದು ಮಾಡಿದೆ. ಚಿನ್ನಪ್ಪ ರೆಡ್ಡಿ ಅವರ ಸಮಿತಿಯ ವರದಿ ಆಧರಿಸಿ ಈ ಮೀಸಲಾತಿ ನೀಡಲಾಗಿತ್ತು. ಈಗ ಮೀಸಲಾತಿಯನ್ನು ತೆಗೆದುಹಾಕಿದರೆ ಅದು ಸೇಡಿನ ರಾಜಕಾರಣವಾಗಲ್ವಾ?” ಎಂದು ಪ್ರಶ್ನಿಸಿದ್ದಾರೆ.

“ಹಿಂದೆಯೆಲ್ಲ ಮೀಸಲಾತಿ ಜಾರಿ ಮಾಡುವಾಗ ಜೇನುಗೂಡಿಗೆ ಕೈಹಾಕಿ ಮಾಡಿದ್ದ? ಬೊಮ್ಮಾಯಿ ಅವರ ಸರ್ಕಾರ ಏನು ಹೊಸದಾಗಿ ಮೀಸಲಾತಿ ಜಾರಿ ಮಾಡಿದ್ದ? ಕೆಟಗರಿ 1, 2ಎ, 2ಬಿ, 3ಎ, 3ಬಿ ಇವುಗಳೆಲ್ಲ ಬೊಮ್ಮಾಯಿ ಅವರ ಸರ್ಕಾರದ ಕಾಲದಲ್ಲಿ ಮಾಡಿದ್ದ? ಹಿಂದೆಲ್ಲಾ ಮೀಸಲಾತಿ ನೀಡಿಲ್ವಾ?” ಎಂದು ಕುಟುಕಿದ್ದಾರೆ.

ಕಾಂಗ್ರೆಸ್‌ನ ಎರಡನೇ ಪಟ್ಟಿ ಕುರಿತು ಮಾತನಾಡಿರುವ ಸಿದ್ದರಾಮಯ್ಯ, “ನಾಡಿದ್ದು ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ. ಈ ಸಭೆಯ ನಂತರ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ನಾನು ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರವನ್ನು ಹೈಕಮಾಂಡ್‌ ತೀರ್ಮಾನ ಮಾಡಬೇಕಿದೆ. ನಾಡಿದ್ದು ನಡೆಯುವ ಸಭೆಯಲ್ಲಿ ತೀರ್ಮಾನ ಆಗಬಹುದು” ಎಂದಿದ್ದಾರೆ.

ವರುಣಾ ಕ್ಷೇತ್ರದ ಕುರಿತು ಮಾತನಾಡಿರುವ ಅವರು, “ಯಾರನ್ನು ಯಾರಿಂದಲೂ ಕಟ್ಟಿಹಾಕಲು ಆಗಲ್ಲ. ಒಬ್ಬರನ್ನು ಸೋಲಿಸುವುದು ಗೆಲ್ಲಿಸುವುದು ಜನರ ಕೈಲಿದೆ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ವರುಣಾಗೆ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಯತೀಂದ್ರ ಅವರು ಅಲ್ಲಿನ ಹಾಲಿ ಶಾಸಕರು. ಅವರು ಕೂಡ ಅಲ್ಲಿ ನನ್ನ ಪರವಾಗಿ ಕೆಲಸ ಮಾಡುತ್ತಾರೆ. ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚನೆ ಮಾಡಲು ಹೋಗಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...