ಸರ್ಕಾರಿ ಭೂಮಿ ಕಬಳಿಕೆ | ನಿ. ನ್ಯಾಯಾಧೀಶರಿಂದ ಮರುಪರಿಶೀಲನೆಗೆ ಸೂಚನೆ: ಕೃಷ್ಣ ಭೈರೇಗೌಡ

Date:

  • ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ
  • ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ ರಚನೆ

ನಕಲಿ ದಾಖಲೆ ಸಲ್ಲಿಸಿ ಬೆಂಗಳೂರು ಸುತ್ತಮುತ್ತ ಭೂಮಿ ಕಬಳಿಸಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಹಿರಿಯ ಅಧಿಕಾರಿಗಳು ಇಲ್ಲವೇ ನಿವೃತ್ತ ನ್ಯಾಯಾಧೀಶರ ಮೂಲಕ ಮರು ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಸುತ್ತಮುತ್ತ ಬೊಗಸ್ ದಾಖಲೆ ಸಲ್ಲಿಸಿ ಕಬಳಿಸಿರುವ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಭೂಮಿ ನೀಡಿರುವ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮರು ಪರಿಶೀಲನೆ ನಡೆಯಲಿದೆ. ಅದರಲ್ಲಿ ತಪ್ಪುಗಳು ಕಂಡು ಬಂದರೆ ಮತ್ತಷ್ಟು ಗಮನ ಹರಿಸಲು ನಿರ್ದೇಶಿಸಲಾಗಿದೆ.

ರೀಜಿನಲ್ ಕಮಿಷನರ್ ಅಥವಾ ನಿವೃತ್ತ ನ್ಯಾಯಾಧೀಶರ ಮೂಲಕ ಮರು ಪರಿಶೀಲನೆ ನಡೆಸಿ ವರದಿ ಪಡೆದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಲಹಂಕ ತಾಲೂಕಿನಲ್ಲೆ ಆರೇಳು ಪ್ರಕರಣ ನನ್ನ ಗಮನಕ್ಕೆ ಬಂದಿವೆ. ಅವುಗಳ ಬಗ್ಗೆಯೂ ಮರುಪರಿಶೀಲನೆ ನಡೆಯಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ

ಐದು ಗ್ಯಾರಂಟಿಗಳ ಕುರಿತು ಅಧಿಕಾರಿಗಳಿಂದ ಯಾವುದೇ ಗೊಂದಲ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಯಾವ ಅಧಿಕಾರಿಗಳೂ ಹಣಕಾಸಿನ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿಲ್ಲ. ಹಣಕಾಸಿನ ವಿಚಾರವಾಗಿ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಆಯ್ಕೆಗಳನ್ನು ಕೊಡುತ್ತಾರೆ. ಅದರಲ್ಲಿ ಯಾವುದು ಸೂಕ್ತ ಎಂಬ ಬಗ್ಗೆ ಸಚಿವ ಸಂಪುಟ ತೀರ್ಮಾನ ಮಾಡಲಿದೆ ಎಂದರು.

ಗ್ಯಾರಂಟಿಗಳನ್ನು ಜಾರಿ ಮಾಡುವ ಬಗ್ಗೆ ನಮ್ಮ ನಿರ್ಧಾರ ಇದೆ. ಜಾರಿ ವೇಳೆ ಕೆಲವು ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಯುವ ನಿಧಿ ಯೋಜನೆ ಅಡಿ ಪದವೀಧರರ ಮಾಹಿತಿ ಪಡೆಯಬೇಕಾಗುತ್ತದೆ. ಪದವಿ ಪ್ರಮಾಣ ಪತ್ರ ಸರಿ ಇದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳು ಪಾರು

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ

ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿಗೆ ನೇಮಿಸಿದ್ದ ಸಮಿತಿ ವಜಾಗೊಂಡಿದೆ. ಮುಂದಿನ ಒಂದು ತಿಂಗಳಿನಲ್ಲಿ ಹೊಸ ಸಮಿತಿ ರಚನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಮಲೆನಾಡು, ಕರಾವಳಿ ಭಾಗದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯ ಜಮೀನಿನ ಬಗ್ಗೆ ಸಾಕಷ್ಟು ಗೊಂದಲ ಇದೆ. ಅರಣ್ಯ ಇಲಾಖೆಯವರ ಜೊತೆ ಚರ್ಚೆ ಮಾಡಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ಮಾಡಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...