ವೇಗ ಪಡೆದುಕೊಂಡ ‘ಗೃಹ ಜ್ಯೋತಿ’ ನೋಂದಣಿ : 45.61 ಲಕ್ಷ ಮಂದಿಯಿಂದ ಅರ್ಜಿ ಸಲ್ಲಿಕೆ

Date:

  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಇನ್ನೂ ನಿಗದಿಪಡಿಸದ ಕೊನೆಯ ದಿನಾಂಕ
  • ಪ್ರತ್ಯೇಕ ವೆಬ್ ಸೈಟ್ ಲಿಂಕ್ ಬಳಿಕ ವೇಗ ಪಡೆದುಕೊಂಡ ಅರ್ಜಿ ಸಲ್ಲಿಕೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ‘ಗೃಹ ಜ್ಯೋತಿ’ ನೋಂದಣಿಯ ಸರ್ವರ್​ ಸಮಸ್ಯೆ ಸರಿಯಾಗಿದ್ದು, ಇನ್ನಷ್ಟು ವೇಗ ಪಡೆದುಕೊಂಡಿದೆ. ಅಲ್ಲದೇ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಭಾನುವಾರ(ಜೂ.25) ಸರ್ಕಾರ ಇನ್ನೂ ಸರಳ ಮಾಡಿದೆ.

ಶನಿವಾರ(ಜೂ.24) ಸಂಜೆ 8 ಗಂಟೆಯವರೆಗೆ ಒಟ್ಟು 45,61,662 ಗ್ರಾಹಕರು ನೋಂದಣಿ ಮಾಡಿಕೊಂಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಇ-ಆಡಳಿತ ಇಲಾಖೆಯು ಹೊಸದಾಗಿ ಪ್ರತ್ಯೇಕ ನೋಂದಣಿ ಲಿಂಕ್ ಅನ್ನು ರಾಜ್ಯದ 2,000 ವಿದ್ಯುಚ್ಛಕ್ತಿ ಕಚೇರಿಗಳಿಗೆ ನೀಡಿದ ನಂತರ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ (ಜೂ. 23) 10,93,606 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಶನಿವಾರ (ಜೂ. 24) ಸಂಜೆ 8 ಗಂಟೆಯವರೆಗೆ 11,17,208 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ 200 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಗ್ರಾಹಕರ ಸಂಖ್ಯೆ 2.14 ಕೋಟಿ ಇದ್ದು, ಯೋಜನೆಗೆ ನೋಂದಣಿ ಮಾಡಲು ಸಾರ್ವಜನಿಕರು ಭಾರೀ ಉತ್ಸುಕತೆ ತೋರುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಚಿರತೆ ಸೆರೆಗೆ ಬೋನಿನಲ್ಲಿಟ್ಟಿದ್ದ ಮೇಕೆಯನ್ನೆ ಕದ್ದ ಕಳ್ಳರು

ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ನಾಡ ಕಚೇರಿ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಗ್ರಾಹಕರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಂಪ್ಯೂಟರ್, ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಸೈಬರ್ ಕೇಂದ್ರಗಳಲ್ಲಿ ಕೂಡ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಕೇವಲ

ಈ ಯೋಜನೆಯ ಫಲಾನುಭವಿಗಳಾಗಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಗ್ರಾಹಕರು ಆತಂಕಪಡದೆ https://sevasindhugs.karnataka.gov.in ಪೋರ್ಟಲ್ ಮೂಲಕ ನೋಂದಾಯಿಸಬಹುದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...