‘ಗ್ರೇಟರ್ ಬೆಂಗಳೂರು’ ಇಂದು ವಾಟರ್ ಬೆಂಗಳೂರಾಗಿದೆ, ಸಾಧನಾ ಸಮಾವೇಶಕ್ಕೆ ಅರ್ಥವೇನು: ವಿಜಯೇಂದ್ರ ಪ್ರಶ್ನೆ

Date:

ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ? ಇವತ್ತು ಗ್ರೇಟರ್ ಬೆಂಗಳೂರು ವಾಟರ್ ಬೆಂಗಳೂರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸ್ವಲ್ಪ ಮಳೆಯಾದರೂ ಬೆಂಗಳೂರು ಮಹಾನಗರ ನೀರಿನಲ್ಲಿ ಮುಳುಗುವಂತಾಗಿದೆ. ಡಿ.ಕೆ.ಶಿವಕುಮಾರ್ ಅವರು ದೊಡ್ಡ ಯೋಜನೆಗಳ ಮಾತನಾಡುತ್ತಾರೆ. ಬೆಂಗಳೂರು ನಗರದಲ್ಲಿ ವೇಗದಿಂದ ಮತ್ತು ಸಕಾಲದಲ್ಲಿ ಮೆಟ್ರೊ ಕಾಮಗಾರಿ ನಡೆಯುತ್ತಿಲ್ಲ. ಮೆಟ್ರೊವನ್ನು ತುಮಕೂರಿಗೆ ಒಯ್ಯುವ ಮಾತನಾಡುತ್ತಾರೆ” ಎಂದರು.

“ರಾಜ್ಯ ಸರಕಾರ, ಮುಖ್ಯಮಂತ್ರಿಗಳು ನಾಳೆ ಎರಡು ವರ್ಷಗಳ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತ ಬಂದಿದ್ದೀರಿ. ರಾಜ್ಯದಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಸತತವಾಗಿ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ರೈತರಿಗೆ ಯಾವುದೇ ಹೊಸ ಯೋಜನೆ ನೀಡಲು ಸಾಧ್ಯವಾಗಿಲ್ಲ. ಮಹಿಳೆಯರಿಗೆ ಯಾವುದೇ ಅಭಿವೃದ್ಧಿ ಯೋಜನೆ ಪ್ರಕಟಿಸಿಲ್ಲ; ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿ ಸ್ವಾಭಿಮಾನದ ಬದುಕನ್ನು ನೀಡಿಲ್ಲ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿವೃದ್ಧಿ ಸಂಪೂರ್ಣ ಸ್ಥಗಿತ

“ಅಭಿವೃದ್ಧಿ ಎಂಬುದು ಸಂಪೂರ್ಣವಾಗಿ ನಿಂತುಹೋಗಿದೆ. ಎರಡು ವರ್ಷದಲ್ಲಿ ಏನು ಮಾಡಿದ್ದಾರೆ? ಆಡಳಿತ ಪಕ್ಷದ ಶಾಸಕರು ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಬೇಸತ್ತಿರುವುದು ಜಗಜ್ಜಾಹೀರಾಗಿದೆ. ಮೊದಲ ಬಾರಿ ಗೆದ್ದ ಶಾಸಕರಾದ ನಾವು ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಶಾಲಾ ಕೊಠಡಿ ಕಟ್ಟಿಸಲೂ ಸಾಧ್ಯವಾಗುತ್ತಿಲ್ಲ. ಶಾಸಕರಿಗೆ ಆಸ್ಪತ್ರೆಗಳಿಗೆ ಮೂಲಸೌಕರ್ಯ ಕೊಡಲಾಗುತ್ತಿಲ್ಲ. ನೀರಾವರಿ ಸೌಕರ್ಯ ನೀಡಲು ಆಗುತ್ತಿಲ್ಲ. ಇಷ್ಟೆಲ್ಲ ಇದ್ದರೂ ರಾಜ್ಯ ಸರಕಾರ ದುಂದು ವೆಚ್ಚ ಮಾಡುತ್ತಿದೆ. ಸರಕಾರದ ಬಗ್ಗೆ ರಾಜ್ಯದ ಜನರು ನಗುತ್ತಿದ್ದಾರೆ. ಸರಕಾರದ ನಡವಳಿಕೆಯನ್ನು ಜನರು ಟೀಕಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಶೂನ್ಯ ಸಾಧನೆಯ ಸಾಧನಾ ಸಮಾವೇಶ

“ಇದೊಂದು ಭಂಡ ಸರಕಾರ. ಜಾಹೀರಾತು ನೀಡುವ ಜಾಹೀರಾತಿನ ಸರಕಾರ ಇದು. ಗ್ಯಾರಂಟಿಗಳನ್ನೂ ಸರಿಯಾಗಿ ತಲುಪಿಸದೆ ನಾಡಿನ ಜನರಿಗೆ ಮೋಸ ಮಾಡಿದ್ದಾರೆ. ಶೂನ್ಯ ಸಾಧನೆಯ ಸಾಧನಾ ಸಮಾವೇಶ. ರಾಜ್ಯದ ಜನರಿಗೆ ಈ ಸರಕಾರದ ಬಗ್ಗೆ ಏನೂ ಒಳ್ಳೆಯ ಅಭಿಪ್ರಾಯ ಇಲ್ಲ. ಗ್ಯಾರಂಟಿಗಳನ್ನು ಪೂರೈಸಲು ಹಣ ಹೊಂದಿಸುವುದನ್ನು ಸರಕಾರ ಮಾಡಲೇಬೇಕು. ಆದರೆ, ಗ್ಯಾರಂಟಿ ಕೊಡುವುದೇ ಸಾಧನೆಯೇ? ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕೆಲಸ ಆಗಬಾರದೇ? ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗದ ಸ್ಥಿತಿ ಬಂದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...