ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ: ಸಿದ್ದರಾಮಯ್ಯ

Date:

ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾವೇರಿ ಜಿಲ್ಲೆಯ ಚಿಕ್ಕ ಬಾಸುರಲ್ಲಿ ಲಿಂಗಾಯತ ಸಂಘ ಬೆಂಗಳೂರು ವತಿಯಿಂದ ಆಯೋಜಿಸಿರುವ ಶಿವಯೋಗಿ ಸಿದ್ದರಾಮೇಶ್ವರರ 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಸರ್ಕಾರ ಎಲ್ಲ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣನವರ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 12 ನೇ ಶತಮಾನದಲ್ಲಿ ಶರಣರು ವಚನಗಳನ್ನು ರಚಿಸಿ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಜೀವನ ಮೌಲ್ಯಗಳನ್ನು ಮಾವು ಅರಿಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತವಾದರೂ ಹುಟ್ಟು ಸಾವುಗಳ ಮಧ್ಯೆ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ನಮ್ಮ ಬದುಕಿನ ಅವಧಿಯಲ್ಲಿ ನಮ್ಮ ಬದುಕನ್ನು ನಾವು ಸಾರ್ಥಕಗೊಳಿಸಿಕೊಂಡಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ವಚನ ಸಾಹಿತ್ಯ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ

“ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ. ಧರ್ಮಾಚರಣೆ, ಆಧ್ಯಾತ್ಮ ಜನರ ಭಾಷೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಜನರಿಗೆ ಓದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರ ಭಾಷೆಯಲ್ಲಿ ಇದನ್ನು ತಿಳಿಸಿದ್ದು ಬಸವಣ್ಣ” ಎಂದರು.

“ಶರಣ ಸಾಹಿತ್ಯದಲ್ಲಿ ಬಸವಣ್ಣ, ಚೆನ್ನಬಸವಣ್ಣ, ಅಕ್ಕಮಹಾದೇವಿ ಅಲ್ಲಮಪ್ರಭು, ಸಿದ್ದರಾಮೇಶ್ವರರು ಪ್ರಮುಖರು. ಬಸವಾದಿ ಶರಣರು ಮುಖ್ಯ ವಾಗಿ ನೀಡಿದ ಮೌಲ್ಯ ಕಾಯಕ ಮತ್ತು ದಾಸೋಹ. ಸತ್ಯವೇ ಸ್ವರ್ಗ, ಮಿತ್ಯವೆ ನರಕ ಎಂದ ಶರಣರು, ಮೌಢ್ಯಗಳನ್ನು ತಿರಸ್ಕರಿಸಿದ್ದರು. ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಕಂದಾಚಾರ, ಮೂಢನಂಬಿಕೆ, ಮೌಢ್ಯಗಳನ್ನು ತಿರಸ್ಕಾರ ಮಾಡಿದ್ದಾರೆ” ಎಂದು ಹೇಳಿದರು.

“ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಾಸನದಲ್ಲಿ ಸುಮಾರು 40,000 ಶಾಖೆಗಳಿದ್ದು, ಅನುದಾನ ಕೋರಿರುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಇದೇ ವೇಳೆ ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...