ತುಮಕೂರನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಮಾತನಾಡಿದರು.

“ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆಯಾಗುವ ನಂಬಿಕೆ ಇದೆ. ಇಲ್ಲಿಯ ಸಂಸ್ಕೃತಿ, ಇಲ್ಲಿಯ ಜನ, ಇಲ್ಲಿಯ ನೆಲಕ್ಕೆ ತನ್ನದೇ ಆದ ಶಕ್ತಿ ಇದೆ. ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರಾಗಿ ಪರಿವರ್ತಿಸಲು ಮುಂದಿನ 50 ವರ್ಷಗಳ ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬೆಂಗಳೂರಿನ ಸಚಿವನಾಗಿ ನಾನು ಬೆಂಗಳೂರಿನ ಒತ್ತಡ ಕಡಿಮೆ ಮಾಡಬೇಕು ಎಂದು ಆಲೋಚನೆ ಮಾಡಿದಾಗ, ರಾಮನಗರ, ಚನ್ನಪಟ್ಟಣ, ನೆಲಮಂಗಲ, ದೊಡ್ಡಬಳ್ಳಾಪುರ ನಂತರ ತುಮಕೂರು ಪರ್ಯಾಯವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಮಕೂರು ಜಿಲ್ಲೆಯಲ್ಲಿ ಸಾವಿರಾರು ಕೋಟಿಯ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಯುವಕರು, ಮಹಿಳೆಯರು, ರೈತರು ಭಾಗವಹಿಸಿದ್ದಾರೆ. ತುಮಕೂರು ಕಲ್ಪತರುನಾಡು. ಇತಿಹಾಸ ಹೊಂದಿರುವ ಧಾರ್ಮಿಕ ಕ್ಷೇತ್ರ ಕೂಡ ಆಗಿದೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ದೂರದೃಷ್ಟಿ ಇಟ್ಟುಕೊಂಡು ತುಮಕೂರಿನಲ್ಲಿ ಕೈಗಾರಿಕಾ ಪ್ರದೇಶ ಆರಂಭಿಸಲಾಯಿತು. ಈ ಭಾಗದ ಅಭಿವೃದ್ಧಿಗೆ ಬೆಂಗಳೂರಿನಿಂದ ಬೆಳಗಾವಿ ಮೂಲಕ ಪೂನಾಗೆ ಸಾಗುವ ಕಾರಿಡಾರ್ ಗೆ ನಾವು ಆದ್ಯತೆ ನೀಡಬೇಕಿದೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

“ನೀವು ನಮಗೆ 135 ಕ್ಷೇತ್ರಗಳನ್ನು ಗೆಲ್ಲಿಸಿ ಅಧಿಕಾರ ನೀಡಿದ್ದೀರಿ. ನಾವು ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದರಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಮನೆಯೊಡತಿಯರ ಖಾತೆಗೆ 2 ಸಾವಿರ ಹಣ ತಲುಪುತ್ತಿದೆ. ನಿಮ್ಮ ಮನೆ ಗೃಹಜ್ಯೋತಿ ಯೋಜನೆ ಬೆಳಗುತ್ತಿದೆ. ಸಿದ್ದರಾಮಯ್ಯ ಅವರ ಕನಸಿನ ಅನ್ನಭಾಗ್ಯ, ನಿರುದ್ಯೋಗ ಯುವಕರಿಗಾಗಿ ಯುವನಿಧಿ ಯೋಜನೆ ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.

“ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿ ದೊಡ್ಡ ಬದಲಾವಣೆ ತರುತ್ತಿವೆ. ನಮ್ಮ ಸರ್ಕಾರ ಕೇವಲ ಗ್ಯಾರಂಟಿ ಯೋಜನೆ ಮಾತ್ರವಲ್ಲ, ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಾನು ತುಮಕೂರಿಗೆ ಬಂದಾಗೆಲ್ಲಾ ನನಗೆ ಪಾವಗಡ ನೆನಪಾಗುತ್ತದೆ. ಪಾವಗಡದ ಜನರು ನನಗೆ ಕೊಟ್ಟ ಸಹಕಾರ ಮರೆಯಲು ಸಾಧ್ಯವಿಲ್ಲ. ಇನ್ನು 10 ಸಾವಿರ ಎಕರೆ ಭೂಮಿಯನ್ನು ಸೌರ ವಿದ್ಯುತ್ ಘಟಕಕ್ಕೆ ನೀಡಲು ರೈತರು ಮುಂದೆ ಬಂದಿದ್ದಾರೆ. ಈ ಭೂಮಿಯನ್ನು ಬಳಸಿಕೊಂಡು ಇನ್ನು 2 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸರ್ಕಾರ ಕಾರ್ಯಕ್ರಮ ರೂಪಿಸುತ್ತಿದೆ” ಎಂದು ತಿಳಿಸಿದರು.

ಡಿಕೆಶಿ 9

“ತುಮಕೂರು ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕು. ಹೆಚ್ಚಿನ ಜನರು ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕ ಪ್ರದೇಶಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ದೇವರು ನಮಗೆ ವರ ಮತ್ತು ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಈ ಅವಕಾಶದಲ್ಲಿ ನಾವು ಯಾವ ರೀತಿ ಬದಲಾವಣೆ ತರುತ್ತೇವೆ ಎಂಬುದು ಮುಖ್ಯ” ಎಂದು ಡಿಸಿಎಂ ತಿಳಿಸಿದರು.

“ರೈತರ ಬದುಕಿನಲ್ಲಿ ಬದಲಾವಣೆ ತರಬೇಕ. ಈ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಯೋಜನೆ ಜಾರಿ ಮಾಡಲು ಮುಂದಾಗಿದ್ದೇವೆ. ಈ ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ. ನಿಮ್ಮ ಬದುಕು ಹಸನ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಸರ್ಕಾರದ ಎಲ್ಲ ಇಲಾಖೆ ಸಚಿವರುಗಳು ಕೂಡ ನಿಮ್ಮ ಸೇವೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...