ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರಿ ಪಾಲಿನ ಕಡಿತವನ್ನು ಸಹಿಸುವುದಿಲ್ಲ: ಕಾಂಗ್ರೆಸ್

Date:

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆ ಮಾಡಲು ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನವನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ದೃಢವಾಗಿ ವಿರೋಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ.

ಕಳೆದ ಏಳು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಉದ್ಯಮದಲ್ಲಿ ವಿಲೀನ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಅದಕ್ಕೆ ಅವಕಾಶ ದೊರೆತಿರುವುದು ಕೇಂದ್ರ ಸರ್ಕಾರದ ಪಾಲು ಬ್ಯಾಂಕ್‌ಗಳಲ್ಲಿ ಶೇ.51ಕ್ಕಿಂತ ಹೆಚ್ಚಿರುವುದು ಎಂದು ಕಾಂಗ್ರೆಸ್‌ ಒತ್ತಿ ಹೇಳಿದೆ.

“55 ವರ್ಷಗಳ ಇದೇ ಜುಲೈ 19ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದರು. 14 ಬ್ಯಾಂಕ್‌ಗಳನ್ನು ಸರ್ಕಾರದ ಅಡಿಗೆ ತಂದಿದ್ದರು. ಭಾರತದ ಆರ್ಥಿಕ ಇತಿಹಾಸದಲ್ಲಿ ಮಹತ್ವದ ಅಧ್ಯಾಯವನ್ನು ಸ್ಥಾಪಿಸಿದ್ದರು” ಎಂದು ಕಾಂಗ್ರೆಸ್‌ನ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಮರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕ್ ರಾಷ್ಟ್ರೀಕರಣವು ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕತೆಯ ಇತರ ಆದ್ಯತೆಯ ಕ್ಷೇತ್ರಗಳಿಗೆ ಸಾಲ ನೀಡುವಿಕೆಗೆ ಹೆಚ್ಚಿನ ಮಹತ್ವ ನೀಡಿದೆ. ಆ ಕ್ಷೇತ್ರಗಳಲ್ಲಿ ಪರಿಣಾಮಗಾರಿ ಬೆಳವಣಿಗೆಗೆ ಸಹಾಯವಾಗಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳು ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿವೆ” ಎಂದು ರಮೇಶ್ ತಿಳಿಸಿದ್ದಾರೆ.

“ಕಳೆದ ಏಳು ವರ್ಷಗಳಲ್ಲಿ, ಸಾರ್ವಜನಿಕ ವಲಯದ ಬ್ಯಾಂಕಿಂಗ್ ಉದ್ಯಮದಲ್ಲಿ ಹಲವಾರು ವಿಲೀನಗಳು ನಡೆದಿವೆ. ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ – ಪಂಜಾಬ್ ನ್ಯಾಷನಲ್ ಬ್ಯಾಂಕ್‌ನೊಂದಿಗೆ ವಿಲೀನಗೊಂಡಿವೆ; ಸಿಂಡಿಕೇಟ್ ಬ್ಯಾಂಕ್ – ಕೆನರಾ ಬ್ಯಾಂಕ್ ಜೊತೆ ವಿಲೀನಗೊಂಡಿದೆ; ಅಲಹಾಬಾದ್ ಬ್ಯಾಂಕ್ – ಇಂಡಿಯನ್ ಬ್ಯಾಂಕ್‌ನೊಂದಿಗೆ ವಿಲೀನಗೊಂಡಿದೆ; ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್‌ ವಿಲೀನವಾಗಿವೆ; ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ಗಳು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನಗೊಂಡಿದೆ; ಹೆಚ್ಚುವರಿಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ, ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಭಾರತೀಯ ಮಹಿಳಾ ಬ್ಯಾಂಕ್ಅನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ವಿಲೀನಗೊಳಿಸಲಾಗಿದೆ” ಎಂದು ವಿವರಿಸಿದ್ದಾರೆ.

“ಈ ವಿಲೀನಗಳು ತಮ್ಮದೇ ಆದ ಸವಾಲುಗಳನ್ನು ಕೂಡ ಎದುರಿಸಿವೆ. ದೊಡ್ಡ ಬ್ಯಾಂಕ್‌ ಯಾವಾಗಲೂ ಉತ್ತಮವಾಗಿರುತ್ತದೆ ಎಂದಲ್ಲ. ಆದರೆ, ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಕೇಂದ್ರ ಸರ್ಕಾರದ ಪಾಲು 51%ಕ್ಕಿಂತ ಕಡಿಮೆ ಇರಬಾರದು ಎಂಬ ಕಾರಣಕ್ಕಾಗಿ ಆ ವಿಲೀನಗಳನ್ನು ಒಪ್ಪಿಕೊಳ್ಳಲಾಗಿದೆ” ಎಂದು ರಮೇಶ್ ಹೇಳಿದ್ದಾರೆ.

“ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲು 51%ಕ್ಕಿಂತ ದುರ್ಬಲಗೊಳಿಸುವ ಯಾವುದೇ ಕ್ರಮವನ್ನು ಸಂಸತ್ತಿನಲ್ಲಿ ಮತ್ತು ಹೊರಗೆ ಬಲವಾಗಿ ಪಕ್ಷವು ವಿರೋಧಿಸುತ್ತದೆ” ಎಂದು ರಮೇಶ್ ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...