ಬೆಂಗಳೂರು ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆ ಮಾಡದ ಸರ್ಕಾರ: ಆರ್.ಅಶೋಕ್

Date:

ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಹೋಗಿ ಫೋಟೊ ಷೋ ಮಾಡುವುದು ಬಿಟ್ಟರೆ ಬೇರೇನೂ ಕೆಲಸ ಆಗುತ್ತಿಲ್ಲ. ಕಮಿಷನರ್ ಅವರು ಮಳೆಗೆ ಸಂಬಂಧಿಸಿ ಎಲ್ಲ ಮಾಡಿದ್ದಾಗಿ ಒಂದು ತಿಂಗಳ ಹಿಂದೆಯೇ ಹೇಳಿಕೆ ನೀಡಿದ್ದರು. ಪಾಲಿಕೆ ಎಲ್ಲ ಸಿದ್ಧತೆ ಮಾಡಿದ್ದರೆ ಸಿಎಂ ಸ್ಥಳ ಭೇಟಿ ಮಾಡುವ ಪ್ರಮೇಯ ಯಾಕೆ ಬಂತು” ಎಂದು ಪ್ರಶ್ನಿಸಿದರು.

“ರಾಜ್ಯ ಸರಕಾರ ಪಾಪರ್ ಆಗಿದೆಯೇ? ಹಿಂದೆ ಯಡಿಯೂರಪ್ಪ ಅವರು ಒಂದು ವರ್ಷದಲ್ಲಿ 7 ಸಾವಿರ ಕೋಟಿ ವಿಶೇಷ ಅನುದಾನ ನೀಡಿದ್ದರು. ಬಸವರಾಜ ಬೊಮ್ಮಾಯಿಯವರು 6,700 ಕೋಟಿ ಬಿಡುಗಡೆ ಮಾಡಿದ್ದರು. ಕಾಂಗ್ರೆಸ್ಸಿನ ಯೋಗ್ಯತೆಗೆ ಎಷ್ಟು ಬಿಡುಗಡೆ ಮಾಡಿದ್ದಾರೆಂದು ಹೇಳಲಿ ಎಂದು ಸವಾಲೆಸೆದರು. ರಾಜಕಾಲುವೆ ಸರಿಪಡಿಸಲು, ಲಕ್ಷಾಂತರ ಹೊಂಡಗುಂಡಿ ಸರಿಪಡಿಸಲು ಎಷ್ಟು ಹಣ ನೀಡಿದ್ದೀರಿ” ಎಂದು ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಹಣ ಇಲ್ಲದೆ ಗುತ್ತಿಗೆದಾರರು ಆತ್ಮಹತ್ಯೆಗೆ ಮುಂದಾಗಿದ್ದರು. ಕಮಿಷನ್ ಆಪಾದನೆ ಮಾಡಿದ್ದರು. ಈ ಸ್ಥಿತಿಯಲ್ಲಿ ರಾಜ್ಯ ಸರಕಾರದ ಪಾತ್ರ ಏನು ಎಂದು ಕೇಳಿದರು. ರಾಜ್ಯ ಸರಕಾರ ಎಷ್ಟು ಹಣ ಬಿಡುಗಡೆ ಮಾಡಲಿದೆ? ಯಾವಾಗ ಹೊಂಡಗುಂಡಿ ಮುಚ್ಚುತ್ತೀರಿ? ಎಂದ ಅವರು, ಕುಡಿಯುವ ನೀರಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಮರ್ಯಾದೆ ಹರಾಜಾಗಿದೆ” ಎಂದರು.

“ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎಷ್ಟು ಹಣ ನೀಡಿದ್ದೀರಿ? ಲೆಕ್ಕ ಕೊಡಿ ಕಾಂಗ್ರೆಸ್ಸಿನವರೇ ಎಂದು ಕೇಳಿದರು. ಬಿಲ್ ಸಿಗದೆ ಕಸ ತೆಗೆಯುವವರು ಸಮಸ್ಯೆಯಲ್ಲಿದ್ದಾರೆ. ರಾಶಿ ರಾಶಿ ಕಸ ಬಿದ್ದಿದೆ. ಬೆಂಗಳೂರಿನ ತೆರಿಗೆ ನಮ್ಮ ಹಕ್ಕು ಎಂದು ಇಲ್ಲಿನ ಜನರೂ ಕೇಳುತ್ತಿದ್ದಾರೆ ಎಂದು ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರು ಇದೆಯಾ ಸತ್ತು ಹೋಗಿದೆಯಾ ಎಂದು ಪ್ರಶ್ನೆ ಮುಂದಿಟ್ಟ ಅವರು, ಸರಕಾರ ಸ್ಪಷ್ಟವಾಗಿ ಹೇಳಬೇಕು ಎಂದು ಆಗ್ರಹಿಸಿದರು. ಇದರ ವಿರುದ್ಧ ಇದೇ 28ರಂದು ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ದೊಡ್ಡ ಹೋರಾಟ ಮಾಡಲಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...