‘ಗೃಹಜ್ಯೋತಿ’, ‘ಅನ್ನಭಾಗ್ಯ’ ಯೋಜನೆಗಳ ವಿರುದ್ಧ ಮುಂದುವರಿದ ಬಿಜೆಪಿ ಟೀಕೆ

Date:

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಲೇ ಬಂದಿದೆ. ಈಗಾಗಲೇ ‘ಅನ್ನಭಾಗ್ಯ’, ‘ಗೃಹ ಜ್ಯೋತಿ’ ಮತ್ತು ‘ಶಕ್ತಿ’ ಯೋಜನೆ ಜಾರಿ ಮಾಡಿದ್ದು, ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆದರೆ, ಈ ಕುರಿತು ಬಿಜೆಪಿ ಮಾತ್ರ ಟೀಕೆಯನ್ನು ಮುಂದುವರಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರದ ಎಡಬಿಡಂಗಿ ‌ನಿರ್ಧಾರಗಳು” ಎಂದು ‘ಗೃಹಜ್ಯೋತಿ’ ಯೋಜನೆ ಬಗ್ಗೆ ಕುಹಕವಾಡಿದೆ. “ಗೃಹಜ್ಯೋತಿ ತಲೆಮೇಲೆ ಟೋಪಿ. ಎಲ್ಲರಿಗೂ ಫ್ರೀ 200 ಯುನಿಟ್ ವಿದ್ಯುತ್ ಎಂದು ಹೇಳಿದ್ದರು. ಆದರೆ, ಹೊಸ‌ ಮನೆ ನಿರ್ಮಿಸಿಕೊಂಡವರಿಗೆ, ಬಾಡಿಗೆದಾರರಿಗೆ ಉಚಿತ ವಿದ್ಯುತ್‌ ಇಲ್ಲ” ಎಂದು ಕುಟುಕಿದೆ.

“ಜುಲೈ ಅಥವಾ ಆಗಸ್ಟ್ ತಿಂಗಳಿಂದ ಉಚಿತ ವಿದ್ಯುತ್ ನೀಡಲಾಗುವುದು ಎಂದಿದ್ದರು. ಜೂನ್ 17 ಮತ್ತು 18 ರಂದು ಹಾಕಿದ ಅರ್ಜಿಗಳು ಸ್ವೀಕೃತಗೊಂಡಿಲ್ಲ, ಸರ್ವರ್ ಬ್ಯೂಸಿ ಅರ್ಜಿಗಳು ಸ್ವೀಕಾರ ಆಗುತ್ತಿಲ್ಲ. ಗೃಹ ಜ್ಯೋತಿ ಕೊಡುವ ಮುನ್ನವೇ ಮತ್ತೆ ಹೆಚ್ಚುವರಿ 200 ರೂ. ವಿದ್ಯುತ್ ಬಿಲ್ ಪಾವತಿಸಬೇಕುದೆ” ಎಂದು ಟೀಕಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನ್ನಭಾಗ್ಯ ಯೋಜನೆ ಹೆಸರಿನಲ್ಲಿ ಜನರ ಕಿವಿ ಮೇಲೆ ಲಾಲ್ ಬಾಗ್ ಇಡಲಾಗಿದೆ. ಎಲ್ಲರಿಗೂ 10 ಕೆಜಿ ಅಕ್ಕಿ ಉಚಿತ ಎಂದು ಕಾಂಗ್ರೆಸ್‌ ಹೇಳಿತ್ತು. ಆದರೆ, ಕಾಂಗ್ರೆಸ್‌ ಈಗ ನೀಡುತ್ತಿರುವ ಕಾರಣಗಳು 5 ಕೆಜಿ ಅಕ್ಕಿ ಎಫ್‌ಸಿಐ ಕೊಡುತ್ತಿಲ್ಲ. ಯಾವ ರಾಜ್ಯದಲ್ಲೂ ಅಕ್ಕಿ ಸಿಗುತ್ತಿಲ್ಲ. 5 ಕೆಜಿ ಕೇಂದ್ರ ಸರ್ಕಾರದ ಅಕ್ಕಿ ಜತೆ 5 ಕೆಜಿ ಅಕ್ಕಿ ಹಣ. 5 ಕೆಜಿ ಮೋದಿ ಸರ್ಕಾರದ ಅಕ್ಕಿಯಲ್ಲಿ ಎಟಿಎಂ ಸರ್ಕಾರಕ್ಕೆ 2 ಕೆಜಿ ಕಮಿಷನ್. ಪಡಿತರ ಚೀಟಿದಾರರಿಗೆ ಕೇವಲ 3 ಕೆಜಿ ಅಕ್ಕಿ ಮಾತ್ರ ವಿತರಣೆ ಮಾಡಲಾಗುತ್ತಿದೆ” ಎಂದು ಬಿಜೆಪಿ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಪ್ರತಿಪಕ್ಷಗಳ ಸಭೆಗೆ ಹಾಜರಾಗಲಿರುವ ಮಮತಾ ಬ್ಯಾನರ್ಜಿ; ಔತಣಕೂಟಕ್ಕೆ ಗೈರು

ಜನತೆ ಹೊಟ್ಟೆ ತುಂಬಾ ಊಟ ಮಾಡಲು ಯೋಚಿಸುವಂತಾಗಿದೆ

“ರಾಜ್ಯದ ಎಟಿಎಂ ಸರ್ಕಾರದ ಆಡಳಿತದಲ್ಲಿ ಜನತೆ ಹೊಟ್ಟೆ ತುಂಬಾ ಒಂದೊಪ್ಪತ್ತಿನ ಊಟ ಮಾಡಲು ಎರೆಡೆರಡು ಬಾರಿ ಯೋಚಿಸುವಂತಾಗಿದೆ. ತರಕಾರಿ, ಹಾಲು, ದಿನಸಿ ಪದಾರ್ಥಗಳ ಬೆಲೆ ಕಾಂಗ್ರೆಸ್‌ ಸರ್ಕಾರದಡಿಯಲ್ಲಿ ಏರಿದೆ, ಇನ್ನೂ ಏರಲಿದೆ. ಇಷ್ಟು ಸಾಲದ್ದಕ್ಕೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈಗ ಆ ಪಟ್ಟಿಗೆ ಮೀನುಗಳ ದರವೂ ಸೇರಿದ್ದು, ಮಾಂಸಹಾರಿಗಳ ಜೇಬು ಬರಿದಾಗುತ್ತಿದೆ” ಎಂದು ಬೆಲೆ ಏರಿಕೆ ವಿರುದ್ಧ ಬಿಜೆಪಿ ಕಿಡಿ ಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...