ಕೇಂದ್ರದಿಂದ ಶೀಘ್ರದಲ್ಲೇ ಚುನಾವಣಾ ಆಯುಕ್ತರ ನೇಮಕಾತಿ ನಿಯಂತ್ರಣ ಮಸೂದೆ: ಸಮಿತಿಯಲ್ಲಿ ಸಿಜೆಐಗೆ ಕೋಕ್

Date:

ಕೇಂದ್ರ ಕಾನೂನು ಸಚಿವಾಲಯವು , ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ಶರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದೆ.

ಸಚಿವಾಲಯ ಬಿಡುಗಡೆ ಮಾಡಿರುವ ಮಸೂದೆಯ ಕರಡು ಪಟ್ಟಿಯಲ್ಲಿರುವಂತೆ ಚುನಾವಣಾ ಮುಖ್ಯ ಆಯುಕ್ತರು ಹಾಗೂ ಇತರ ಆಯುಕ್ತರನ್ನು ರಾಷ್ಟ್ರಪತಿಗೆ ಶಿಫಾರಸ್ಸು ಮಾಡುವ ನೇಮಕಾತಿ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರನ್ನು ಹೊರಗಿಡಲಾಗಿದೆ.   

ಹೊಸ ಮಸೂದೆಯಲ್ಲಿ ಪ್ರಧಾನಮಂತ್ರಿಯವರು ಅಧ್ಯಕ್ಷರಾಗಿರುತ್ತಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಸಂಪುಟ ಸಚಿವರ ಸಮಿತಿ ಸದಸ್ಯರಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು(ಸಿಇಸಿ) ಮತ್ತು ಇತರ ಮುಖ್ಯ ಆಯುಕ್ತರ ನೇಮಕಾತಿ ಕುರಿತ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಪ್ರಧಾನ ಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉನ್ನತ ಅಧಿಕಾರದ ಸಮಿತಿಯು ಸಿಇಸಿ ಅವರನ್ನು ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ಸಿಇಸಿ ಮತ್ತು ಇಸಿಗಳ ನೇಮಕವನ್ನು ನಿಯಂತ್ರಿಸುವ ಕಾನೂನನ್ನು ಸಂಸತ್ತು ಅಂಗೀಕರಿಸುವವರೆಗೆ ಇದು ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಆದರೆ ಈಗ ಮಂಡಿಸಲಾಗುತ್ತಿರುವ ಮಸೂದೆಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರನ್ನು ಕೈಬಿಡುತ್ತಿರುವುದು ವಿವಾದಕ್ಕೆ ಈಡಾಗುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರದಿಂದ ‘ಈ ದಿನ’ ವರದಿ-1 | ಬಿಜೆಪಿ ಆರಂಭಿಸಿರುವ ’ಮೈತೇಯಿ ಗರ್ಭಿಣಿಯರ ಶಿಬಿರ’ದಲ್ಲಿ…

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ಸೇವಾ ನೇಮಕಾತಿ ನಿಯಮಗಳು ಮತ್ತು ಅಧಿಕಾರವಧಿ ಅವಧಿ) ಮಸೂದೆ, 2023 ಅನ್ನು ರಾಜ್ಯಸಭೆಯಲ್ಲಿ ಪರಿಚಯಿಸಲು ಕರಡು ಸಿದ್ಧಪಡಿಸಲಾಗಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಅಥವಾ ಇತರ ಆಯುಕ್ತರ ಹುದ್ದೆಯು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮನಾದ ಅಧಿಕಾರ ಹೊಂದಿರುತ್ತದೆ ಎಂದು ಮಸೂದೆ ಹೇಳುತ್ತದೆ. ಇವರು ‘ಚುನಾವಣೆಗಳ ನಿರ್ವಹಣೆ ಮತ್ತು ನಡವಳಿಕೆಯ ಬಗ್ಗೆ ಜ್ಞಾನ ಮತ್ತು ಅನುಭವ ಹೊಂದಿರುವ ಸಮಗ್ರತೆಯ ವ್ಯಕ್ತಿಗಳಾಗಿರಬೇಕು’ ಎಂದು ಹೇಳುತ್ತದೆ.

ಮೊದಲನೆಯದಾಗಿ, ಸಂಪುಟ ಕಾರ್ಯದರ್ಶಿ ನೇತೃತ್ವದ ಶೋಧನಾ ಸಮಿತಿ ಮತ್ತು “ಚುನಾವಣೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಜ್ಞಾನ ಮತ್ತು ಅನುಭವ ಹೊಂದಿರುವ ಕಾರ್ಯದರ್ಶಿ ಶ್ರೇಣಿಗಿಂತ ಕಡಿಮೆಯಿಲ್ಲದ ಇಬ್ಬರು ಸದಸ್ಯರನ್ನು ಒಳಗೊಂಡಂತೆ ಐದು ಸದಸ್ಯರ ಸಮಿತಿಯನ್ನು ಸಿದ್ಧಪಡಿಸಬೇಕು”.

ಇದನ್ನು ನಂತರ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ಲೋಕಸಭೆಯ ವಿರೋಧ ಪಕ್ಷದ ನಾಯಕ ಅಥವಾ ಏಕೈಕ ದೊಡ್ಡ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ಸಮಿತಿಗೆ ಕಳಿಸಬೇಕು ಎಂಬ ಅಂಶಗಳು ಮಸೂದೆಯಲ್ಲಿವೆ.

CEC

ಆಯ್ಕೆ ಸಮಿತಿಯು ತನ್ನ ಕಾರ್ಯವಿಧಾನವನ್ನು “ಪಾರದರ್ಶಕ ರೀತಿಯಲ್ಲಿ” ನಿಯಂತ್ರಿಸುತ್ತದೆ ಮತ್ತು ಅದು ಶೋಧನಾ ಸಮಿತಿಯ ಸಮಿತಿಯಲ್ಲಿ ಸೇರಿಸಲ್ಪಟ್ಟವರನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಯನ್ನು ಪರಿಗಣಿಸಬಹುದು ಎಂದು ಮಸೂದೆ ಹೇಳುತ್ತದೆ.

ಸಿಇಸಿ ಮತ್ತು ಇಸಿಗಳ ಅವಧಿಯು ಆರು ವರ್ಷಗಳವರೆಗೆ ಅಥವಾ ಅವರು 65 ವರ್ಷ ವಯಸ್ಸನ್ನು ತಲುಪುವವರೆಗೆ ಬದಲಾಗದೆ ಉಳಿಯುತ್ತದೆ. ಅವರ ವೇತನವು ಸಂಪುಟ ಕಾರ್ಯದರ್ಶಿಗೆ ಸಮನಾಗಿರುತ್ತದೆ.

ಕಳೆದ ವಾರ, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. 37 ವರ್ಷಗಳ ವೃತ್ತಿ ಜೀವನದ ನಂತರ ಭಾರತೀಯ ಆಡಳಿತ ಸೇವೆಯಿಂದ ಸ್ವಯಂ ನಿವೃತ್ತಿಯನ್ನು ಪಡೆದ ಒಂದು ದಿನದ ನಂತರ, ನವೆಂಬರ್ 19, 2022 ರಂದು ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...