ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಜು. 27 ಕಡೆ ದಿನ: ಇಂಧನ ಸಚಿವ ಕೆ ಜೆ ಜಾರ್ಜ್

Date:

ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆಗೆ ಜು. 27ರಂದು ಕಡೆ ದಿನವಾಗಿ ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗೃಹಜ್ಯೋತಿಗೆ ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆ ದಿನವಾಗಿ ನಿಗದಿಪಡಿಸಲು ತೀರ್ಮಾನಿಸಲಾಗಿದ್ದು, ಮುಂದಿನ ಎರಡು ತಿಂಗಳು ವಿದ್ಯುತ್ ಅದಾಲತ್ ಮಾಡಲಾಗುತ್ತದೆ. ಗೃಹಜ್ಯೋತಿ ಸೌಲಭ್ಯ ಪಡೆಯಲು ಅಡ್ಡಿಯಾಗಿರುವ ಕೆಲವಾರು ವ್ಯಾಜ್ಯಗಳನ್ನು, ಕುಂದುಕೊರತೆಗಳನ್ನು ನಿವಾರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್‌ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯದಾದ್ಯಂತ ಒಂದು ಕೋಟಿಗೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ವಿದ್ಯುತ್‌ ಬಾಕಿ ಇರುವವರಿಗೂ ಈ ಯೋಜನೆಯ ಲಾಭ ಪಡೆಯಲು ಅನುವು ಮಾಡಿಕೊಟ್ಟು, ಬಾಕಿ ಬಿಲ್‌ ಪಾವತಿಗೆ ಸೆಪ್ಟೆಂಬರ್‌ ವರೆಗೂ ಗಡುವು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಕುಟುಂಬಕ್ಕೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನಿಗದಿ ಮಾಡಿಲ್ಲ ಎಂದು ಹೇಳಲಾಗಿತ್ತು. ಪ್ರತಿ ತಿಂಗಳ 25ರ ಒಳಗೆ ಅರ್ಜಿ ಸಲ್ಲಿಸಿದರೆ, ಮುಂದಿನ ತಿಂಗಳ ಬಿಲ್‌ ಉಚಿತ ಎಂದು ಹೇಳಲಾಗಿತ್ತು. ಆದರೆ, ಈಗ ಇದ್ದಕ್ಕಿದ್ದಂತೆ ಇಂಧನ ಇಲಾಖೆ ಸಚಿವರು ತಮ್ಮ ನಿರ್ಧಾರ ಬದಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಭಾಧ್ಯಕ್ಷ ಸ್ಥಾನಕ್ಕೇರಲು ಟ್ರೋಲರ್‌ ಕಾರಣ, ಧೈರ್ಯದಿಂದ ಮಾತನಾಡಿ: ನೂತನ ಶಾಸಕರಿಗೆ ಖಾದರ್‌ ಕಿವಿಮಾತು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...