ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’ ಯೋಜನೆ ಜು. 1ರಿಂದ ಜಾರಿ

Date:

ಚುನಾವಣೆಗೂ ಮುನ್ನ ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯನ್ನು ಈಗಾಗಲೇ ಜಾರಿ ಮಾಡಿದ್ದು, ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ ಜುಲೈ 1 ರಿಂದ ಮತ್ತೊಂದು ಮಹತ್ವದ ಯೋಜನೆ ‘ಗೃಹ ಜ್ಯೋತಿ’ ಜಾರಿಗೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್, ಚುನಾವಣೆಗೂ ಮೊದಲು ಕೊಟ್ಟ ಗ್ಯಾರಂಟಿಗಳಿಗೆ ಯೋಜನೆಯ ರೂಪ ನೀಡಿ ಜಾರಿಗೊಳಿಸುತ್ತಿದೆ. ವಿರೋಧಿಗಳು ಈ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಿದ್ದರೂ ಜನ ಮಾತ್ರ ಅದ್ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ.

ಗೃಹ ಜ್ಯೋತಿಯು ಪ್ರತಿ ಮನೆಗೆ ಮಾಸಿಕ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಯಾಗಿದ್ದು, ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಅಂದಾಜು 80 ಲಕ್ಷ ಮಂದಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಸಚಿವ ಸಂಪುಟ ಈಗಾಗಲೇ ತೀರ್ಮಾನಿಸಿದೆ. ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್‌ ಬಳಕೆಯ ಸರಾಸರಿಯ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್‌ ಒದಗಿಸಲಾಗುವುದು. ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್‌ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್‌ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.

ಗೃಹ ಜ್ಯೋತಿ ನೋಂದಣಿ
ಗೃಹ ಜ್ಯೋತಿ ಯೋಜನೆ ಒಟ್ಟು ನೋಂದಣಿ – ಜೂನ್ 30ರ ಸಂಜೆ 6 ಗಂಟೆವರೆಗೆ

ರಾಜ್ಯಾದ್ಯಂತ ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದಾರೆ. ಈ ಪೈಕಿ ಸರ್ವರ್‌ ಸಮಸ್ಯೆ ನಡುವೆಯೂ 11 ದಿನಗಳಲ್ಲಿ ಒಟ್ಟು 85,91,005 ರಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇ‌ನ್ನು 1 ಕೋಟಿಗೂ ಅಧಿಕ ಮಂದಿ ನೋಂದಣಿಗೆ ಅರ್ಜಿ ಸಲ್ಲಿಸಬೇಕಿದೆ. ಗೃಹಜ್ಯೋತಿ ಯೋಜನೆಗೆ ಬೆಸ್ಕಾಂನಲ್ಲಿ 31.55 ಲಕ್ಷ ಮಂದಿ, ಸೆಸ್ಕಾಂನಲ್ಲಿ 12.4 ಲಕ್ಷ ಮಂದಿ, ಜೆಸ್ಕಾಂನಲ್ಲಿ 8.15 ಲಕ್ಷ ಮಂದಿ ಹೆಸ್ಕಾಂನಲ್ಲಿ 15.99 ಲಕ್ಷ, ಎಚ್‌ಆರ್‌ಇಸಿಎಸ್‌ನಲ್ಲಿ 36 ಸಾವಿರ ಮಂದಿ ಹಾಗೂ ಮೆಸ್ಕಾಂನಲ್ಲಿ 9.7 ಲಕ್ಷ ಮಂದಿ ಮಂದಿ ನೋಂದಾಯಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಲ ವಿವಾದ | ನ್ಯಾಯಾಧೀಕರಣ ರಚನೆಗಿಂತ ಮಾತುಕತೆ ಮೂಲಕ ಪರಿಹಾರಕ್ಕೆ ಡಿಕೆಶಿ ಮನವಿ

ನೋಂದಣಿ ಮಾಡಿಸಲು ಗಡುವು ಇಲ್ಲ

‘ಗೃಹಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯಲು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಲ್ಲ. ಆದರೆ, ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲು ನೋಂದಣಿ ಮಾಡುವುದು ಕಡ್ಡಾಯ ಎಂದು ಇಂಧನ ಸಚಿವ ಕೆ ಜೆ ಜಾರ್ಚ್‌ ಇತ್ತೀಚೆಗೆ ಸ್ಪಷ್ಟನೆ ನೀಡಿದ್ದರು.

ನೋಂದಣಿಗೆ ಏನೇನು ಬೇಕು? ಮತ್ತು ನೋಂದಣಿ ಮಾಡುವುದು ಹೇಗೆ?

‘ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವಾಗ ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿ ಮಾಹಿತಿ (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ಮತ್ತು ಮೊಬೈಲ್‌ ನಂಬರ್‌ ಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ವೆಬ್​ಸೈಟ್​ ವಿಳಾಸ https://sevasindhugs.karnataka.gov.in. ಸಂಪರ್ಕಿಸಬಹುದು. ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ ಎಂದು ಇಂಧನ ಇಲಾಖೆ ಹೇಳಿದೆ.

  • ಎಸ್ಕಾಂ ಹೆಸರು
  • ಖಾತೆ ಸಂಖ್ಯೆ
  • ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ
  • ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ
  • ಎಸ್ಕಾಂ ಹೆಸರು1
  • ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ
  • ಆಧಾರ್ ಸಂಖ್ಯೆ
  • ಅರ್ಜಿದಾರರ ಹೆಸರು
  • ಸಂವಹನಕ್ಕಾಗಿ ದೂರವಾಣಿ ಸಂಖ್ಯೆ

ಈ ವಿವರಗಳನ್ನು ಭರ್ತಿ ಮಾಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...