14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲು ಸರ್ಕಾರ ಹೊರಟಿದೆ: ಸಿ ಟಿ ರವಿ ಆರೋಪ

Date:

ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ನ.19) ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಬಡವರ ಅನ್ನಕ್ಕೂ ಕನ್ನ ಹಾಕುವ ಪರಮ ಅನ್ಯಾಯ ಇದಾಗಿದೆ ಎಂದು ಟೀಕಿಸಿದರು. ಜಾತಿ ಹುಡುಕಿ ಕಾರ್ಡ್ ರದ್ದು ಮಾಡಿದ್ದನ್ನು ಸೋಷಿಯಲ್ ಮೀಡಿಯದಲ್ಲಿ ನೋಡಿದ್ದೇನೆ. ಬಡವರ ಅನ್ನಕ್ಕೂ ಕನ್ನ ಹಾಕುವ ಸರಕಾರ ಇದೆಂದು” ಆರೋಪಿಸಿದರು.

“ಎಐಸಿಸಿ ಅಧ್ಯಕ್ಷ ಖರ್ಗೆಯವರು ನಿನ್ನೆ ಆರ್‌ಎಸ್‌ಎಸ್‌, ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಅನುಭವ ಪಕ್ವತೆಯನ್ನು ಪಡೆದುಕೊಳ್ಳಬೇಕು. ಹಿರಿತನಕ್ಕೆ ತಕ್ಕ ಮಾತು ಅದಲ್ಲ. ಅವರ ಮಾತುಗಳು ಹುಚ್ಚುನಾಯಿ ಕಡಿತಕ್ಕೆ ಒಳಗಾದವರು ಆಡುವ ಥರ ಮಾತಿನಂತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ಆ ಮಾತನಾಡಿದ್ದಾರೋ ಅಥವಾ ಕಾಂಗ್ರೆಸ್ಸಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಖರ್ಗೆಯವರ ಮೂಲಕ ಈ ಮಾತನ್ನಾಡಿಸಿದ್ದಾರೋ ಗೊತ್ತಿಲ್ಲ. ನಿಮ್ಮ ಮಾತು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಮಾತಲ್ಲ. ಹೊಡಿ, ಬಡಿ ಕೊಲ್ಲು ಎಂಬ ತಾಲಿಬಾನಿಗಳ ಮಾತಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ ಗೌರವ ದಿವಸ ಆಚರಿಸಲು ಪ್ರಧಾನಿ ಮೋದಿಜೀ ಅವರು ಕ್ರಮ ಕೈಗೊಂಡಿದ್ದಾರೆ. ಡಾ.ಅಂಬೇಡ್ಕರರು ಸತ್ತಾಗಲೂ ಕಾಂಗ್ರೆಸ್ ಸರಕಾರ ಅವಮಾನ ಮಾಡಿದ್ದನ್ನು, ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದನ್ನು ಹಾಗೂ ಕಾಂಗ್ರೆಸ್ ಪಕ್ಷವು ಅವರ ಹೆಸರನ್ನು ಭಾರತರತ್ನಕ್ಕೆ ಪರಿಗಣಿಸದೆ ಇದ್ದುದನ್ನು ಜನರಿಗೆ ತಿಳಿಸುತ್ತೇವೆ. ಸಂವಿಧಾನ ಸಂರಕ್ಷಣೆ, ಸಂವಿಧಾನದ ಸಮ್ಮಾನದ ಅಭಿಯಾನ ಕೈಗೆತ್ತಿಕೊಂಡಿದ್ದು, ಈ ಎಲ್ಲ ಸಂಗತಿಗಳನ್ನು ಜನರ ಮುಂದಿಡಲಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

“ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಕುರಿತು ನಿಜವಾದ ಪ್ರೀತಿ ಇಲ್ಲ, ನಾಟಕ ಮಾಡುತ್ತ ಬಂದಿದೆ. ಆಡಳಿತದಲ್ಲಿ ಇದ್ದಾಗ ಕೂಡ ಅದು ಸಂವಿಧಾನಕ್ಕೆ ಮತ್ತು ಅಂಬೇಡ್ಕರರಿಗೆ ಗೌರವ ಕೊಟ್ಟಿಲ್ಲ. ನಕ್ಸಲಿಸಂ ಎಂದರೆ ಹಿಂಸೆಯನ್ನು ಪ್ರಚೋದಿಸುವುದು ಮತ್ತು ಅದು ಪ್ರಜಾಪ್ರಭುತ್ವ ವಿರೋಧಿ. ನಕ್ಸಲರ ಬಗ್ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಗಳು ಮಾತ್ರ ಕರುಣೆ ತೋರಲು ಸಾಧ್ಯ. ನಕ್ಸಲರು ನಕ್ಸಲರೇ; ಅವರ ಬಗ್ಗೆ ಯಾವ ಸಿಂಪಥಿಯೂ ಇಲ್ಲ. ನಕ್ಸಲರು ಎಡಪಂಥೀಯ ಭಯೋತ್ಪಾದಕರಷ್ಟೇ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...